ಗ್ಯಾಸ್ ಸಿಲಿಂಡರ್ ಸ್ಫೋ*ಟ, ಐವರಿಗೆ ಗಾಯ ಹುಣಸೂರು ನಗರದಲ್ಲಿ ನಡೆದಿದೆ.

ಹುಣಸೂರು: ಗ್ಯಾಸ್ ಸಿಲಿಂಡರ್ ಅವಘಡ ಸಂಭವಿಸಿದ್ದು, ಮನೆಯಲ್ಲಿದ್ದ ಇಬ್ಬರ ಸಹಾಯಕ್ಕೆ ಬಂದ ಪಕ್ಕದ ಮನೆಯ ಮೂವರು ಸೇರಿದಂತೆ ಒಟ್ಟು ಐವರಿಗೆ ಸುಟ್ಟ ಗಾಯಗಳು ಉಂಟಾಗಿವೆ. ಹುಣಸೂರು ನಗರದ ಕಲ್ಕುಣಿಕೆಯ ಕುರ್ಜನ್ ಬೀದಿಯ ವಠಾರದಲ್ಲಿ ಈ ಘಟನೆ ನಡೆದಿದೆ.

ಗ್ಯಾಸ್ ಸಿಲಿಂಡ‌ರ್ ಬದಲಾಯಿಸುವ ವೇಳೆ ಗ್ಯಾಸ್ ಸೋರಿಕೆಯಾಗಿ ಬೆಂಕಿ ಹತ್ತಿಕೊಂಡ ಪರಿಣಾಮ ಐವರಿಗೆ ಗಾಯವಾಗಿದೆ. ನಿಂಗರಾಜು ಎಂಬುವರ ಮನೆಯಲ್ಲಿ ಘಟನೆ ನಡೆದಿದ್ದು, ನಿಂಗರಾಜು ಪತ್ನಿ ಜ್ಯೋತಿ, ಪಕ್ಕದ ಮನೆಯ ರಾಣಿಯಮ್ಮ, ಶೀಲ ಮತ್ತು ನಾಗಮ್ಮಗೆ ಗಾಯಗಳಾಗಿವೆ. ಗಾಯಗೊಂಡವರಿಗೆ ಮೈಸೂರಿನ ಕೆ ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಿಂಗರಾಜುರವರ ಮನೆಯಲ್ಲಿ ಸಿಲಿಂಡ‌ರ್ ಬದಲಾಯಿಸುವ ವೇಳೆ ಗ್ಯಾಸ್ ಸೋರಿಕೆಯಾಗಿ ದಂಪತಿಗೆ ಮೊದಲು ಬೆಂಕಿ ಹತ್ತಿಕೊಂಡಿತ್ತು. ಬೆಂಕಿ ಹತ್ತಿಕೊಂಡಿದ್ದರಿಂದ ದಂಪತಿ ಕಿರುಚಾಡಿದ್ದಾರೆ. ಆಗ ಜೋರಾದ ಶಬ್ದ ಕೇಳಿದ ಪಕ್ಕದ ಮನೆಯವರಾದ ರಾಣಿಯಮ್ಮ, ಶೀಲ, ನಾಗಮ್ಮರವರು ನೋಡಲು ಹೋಗುತ್ತಿದ್ದಂತೆ ಅವರ ಬಟ್ಟೆಗಳಿಗೆ ಬೆಂಕಿ ಹತ್ತಿಕೊಂಡಿದೆ.

ಈ ಸಂಬಂಧ ಹುಣಸೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಸ್ಪತ್ರೆಗೆ ಶಾಸಕ ಜಿ ಡಿ ಹರೀಶ್‌ ಗೌಡ ಭೇಟಿ ನೀಡಿದ್ದು, ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!