ಕಲ್ಲಿನಿಂದ ನ್ಯಾಚುರಲ್ ಮೆಹಂದಿ ರೆಡಿ ಮಾಡಿದ ಯುವತಿ ; ವೈರಲ್ ಆಯ್ತು ವಿಡಿಯೋ….

ಸಾಮಾನ್ಯವಾಗಿ ಗೋರಂಟಿ ಎಲೆಗಳಿಂದ ಮೆಹಂದಿಯನ್ನು ತಯಾರು ಮಾಡುತ್ತಾರೆ ಅಲ್ವಾ. ಅದು ಕೈಗೆ ಹಾಕಿದಾಗ ಗಾಢ ಬಣ್ಣ ಬರಲಿ ಎಂದು ಅದಕ್ಕೆ ಒಂದಷ್ಟು ಕೆಮಿಕಲ್ ಉತ್ಪನ್ನಗಳನ್ನು ಕೂಡಾ ಹಾಕ್ತಾರೆ. ಆದ್ರೆ ಇಲ್ಲೊಬ್ಬಳು ಯುವತಿ ಕಲ್ಲಿನಿಂದ ನ್ಯಾಚುರಲ್ ಆಗಿರುವಂತಹ ಮೆಹಂದಿಯನ್ನು ತಯಾರಿಸಿದ್ದಾಳೆ. ಈ ಕುರಿತ ವಿಡಿಯೋವೊಂದು ಇದೀಗ ವೈರಲ್ ಆಗಿತ್ತಿದ್ದು, ಅರೇ ಕಲ್ಲಿನಿಂದ ಇದು ಹೇಗಪ್ಪಾ ಮೆಹಂದಿ ರೆಡಿ ಮಾಡೋಕೆ ಸಾಧ್ಯ ಎಂದು ನೆಟ್ಟಿಗರು ತಲೆ ಕೆಡಿಸಿಕೊಂಡಿದ್ದಾರೆ. ಕೈಗಳಿಗೆ ಮೆಹಂದಿ ಹಚ್ಚುವುದೆಂದರೆ ಹೆಂಗಳೆಯರಿಗೆ ಪಂಚಪ್ರಾಣ. ಮೆಹಂದಿಯನ್ನು ಮಂಗಳಕರ ಎಂದು ಪರಿಗಣಿಸಿರುವ ಕಾರಣ ಹೆಚ್ಚಿನ ಮಹಿಳೆಯರು ಶುಭ ಕಾರ್ಯಗಳ ಸಂದರ್ಭದಲ್ಲಿ ಕೈತುಂಬಾ ಮೆಹಂದಿ ಹಾಕಿಸಿಕೊಳ್ಳುತ್ತಾರೆ. ಸಾಮಾನ್ಯವಾಗಿ ಈ ಮೆಹಂದಿಗಳನ್ನು ಗೋರಂಟಿ ಎಲೆಗಳಿಂದ ರೆಡಿ ಮಾಡ್ತಾರೆ. ಜೊತೆಗೆ ಕೈಗೆ ಹಾಕಿದ ಬಳಿಕ ಗೋರಂಟಿ ಬಣ್ಣ ಗಾಢವಾಗಿ ಮೂಡಲಿ ಎಂದು ಒಂದಷ್ಟು ಕೆಮಿಕಲ್ಗಳನ್ನು ಕೂಡಾ ಸೇರಿಸ್ತಾರೆ. ಹೀಗಿರುವಾಗ ಇಲ್ಲೊಬ್ಬಳು ರೂಬಿ ಠಾಕೂರ್ ಎಂಬಾಕೆ ಕೆಮಿಕಲ್ ಫ್ರೀ ಮೆಹಂದಿಯ ಬಗ್ಗೆ ತಿಳಿಸಿಕೊಟ್ಟಿದ್ದಾಳೆ. ಹೌದು ಹಿಮಾಚಲ ಪ್ರದೇಶದ ಆಕೆ ಅಲ್ಲಿನ ಪಹಾಡಿ ಸಂಪ್ರದಾಯದಂತೆ ಕಲ್ಲುಗಳಲ್ಲಿ ಅಂಟಿರುವ ಪಾಚಿಯಂತಹ ವಸ್ತುವಿನಿಂದ ನೈಸರ್ಗಿಕ ಮೆಹಂದಿಯನ್ನು ತಯಾರಿಸಿದ್ದು, ಈ ಕುರಿತ ವಿಡಿಯೋವೊಂದು ಇದೀಗ ವೈರಲ್ ಆಗುತ್ತಿದೆ.

ಕಲ್ಲಿನಿಂದ ನ್ಯಾಚುರಲ್ ಮೆಹಂದಿ ರೆಡಿ ಮಾಡಿದ ಯುವತಿ: ಮೆಹಂದಿಯನ್ನು ಗೋರಂಟಿ ಎಲೆಗಳಿಂದ ತಯಾರು ಮಾಡ್ತಾರೆ ಅನ್ನೋ ವಿಚಾರ ಬಹುತೇಕ ನಮಗೆಲ್ಲರಿಗೂ ಗೊತ್ತೇ ಇದೆ. ಹೀಗಿರುವಾಗ ಇಲ್ಲೊಬ್ಬಳು ಹಿಮಾಚಲ ಪ್ರದೇಶದ ಯುವತಿ ಕಲ್ಲಿನಿಂದ ನ್ಯಾಚುರಲ್ ಮೆಹಂದಿ ತೆಗೆಯುವುದು ಹೇಗೆಂಬುದನ್ನು ಹೇಳಿ ಕೊಟ್ಟಿದ್ದಾಳೆ. ಆಕೆ ಬಂಡೆ ಕಲ್ಲಿನಲ್ಲಿ ಅಂಟಿರುವಂತಹ ಪಾಚಿಯಂತಹ ವಸ್ತುವನ್ನು ತೆಗೆದು ಅದಕ್ಕೆ ಸ್ವಲ್ಪ ನೀರು ಹಾಕಿ ಚೆನ್ನಾಗಿ ಅರೆದು ಮೆಹಂದಿ ರೆಡಿ ಮಾಡಿ ಅದನ್ನು ಕೈಗೆ ಹಚ್ಚಿದ್ದಾಳೆ. ನಾಲ್ಕು ದಿನಗಳ ಹಿಂದೆ ಶೇರ್ ಮಾಡಲಾದ ಈ ವಿಡಿಯೋ 7.8 ಮಿಲಿಯನ್ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಇದು ತುಂಬಾನೇ ಅದ್ಭುತವಾಗಿದೆʼ ಎಂಬ ಕಾಮೆಂಟ್ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼಕಲ್ಲಿನಿಂದಲೂ ಮೆಹಂದಿ ತಯಾರಿಸಬಹುದೆಂದು ಇವತ್ತೇ ಗೊತ್ತಾಗಿದ್ದುʼ ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರರು ʼಬಾಲ್ಯದಲ್ಲಿ ನಾವು ಕೂಡಾ ಈ ಮೆಹಂದಿಯನ್ನು ಹಾಕಿದ್ದೇವೆʼ ಎಂದು ಹೇಳಿದ್ದಾರೆ. ಇನ್ನೋ ಅನೇಕರು ಇದು ಹೊಸ ವಿಷಯವೆಂದು ಆಶ್ಚರ್ಯಪಟ್ಟಿದ್ದಾರೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!