ಕಲ್ಲಿನಿಂದ ನ್ಯಾಚುರಲ್ ಮೆಹಂದಿ ರೆಡಿ ಮಾಡಿದ ಯುವತಿ ; ವೈರಲ್ ಆಯ್ತು ವಿಡಿಯೋ….

ಸಾಮಾನ್ಯವಾಗಿ ಗೋರಂಟಿ ಎಲೆಗಳಿಂದ ಮೆಹಂದಿಯನ್ನು ತಯಾರು ಮಾಡುತ್ತಾರೆ ಅಲ್ವಾ. ಅದು ಕೈಗೆ ಹಾಕಿದಾಗ ಗಾಢ ಬಣ್ಣ ಬರಲಿ ಎಂದು ಅದಕ್ಕೆ ಒಂದಷ್ಟು ಕೆಮಿಕಲ್ ಉತ್ಪನ್ನಗಳನ್ನು ಕೂಡಾ ಹಾಕ್ತಾರೆ. ಆದ್ರೆ ಇಲ್ಲೊಬ್ಬಳು ಯುವತಿ ಕಲ್ಲಿನಿಂದ ನ್ಯಾಚುರಲ್ ಆಗಿರುವಂತಹ ಮೆಹಂದಿಯನ್ನು ತಯಾರಿಸಿದ್ದಾಳೆ. ಈ ಕುರಿತ ವಿಡಿಯೋವೊಂದು ಇದೀಗ ವೈರಲ್ ಆಗಿತ್ತಿದ್ದು, ಅರೇ ಕಲ್ಲಿನಿಂದ ಇದು ಹೇಗಪ್ಪಾ ಮೆಹಂದಿ ರೆಡಿ ಮಾಡೋಕೆ ಸಾಧ್ಯ ಎಂದು ನೆಟ್ಟಿಗರು ತಲೆ ಕೆಡಿಸಿಕೊಂಡಿದ್ದಾರೆ. ಕೈಗಳಿಗೆ ಮೆಹಂದಿ ಹಚ್ಚುವುದೆಂದರೆ ಹೆಂಗಳೆಯರಿಗೆ ಪಂಚಪ್ರಾಣ. ಮೆಹಂದಿಯನ್ನು ಮಂಗಳಕರ ಎಂದು ಪರಿಗಣಿಸಿರುವ ಕಾರಣ ಹೆಚ್ಚಿನ ಮಹಿಳೆಯರು ಶುಭ ಕಾರ್ಯಗಳ ಸಂದರ್ಭದಲ್ಲಿ ಕೈತುಂಬಾ ಮೆಹಂದಿ ಹಾಕಿಸಿಕೊಳ್ಳುತ್ತಾರೆ. ಸಾಮಾನ್ಯವಾಗಿ ಈ ಮೆಹಂದಿಗಳನ್ನು ಗೋರಂಟಿ ಎಲೆಗಳಿಂದ ರೆಡಿ ಮಾಡ್ತಾರೆ. ಜೊತೆಗೆ ಕೈಗೆ ಹಾಕಿದ ಬಳಿಕ ಗೋರಂಟಿ ಬಣ್ಣ ಗಾಢವಾಗಿ ಮೂಡಲಿ ಎಂದು ಒಂದಷ್ಟು ಕೆಮಿಕಲ್ಗಳನ್ನು ಕೂಡಾ ಸೇರಿಸ್ತಾರೆ. ಹೀಗಿರುವಾಗ ಇಲ್ಲೊಬ್ಬಳು ರೂಬಿ ಠಾಕೂರ್ ಎಂಬಾಕೆ ಕೆಮಿಕಲ್ ಫ್ರೀ ಮೆಹಂದಿಯ ಬಗ್ಗೆ ತಿಳಿಸಿಕೊಟ್ಟಿದ್ದಾಳೆ. ಹೌದು ಹಿಮಾಚಲ ಪ್ರದೇಶದ ಆಕೆ ಅಲ್ಲಿನ ಪಹಾಡಿ ಸಂಪ್ರದಾಯದಂತೆ ಕಲ್ಲುಗಳಲ್ಲಿ ಅಂಟಿರುವ ಪಾಚಿಯಂತಹ ವಸ್ತುವಿನಿಂದ ನೈಸರ್ಗಿಕ ಮೆಹಂದಿಯನ್ನು ತಯಾರಿಸಿದ್ದು, ಈ ಕುರಿತ ವಿಡಿಯೋವೊಂದು ಇದೀಗ ವೈರಲ್ ಆಗುತ್ತಿದೆ.

ಕಲ್ಲಿನಿಂದ ನ್ಯಾಚುರಲ್ ಮೆಹಂದಿ ರೆಡಿ ಮಾಡಿದ ಯುವತಿ: ಮೆಹಂದಿಯನ್ನು ಗೋರಂಟಿ ಎಲೆಗಳಿಂದ ತಯಾರು ಮಾಡ್ತಾರೆ ಅನ್ನೋ ವಿಚಾರ ಬಹುತೇಕ ನಮಗೆಲ್ಲರಿಗೂ ಗೊತ್ತೇ ಇದೆ. ಹೀಗಿರುವಾಗ ಇಲ್ಲೊಬ್ಬಳು ಹಿಮಾಚಲ ಪ್ರದೇಶದ ಯುವತಿ ಕಲ್ಲಿನಿಂದ ನ್ಯಾಚುರಲ್ ಮೆಹಂದಿ ತೆಗೆಯುವುದು ಹೇಗೆಂಬುದನ್ನು ಹೇಳಿ ಕೊಟ್ಟಿದ್ದಾಳೆ. ಆಕೆ ಬಂಡೆ ಕಲ್ಲಿನಲ್ಲಿ ಅಂಟಿರುವಂತಹ ಪಾಚಿಯಂತಹ ವಸ್ತುವನ್ನು ತೆಗೆದು ಅದಕ್ಕೆ ಸ್ವಲ್ಪ ನೀರು ಹಾಕಿ ಚೆನ್ನಾಗಿ ಅರೆದು ಮೆಹಂದಿ ರೆಡಿ ಮಾಡಿ ಅದನ್ನು ಕೈಗೆ ಹಚ್ಚಿದ್ದಾಳೆ. ನಾಲ್ಕು ದಿನಗಳ ಹಿಂದೆ ಶೇರ್ ಮಾಡಲಾದ ಈ ವಿಡಿಯೋ 7.8 ಮಿಲಿಯನ್ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಇದು ತುಂಬಾನೇ ಅದ್ಭುತವಾಗಿದೆʼ ಎಂಬ ಕಾಮೆಂಟ್ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼಕಲ್ಲಿನಿಂದಲೂ ಮೆಹಂದಿ ತಯಾರಿಸಬಹುದೆಂದು ಇವತ್ತೇ ಗೊತ್ತಾಗಿದ್ದುʼ ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರರು ʼಬಾಲ್ಯದಲ್ಲಿ ನಾವು ಕೂಡಾ ಈ ಮೆಹಂದಿಯನ್ನು ಹಾಕಿದ್ದೇವೆʼ ಎಂದು ಹೇಳಿದ್ದಾರೆ. ಇನ್ನೋ ಅನೇಕರು ಇದು ಹೊಸ ವಿಷಯವೆಂದು ಆಶ್ಚರ್ಯಪಟ್ಟಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!