RCB ಅಭಿಮಾನಿಗಳ ಈ ಅಭಿಮಾನಕ್ಕೆ ಕೊನೆಯೇ ಇಲ್ಲ….

ವಿರಾಟ್ ಕೊಹ್ಲಿ ,ತಮ್ಮ ವಿಶೇಷವಾದ ಬ್ಯಾಟಿಂಗ್ ಶೈಲಿ, ರೂಡಿಸಿಕೊಂಡಿದ್ದಂತಹ ನಿಯಮಗಳು, ಆಟದ ಮೇಲೆ ಇರುವ ಮಾನದಂಡಗಳು, ಯಾವುದೇ ಕ್ಲಿಷ್ಟಕರ ಸಂದರ್ಭವನ್ನು ಅಳವಡಿಸಿಕೊಳ್ಳುತ್ತಿದ್ದ ರೀತಿ, ಉತ್ತಮ ನಾಯಕರಾಗಿ ಮುನ್ನಡೆಸುತ್ತಿದ್ದ ರೀತಿ ಇವೆಲ್ಲವೂ ಸಹ ಇಂಡಿಯನ್ ಟೆಸ್ಟ್ ಕ್ರಿಕೆಟ್ ಅಭಿಮಾನಿಗಳಿಗೆ ಹೊಸ ಹುರುಪನ್ನು ತಂದುಕೊಟ್ಟಿತು. ಅಲ್ಲದೆ ಕೋಟ್ಯಾಂತರ ಅಭಿಮಾನಿಗಳಿಗೆ ವಿರಾಟ್ ಕೊಹ್ಲಿ ಅವರು ಆದರ್ಶ ವ್ಯಕ್ತಿಯಾದರು. ಅವರ ವ್ಯಕ್ತಿತ್ವ ಚಿರಕಾಲ ಸ್ಮರಿಸುವಂಥದ್ದು, ಅದರಿಂದಲೇ ಅವರು ವಿಶ್ವದೆಲ್ಲೆಡೆ ಅಭಿಮಾನಿಗಳನ್ನು ಹೊಂದಿದ್ದಾರೆ. ಈಗ ಟೆಸ್ಟ್ ಕ್ರಿಕೆಟ್ ಗೆ ವಿದಾಯವನ್ನು ಘೋಷಿಸಿದ್ದು, ಅಭಿಮಾನಿಗಳು ನಮ್ಮ ನೆಚ್ಚಿನ ಆಟಗಾರನಿಗೆ ಅತ್ಯಂತ ಗೌರವಪೂರ್ಣವಾಗಿ ಬಿಳ್ಕೊಡುಗೆಯನ್ನು ನೀಡಿದ್ದಾರೆ.

ಇಡೀ ವಿಶ್ವದಲ್ಲೇ ಅತ್ಯಂತ ನಿಷ್ಠಾವಂತ ಅಭಿಮಾನಿಗಳಿದ್ದರೆ ಅದು RCB ಫ್ಯಾನ್ಸ್. ಹೀಗೆ ಅಂದಿರುವುದು ಮತ್ಯಾರೂ ಅಲ್ಲ. ಟೀಮ್ ಇಂಡಿಯಾದ ಮಾಜಿ ಆಟಗಾರ ಇರ್ಫಾನ್ ಪಠಾಣ್. ಅಂತಹದೊಂದು ವಿಶೇಷ ಅಭಿಮಾನಿಗಳ ಬಳಗವನ್ನೇ ಆರ್ಸಿಬಿ ಸಂಪಾದಿಸಿಕೊಂಡಿದೆ. ಈ ಅಭಿಮಾನಿಗಳೇ ಇದೀಗ ಮತ್ತೊಮ್ಮೆ ಅಭಿಮಾನಿಗಳೆಂದರೆ ಹೇಗಿರಬೇಕೆಂದು ಇಡೀ ವಿಶ್ವಕ್ಕೆ ಸಾರಿದೆ. ಅದು ಕೂಡ ತನ್ನ ನೆಚ್ಚಿನ ಆಟಗಾರನಿಗೆ ವಿಶೇಷ ಗೌರವ ಸಲ್ಲಿಸುವ ಮೂಲಕ. ಹೌದು, ಟೆಸ್ಟ್ ಕ್ರಿಕೆಟ್ನ ಅತ್ಯಂತ ಯಶಸ್ವಿ ನಾಯಕರಲ್ಲಿ ಒಬ್ಬರೆನಿಸಿಕೊಂಡಿರುವ ವಿರಾಟ್ ಕೊಹ್ಲಿ ದೀರ್ಘಾವಧಿ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಈ ನಿವೃತ್ತಿ ಘೋಷಣೆ ಮೂಡಿಬಂದಿದ್ದು ಸೋಷಿಯಲ್ ಮೀಡಿಯಾದಲ್ಲಿ. ಅದಕ್ಕಾಗಿ ಫ್ಯಾನ್ಸ್ ಗಳು ಸಹ ಬಿಳಿ ಜರ್ಸಿಯಲ್ಲಿ ಚಿನ್ನಸ್ವಾಮಿ ಸ್ಟೇಡಿಯಂಗೆ ಆಗಮಿಸಿ ವಿರಾಟ್ ಕೊಹ್ಲಿಯವರಿಗೆ ತಮ್ಮ ಪ್ರೀತಿಯನ್ನು ತೋರಿಸಿದ್ದಾರೆ.

