ಟೆಸ್ಟ್ ಕ್ರಿಕೆಟ್ಗೆ ಕಿಂಗ್ ಕೊಹ್ಲಿ ವಿದಾಯ….

2011 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ಟೆಸ್ಟ್ ಕೆರಿಯರ್ ಆರಂಭಿಸಿದ್ದ ವಿರಾಟ್ ಕೊಹ್ಲಿ, 2014 ರಲ್ಲಿ ಭಾರತ ಟೆಸ್ಟ್ ತಂಡದ ನಾಯಕರಾಗಿ ಆಯ್ಕೆಯಾಗಿದ್ದರು. ಇದಾದ ಬಳಿಕ ಅವರು ಹಿಂತಿರುಗಿ ನೋಡಿಲ್ಲ ಎನ್ನಬಹುದು. ಟೀಮ್ ಇಂಡಿಯಾ ಪರ 123 ಟೆಸ್ಟ್ ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಅವರು 210 ಇನಿಂಗ್ಸ್ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ 16608 ಎಸೆತಗಳನ್ನು ಎದುರಿಸಿರುವ ಕೊಹ್ಲಿ ಅವರು 46.9 ಸರಾಸರಿಯಲ್ಲಿ ಒಟ್ಟು 9230 ರನ್ ಕಲೆಹಾಕಿದ್ದಾರೆ. ಇದರ ನಡುವೆ 30 ಶತಕ ಹಾಗೂ 31 ಅರ್ಧಶತಕಗಳನ್ನು ಬಾರಿಸಿದ್ದಾರೆ. ಮತ್ತೊಂದು ಮೈಲಿಗಲ್ಲೆಂದರೆ , ಟೆಸ್ಟ್ ಕ್ರಿಕೆಟ್ ನಲ್ಲಿ 254 ಅವರ ವೈಯಕ್ತಿಕ ಗರಿಷ್ಠ ಸ್ಕೋರ್ ಆಗಿದೆ.

ಹಾಗೆಯೇ ಭಾರತ ಟೆಸ್ಟ್ ತಂಡವನ್ನು 68 ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಕೊಹ್ಲಿ ನಾಯಕತ್ವದಲ್ಲಿ ಟೀಮ್ ಇಂಡಿಯಾ 40 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಕೇವಲ 17 ಮ್ಯಾಚ್ಗಳಲ್ಲಿ ಮಾತ್ರ ಸೋಲನುಭವಿಸಿದೆ. ಇನ್ನು 11 ಪಂದ್ಯಗಳಲ್ಲಿ ಭಾರತ ತಂಡವು ಡ್ರಾ ಸಾಧಿಸಿದೆ. ಈ ಮೂಲಕ ವಿರಾಟ್ ಕೊಹ್ಲಿ ಭಾರತ ಟೆಸ್ಟ್ ತಂಡದ ಅತ್ಯಂತ ಯಶಸ್ವಿ ನಾಯಕ ಎನಿಸಿಕೊಂಡಿದ್ದಾರೆ.
ಇದೀಗ 14 ವರ್ಷಗಳ ತಮ್ಮ ಟೆಸ್ಟ್ ಕೆರಿಯರ್ಗೆ ವಿರಾಮ ಇಟ್ಟಿರುವ ಕಿಂಗ್ ಕೊಹ್ಲಿ ಏಕದಿನ ಕ್ರಿಕೆಟ್ನಲ್ಲಿ ಮಾತ್ರ ಮುಂದುವರೆಯುವುದಾಗಿ ತಿಳಿಸಿದ್ದಾರೆ.

ವಿರಾಟ್ ಕೊಹ್ಲಿ ಅವರ ನಿವೃತ್ತಿ ಪತ್ರ:

ಟೆಸ್ಟ್ ಕ್ರಿಕೆಟ್ನಲ್ಲಿ ಮೊದಲ ಬಾರಿಗೆ ಬ್ಯಾಗಿ ಬ್ಲೂ ಕ್ಯಾಪ್ ಧರಿಸಿ 14 ವರ್ಷಗಳು ಕಳೆದಿವೆ. ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಈ ಸ್ವರೂಪವು ನನ್ನನ್ನು ಈ ಪ್ರಯಾಣಕ್ಕೆ ಕರೆದೊಯ್ಯುತ್ತದೆ ಎಂದು ನಾನು ಎಂದಿಗೂ ಊಹಿಸಿರಲಿಲ್ಲ. ಇದು ನನ್ನನ್ನು ಪರೀಕ್ಷಿಸಿದೆ, ನನ್ನನ್ನು ರೂಪಿಸಿದೆ ಮತ್ತು ನಾನು ಜೀವನಪರ್ಯಂತ ಸಾಗಿಸುವ ಪಾಠಗಳನ್ನು ಕಲಿಸಿದೆ.

ಬಿಳಿಯ ಉಡುಪಿನಲ್ಲಿ ಆಡುವುದರಲ್ಲಿ ಆಳವಾದ ವೈಯಕ್ತಿಕ ಅಂಶವಿದೆ. ಶಾಂತವಾದ ಜಂಜಾಟ, ದೀರ್ಘ ದಿನಗಳು, ಯಾರೂ ನೋಡದ ಸಣ್ಣ ಕ್ಷಣಗಳು. ಇವೆಲ್ಲವೂ ನಿಮ್ಮೊಂದಿಗೆ ಶಾಶ್ವತವಾಗಿ ಉಳಿಯುತ್ತವೆ. ನಾನು ಈ ಸ್ವರೂಪದಿಂದ ದೂರ ಸರಿಯುತ್ತಿರುವುದು ಸುಲಭದ ನಿರ್ಧಾರವಲ್ಲ. ಆದರೆ ಇದುವೇ ಸರಿ ಎಂದು ಅನಿಸುತ್ತದೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!