ರಾಮನಗರ ದಿವ್ಯಾಂಗ ಬಾಲಕಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!

ರಾಮನಗರ : ರಾಮನಗರದಲ್ಲಿ ನಡೆದಿದ್ದ ದಿವ್ಯಾಂಗ ಬಾಲಕಿಯ ಕೊ*ಲೆ ಪ್ರಕರಣ ರಾಜ್ಯದಲ್ಲಿ ಸಾಕಷ್ಟು ಸಂಚಲನಕ್ಕೆ ಕಾರಣವಾಗಿತ್ತು. ಮರ್ಡ*ರ್ ಕೇಸ್ ದಾಖಲಿಸಿಕೊಂಡಿದ್ದ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ್ದರು. ಆದರೆ ಇದೀಗ ಮರ್ಡ*ರ್ ಕೇಸ್ ಬಿಗ್ ಟ್ವಿಸ್ಟ್ ಸಿಕ್ಕಿದೆ. ಅದೇನೆಂದರೆ ಅತ್ಯಾ*ಚಾರ ನಡೆದಿಲ್ಲವೆಂಬುದು ಎಫ್ಎಸ್ಎಲ್ ವರದಿಯಲ್ಲಿ ಧೃಡಪಟ್ಟಿದೆ. ಜೊತೆಗೆ ಪ್ರಕರಣದ ತನಿಖೆ ಬಗ್ಗೆ ಅಲೆಮಾರಿ ಹಕ್ಕಿಪಿಕ್ಕಿ ಬುಡುಕಟ್ಟು ಸಮುದಾಯದ ರಾಜ್ಯಾಧ್ಯಕ್ಷ ಜಗ್ಗು ಅನುಮಾನ ವ್ಯಕ್ತಪಡಿಸಿದ್ದಾರೆ.

ರಾಮನಗರ ತಾಲೂಕಿನ ಭದ್ರಾಪುರ ಗ್ರಾಮದ ಹಕ್ಕಿಪಿಕ್ಕಿ ಕಾಲೋನಿಯಲ್ಲಿ ನಡೆದಿದ್ದ 14 ವರ್ಷದ ದಿವ್ಯಾಂಗ ಬಾಲಕಿಯ ಕೊ*ಲೆ ಪ್ರಕರಣಕ್ಕೆ ಬಿಗ್ ಟಿಸ್ಟ್ ಸಿಕ್ಕಿದ್ದು, ಮೇಲ್ನೋಟಕ್ಕೆ ಬಾಲಕಿಯದ್ದು ಕೊ*ಲೆ ಅಲ್ಲ, ರೈಲು ಡಿಕ್ಕಿ ಹೊಡೆದು ಸಾ*ವನ್ನಪ್ಪಿದ್ದಾಳೆ. ಜೊತೆಗೆ ಬಾಲಕಿಯ ಮೇಲೆ ಯಾವುದೇ ಅತ್ಯಾ*ಚಾರ ನಡೆದಿಲ್ಲವೆಂಬುವುದು ಎಫ್ಎಸ್ಎಲ್ ವರದಿಯಲ್ಲಿ ಧೃಡವಾಗಿದೆ. ಭದ್ರಾಪುರ ಗ್ರಾಮದ ಹಕ್ಕಿಪಿಕ್ಕಿ ಕಾಲೋನಿಯ 14 ವರ್ಷದ ದಿವ್ಯಾಂಗ ಬಾಲಕಿ ಮೇ 11 ರ ಸಂಜೆಯಿಂದ ಏಕಾಏಕಿ ನಾಪತ್ತೆಯಾಗಿದ್ದಳು. ಆನಂತರ ಮೇ 12 ರಂದು ಹಕ್ಕಿಪಿಕ್ಕಿ ಕಾಲೋನಿ ಬಳಿಯ ರೈಲ್ವೆ ಹಳಿ ಪಕ್ಕದಲ್ಲಿ ಶವವಾಗಿ ಪತ್ತೆಯಾಗಿದ್ದಳು. ಬಾಲಕಿಯ ಸಾ*ವು ಸಾಕಷ್ಟು ಅನುಮಾನಕ್ಕೆ ಕಾರಣವಾಗಿತ್ತು. ಅತ್ಯಾ*ಚಾರ ಎಸಗಿ ಕೊಲೆ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದರು. ಈ ನಿಟ್ಟಿನಲ್ಲಿ ಬಿಡದಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.


ವಿಶೇಷ ತಂಡಗಳನ್ನ ರಚನೆ ಮಾಡಿ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ್ದ ಬಿಡದಿ ಪೊಲೀಸರು, ಮರಣೋತ್ತರ ಪರೀಕ್ಷೆ ಜೊತೆಗೆ ಎಫ್ಎಸ್ಎಲ್ಗೂ ಕಳುಹಿಸಿದ್ದರು. ಇದೀಗ ಎಫ್ಎಸ್ಎಲ್ ವರದಿ ಬಂದಿದ್ದು, ಬಾಲಕಿಯ ಮೇಲೆ ಯಾವುದೇ ಅತ್ಯಾ*ಚಾರ ನಡೆದಿರುವುದು ಧೃಡವಾಗಿಲ್ಲ. ಜೊತೆ ಬಾಲಕಿಯ ಮೇಲೆ ಯಾವುದೇ ಸುಟ್ಟ ಗುರುತುಗಳು ಪತ್ತೆಯಾಗಿಲ್ಲ. ಅಲ್ಲದೆ ಸಿಸಿ ಟಿವಿ ಆಧಾರದ ಮೇಲೆ ಮೇಲ್ನೋಟಕ್ಕೆ ರೈಲು ಡಿಕ್ಕಿ ಹೊಡೆದು ಬಾಲಕಿ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.
ಇನ್ನು ಪೊಲೀಸರ ಕೈ ಸೇರಿರುವ FSL ವರದಿಯಿಂದ ಬಾಲಕಿಯ ಮೇಲೆ ಅತ್ಯಾ*ಚಾರ ನಡೆದಿಲ್ಲದಿರುವುದು ಗೊತ್ತಾಗಿದೆ. ಆದರೆ ಮರಣೋತ್ತರ ಪರೀಕ್ಷೆ ವರದಿಯಿಂದ ಇದು ಆತ್ಮ*ಹತ್ಯೆಯಾ ಅಥವಾ ಕೊ*ಲೆಯಾ ಎಂಬುವುದು ತಿಳಿಯಲಿದೆ. ಮರಣೋತ್ತರ ವರದಿ ಸೋಮವಾರ ಪೊಲೀಸರ ಕೈ ಸೇರಲಿದೆ. ಆ ಬಳಿಕ ಸಾ*ವಿಗೆ ನಿಖರ ಕಾರಣ ತಿಳಿಯಲಿದೆ. ಇನ್ನು ಬಾಲಕಿಯ ಸಾ*ವಿನ ಸುದ್ದಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕೂಡ ಕ್ರಮ ತೆಗೆದುಕೊಳ್ಳಲು ಪೊಲೀಸರು ಮುಂದಾಗಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!