14 ವರ್ಷಗಳ ಕಾಲ ಭಾರತ ಟೆಸ್ಟ್ ತಂಡವನ್ನು ಪ್ರತಿನಿಧಿಸಿದ್ದ ವಿರಾಟ್ ಕೊಹ್ಲಿ ವಿದಾಯ ಪಂದ್ಯದ ಮೂಲಕ ಗುಡ್ ಬೈ ಹೇಳಬೇಕಿತ್ತು. ಆದರೆ ಬಿಸಿಸಿಐ ಅಂತಹದೊಂದು ಪಂದ್ಯವನ್ನು ಏರ್ಪಡಿಸಲಿಲ್ಲ. ಹೀಗಾಗಿಯೇ ಆರ್ಸಿಬಿ ಅಭಿಮಾನಿಗಳು ತನ್ನ ನೆಚ್ಚಿನ ಟೆಸ್ಟ್ ಆಟಗಾರನಿಗೆ ಗೌರವಪೂರ್ವಕ ವಿದಾಯ ಹೇಳಲು ಯೋಜನೆ ರೂಪಿಸಿದರು. ಅದಕ್ಕಾಗಿ ನೀಡಿದ್ದು ಒಂದೇ ಒಂದು ಕರೆಯಷ್ಟೇ. ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದ ವೇಳೆ ಎಲ್ಲರೂ ವೈಟ್ ಜೆರ್ಸಿಯಲ್ಲಿ ಬನ್ನಿ ಎಂದು ಆರ್ಸಿಬಿ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಮನವಿ ಮಾಡಿದ್ದರು. ಈ ಒಂದು ಮನವಿಗೆ ಸಿಕ್ಕಿದ ಸ್ಪಂದನೆ ಅಭೂತಪೂರ್ವ. ಇದಕ್ಕೆ ಸಾಕ್ಷಿಯೇ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶನಿವಾರ ಕಂಡು ಬಂದ ವೈಟ್ ಜೆರ್ಸಿಗಳು.

ಆರ್ಸಿಬಿ ತಂಡದ ಬಹುತೇಕ ಅಭಿಮಾನಿಗಳು ವೈಟ್ ಜೆರ್ಸಿಯಲ್ಲಿ ಆಗಮಿಸಿದ್ದರು. ಇನ್ನೂ ಕೆಲವರು ಬಳಿ ಉಡುಪಿನಲ್ಲಿ ಕಾಣಿಸಿಕೊಂಡರು. ಈ ಮೂಲಕ ವಿರಾಟ್ ಕೊಹ್ಲಿಯನ್ನು ತಾವೆಷ್ಟು ಪ್ರೀತಿಸುತ್ತೇವೆ ಎಂಬುದನ್ನು ವಿಶ್ವಕ್ಕೆ ಸಾರಿದರು. ಹೌದು, ಇಡೀ ವಿಶ್ವದಲ್ಲೇ ಅತ್ಯಂತ ನಿಷ್ಠಾವಂತ ಅಭಿಮಾನಿಗಳಿದ್ದರೆ ಅದು RCB ಫ್ಯಾನ್ಸ್ ಮಾತ್ರ. ಆ ಅಭಿಮಾನಿಗಳ ಅಭಿಮಾನ ಹೇಗಿರುತ್ತೆ ಎಂಬುದಕ್ಕೆ ಶನಿವಾರ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಸಾಕ್ಷಿಯಾಗಿತ್ತು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!