ಕಾಂಗ್ರೆಸ್ ನಾಯಕರು ದೇಶದ ಜೊತೆ ನಿಲ್ಲಬೇಕಿತ್ತು ; ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ.

ಬೆಂಗಳೂರು : ಅಪರೇಷನ್ ಸಿಂಧೂರ ಕಾರ್ಯಾಚರಣೆ ವೇಳೆಯೇ ಕದನ ವಿರಾಮಕ್ಕೆ ಒಪ್ಪಿದ ಕೇಂದ್ರ ಸರ್ಕಾರದ ನಡೆ ಕಾಂಗ್ರೆಸ್ ನಾಯಕರು ಟೀಕಿಸುತ್ತಿದ್ದು, ಈ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ದೇಶಕ್ಕೆ ಸಂಕಷ್ಟ ಬಂದಾಗ ದೇಶದ ಜೊತೆ ಕಾಂಗ್ರೆಸ್ ನಿಲ್ಲಲ್ಲ ಎಂದಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಕಾಂಗ್ರೆಸ್ ರಕ್ತ ದೇಶ ವಿರೋಧಿ ರಕ್ತ. ಅಪರೇಷನ್ ಸಿಂಧೂರ ಕಾರ್ಯಾಚರಣೆ ಬಗ್ಗೆ ಕಾಂಗ್ರೆಸ್ ನವರು ಜೋಕ್ ಮಾಡುತ್ತಿದ್ದಾರೆ. ಕಾಂಗ್ರೆಸ್ ದೇಶದ ಜೊತೆ. ನಿಲ್ಲಬೇಕಿತ್ತು. ಸೇನೆಗೆ ಅವರ ಬೆಂಬಲ ಕೊಡಬೇಕಿತ್ತು. ಇಲ್ಲವೇ ಕಾಂಗ್ರೆಸ್ ನಾಯಕರು ಬಾಯಿ ಮುಚ್ಚಿಕೊಂಡು ಇರಬೇಕಿತ್ತು. ಪಾಕ್ ಸರ್ಕಾರ ಉಗ್ರರ ಕುಟುಂಬಗಳಿಗೆ ಪರಿಹಾರ ಕೊಟ್ಟಿದೆ. ಇದನ್ನು ನೋಡಿಯಾದರೂ ಕಾಂಗ್ರೆಸ್ ನವರು ಸುಮ್ಮನಿರಬೇಕಿತ್ತು ದೇಶಕ್ಕೆ ಸಂಕಷ್ಟ ಬಂದಾಗ ಕಾಂಗ್ರೆಸ್ ದೇಶದ ಜೊತೆ ನಿಲ್ಲಲ್ಲ ಕಾಂಗ್ರೆಸ್ ನಾಯಕ ವಿದೇಶಕ್ಕೆ ಹೋಗಿ ಭಾರತದ ವಿರುದ್ದ ಮಾತನಾಡುತ್ತಾರೆ. ಕೇಂದ್ರ ಸರ್ಕಾರವನ್ನ ತೆಗೆಯುವುದು ಹೇಗೆ ಎಂದು ಚರ್ಚಿಸುತ್ತಾರೆ. ಕಾಂಗ್ರೆಸ್ ಮಾನಸಿಕತೆ ದೇಶದ ಜನರಿಗೆ ಗೊತ್ತಾಗಿದೆ ಎಂದು ವಾಗ್ದಾಳಿ ನಡೆಸಿದರು.

ಶಾಸಕ ಕೊತ್ತೂರು ಮಂಜುನಾಥ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಶೋಭಾ ಕರಂದ್ಲಾಜೆ, ಮಂಜುನಾಥ್ ನಾಲಿಗೆಗೂ ಮೆದಳಿಗೂ ಸಂಪರ್ಕ ಇಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಇಂತವರು ಹಲವರಿದ್ದಾರೆ. ಕೆಲವರು ಟೋಪಿಯನ್ನ ಉಲ್ಟಾ ಹಾಕಿಕೊಳ್ಳುತ್ತಾರೆ ಎಂದು ಟೀಕಿಸಿದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!