ಕಲ್ಲಿನಿಂದ ನ್ಯಾಚುರಲ್ ಮೆಹಂದಿ ರೆಡಿ ಮಾಡಿದ ಯುವತಿ ; ವೈರಲ್ ಆಯ್ತು ವಿಡಿಯೋ….

ಸಾಮಾನ್ಯವಾಗಿ ಗೋರಂಟಿ ಎಲೆಗಳಿಂದ ಮೆಹಂದಿಯನ್ನು ತಯಾರು ಮಾಡುತ್ತಾರೆ ಅಲ್ವಾ. ಅದು ಕೈಗೆ ಹಾಕಿದಾಗ ಗಾಢ ಬಣ್ಣ ಬರಲಿ ಎಂದು ಅದಕ್ಕೆ ಒಂದಷ್ಟು ಕೆಮಿಕಲ್ ಉತ್ಪನ್ನಗಳನ್ನು ಕೂಡಾ ಹಾಕ್ತಾರೆ. ಆದ್ರೆ ಇಲ್ಲೊಬ್ಬಳು ಯುವತಿ ಕಲ್ಲಿನಿಂದ ನ್ಯಾಚುರಲ್ ಆಗಿರುವಂತಹ ಮೆಹಂದಿಯನ್ನು ತಯಾರಿಸಿದ್ದಾಳೆ. ಈ ಕುರಿತ ವಿಡಿಯೋವೊಂದು ಇದೀಗ ವೈರಲ್ ಆಗಿತ್ತಿದ್ದು, ಅರೇ ಕಲ್ಲಿನಿಂದ ಇದು ಹೇಗಪ್ಪಾ ಮೆಹಂದಿ ರೆಡಿ ಮಾಡೋಕೆ ಸಾಧ್ಯ ಎಂದು ನೆಟ್ಟಿಗರು ತಲೆ ಕೆಡಿಸಿಕೊಂಡಿದ್ದಾರೆ. ಕೈಗಳಿಗೆ ಮೆಹಂದಿ ಹಚ್ಚುವುದೆಂದರೆ ಹೆಂಗಳೆಯರಿಗೆ ಪಂಚಪ್ರಾಣ. ಮೆಹಂದಿಯನ್ನು ಮಂಗಳಕರ ಎಂದು ಪರಿಗಣಿಸಿರುವ ಕಾರಣ ಹೆಚ್ಚಿನ ಮಹಿಳೆಯರು ಶುಭ ಕಾರ್ಯಗಳ ಸಂದರ್ಭದಲ್ಲಿ ಕೈತುಂಬಾ ಮೆಹಂದಿ ಹಾಕಿಸಿಕೊಳ್ಳುತ್ತಾರೆ. ಸಾಮಾನ್ಯವಾಗಿ ಈ ಮೆಹಂದಿಗಳನ್ನು ಗೋರಂಟಿ ಎಲೆಗಳಿಂದ ರೆಡಿ ಮಾಡ್ತಾರೆ. ಜೊತೆಗೆ ಕೈಗೆ ಹಾಕಿದ ಬಳಿಕ ಗೋರಂಟಿ ಬಣ್ಣ ಗಾಢವಾಗಿ ಮೂಡಲಿ ಎಂದು ಒಂದಷ್ಟು ಕೆಮಿಕಲ್ಗಳನ್ನು ಕೂಡಾ ಸೇರಿಸ್ತಾರೆ. ಹೀಗಿರುವಾಗ ಇಲ್ಲೊಬ್ಬಳು ರೂಬಿ ಠಾಕೂರ್ ಎಂಬಾಕೆ ಕೆಮಿಕಲ್ ಫ್ರೀ ಮೆಹಂದಿಯ ಬಗ್ಗೆ ತಿಳಿಸಿಕೊಟ್ಟಿದ್ದಾಳೆ. ಹೌದು ಹಿಮಾಚಲ ಪ್ರದೇಶದ ಆಕೆ ಅಲ್ಲಿನ ಪಹಾಡಿ ಸಂಪ್ರದಾಯದಂತೆ ಕಲ್ಲುಗಳಲ್ಲಿ ಅಂಟಿರುವ ಪಾಚಿಯಂತಹ ವಸ್ತುವಿನಿಂದ ನೈಸರ್ಗಿಕ ಮೆಹಂದಿಯನ್ನು ತಯಾರಿಸಿದ್ದು, ಈ ಕುರಿತ ವಿಡಿಯೋವೊಂದು ಇದೀಗ ವೈರಲ್ ಆಗುತ್ತಿದೆ.

ಕಲ್ಲಿನಿಂದ ನ್ಯಾಚುರಲ್ ಮೆಹಂದಿ ರೆಡಿ ಮಾಡಿದ ಯುವತಿ: ಮೆಹಂದಿಯನ್ನು ಗೋರಂಟಿ ಎಲೆಗಳಿಂದ ತಯಾರು ಮಾಡ್ತಾರೆ ಅನ್ನೋ ವಿಚಾರ ಬಹುತೇಕ ನಮಗೆಲ್ಲರಿಗೂ ಗೊತ್ತೇ ಇದೆ. ಹೀಗಿರುವಾಗ ಇಲ್ಲೊಬ್ಬಳು ಹಿಮಾಚಲ ಪ್ರದೇಶದ ಯುವತಿ ಕಲ್ಲಿನಿಂದ ನ್ಯಾಚುರಲ್ ಮೆಹಂದಿ ತೆಗೆಯುವುದು ಹೇಗೆಂಬುದನ್ನು ಹೇಳಿ ಕೊಟ್ಟಿದ್ದಾಳೆ. ಆಕೆ ಬಂಡೆ ಕಲ್ಲಿನಲ್ಲಿ ಅಂಟಿರುವಂತಹ ಪಾಚಿಯಂತಹ ವಸ್ತುವನ್ನು ತೆಗೆದು ಅದಕ್ಕೆ ಸ್ವಲ್ಪ ನೀರು ಹಾಕಿ ಚೆನ್ನಾಗಿ ಅರೆದು ಮೆಹಂದಿ ರೆಡಿ ಮಾಡಿ ಅದನ್ನು ಕೈಗೆ ಹಚ್ಚಿದ್ದಾಳೆ. ನಾಲ್ಕು ದಿನಗಳ ಹಿಂದೆ ಶೇರ್ ಮಾಡಲಾದ ಈ ವಿಡಿಯೋ 7.8 ಮಿಲಿಯನ್ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಇದು ತುಂಬಾನೇ ಅದ್ಭುತವಾಗಿದೆʼ ಎಂಬ ಕಾಮೆಂಟ್ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼಕಲ್ಲಿನಿಂದಲೂ ಮೆಹಂದಿ ತಯಾರಿಸಬಹುದೆಂದು ಇವತ್ತೇ ಗೊತ್ತಾಗಿದ್ದುʼ ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರರು ʼಬಾಲ್ಯದಲ್ಲಿ ನಾವು ಕೂಡಾ ಈ ಮೆಹಂದಿಯನ್ನು ಹಾಕಿದ್ದೇವೆʼ ಎಂದು ಹೇಳಿದ್ದಾರೆ. ಇನ್ನೋ ಅನೇಕರು ಇದು ಹೊಸ ವಿಷಯವೆಂದು ಆಶ್ಚರ್ಯಪಟ್ಟಿದ್ದಾರೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!