ಮೈಸೂರು ವಿವಿ ಸಂಶೋಧನಾ ವಿದ್ಯಾರ್ಥಿಗಳ ಸಂಘಟನೆಯಿಂದ ಅಹೋರಾತ್ರಿ ಧರಣಿ.

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಸಂಶೋಧನಾ ಮಾರ್ಗದರ್ಶಕರ ಕೊರತೆಯಿದ್ದು, ಹೊಸದಾಗಿ ಪಿಎಚ್.ಡಿ ಪ್ರವೇಶಾತಿ ಪಡೆ ಯುವ ವಿದ್ಯಾರ್ಥಿಗಳಿಗೆ ತೊಡಕಾಗಿದೆ ಎಂದು ಆರೋಪಿಸಿ ಮೈಸೂರು ವಿಶ್ವ ವಿದ್ಯಾನಿಲಯ ಸಂಶೋಧನಾ ವಿದ್ಯಾರ್ಥಿ ಗಳ ಸಂಘಟನೆಯ ವತಿಯಿಂದ ಕ್ರಾಪರ್ಡ್ ಹಾಲ್ ಮುಂಭಾಗ ಮಂಗಳವಾರದಿಂದ ಅಹೋರಾತ್ರಿ ಧರಣಿ ನಡೆಸಲಾಗುತ್ತಿದೆ.

ಪ್ರಾಧ್ಯಾಪಕರ ಕೊರತೆಯಿಂದ ಪಿಹೆಚ್.ಡಿ. ಕೆ-ಸೆಟ್. ನೀಟ್. ಜೆಆ‌ರ್.ಎ ಉತ್ತೀರ್ಣ ರಾದ ಅಭ್ಯರ್ಥಿಗಳಿಗೆ ವಿಶ್ವವಿದ್ಯಾನಿಲಯ ದಲ್ಲಿ ಪಿಹೆಚ್.ಡಿ ಮಾಡಲು ಅವಕಾಶ ಇಲ್ಲದಂತಾಗಿದೆ. ಆದ್ದರಿಂದ ಈಗಿರುವ ಕಾಯಂ ಪ್ರಾಧ್ಯಾಪಕರ ಬಳಿಯೇ . ಮಾರ್ಗದರ್ಶನ ಪಡೆಯಲು ಅವಕಾಶ ಕೊಡಬೇಕು. ಪಿಹೆಚ್.ಡಿ ಅಭ್ಯರ್ಥಿಗಳ ಹಿತದೃಷ್ಟಿಯಿಂದ ಹೆಚ್ಚುವರಿ ಸೀಟುಗಳನ್ನು ನೀಡಿ ಸಂಶೋಧನೆ ಮಾಡಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಸಂಶೋಧನಾ ಆಕಾಂಕ್ಷಿಗಳ ಬೇಡಿಕೆಗಳು:

ಪಿಹೆಚ್.ಡಿ ಮಾರ್ಗದರ್ಶನಕ್ಕೆ ಹೆಚ್ಚುವರಿ ದಾಖಲಾತಿ ಕೊಡಬೇಕು. ವಿಶ್ವವಿದ್ಯಾನಿಲಯ ದಲ್ಲಿ ಸಾಮಾಜಿಕ ವಿಜ್ಞಾನದಲ್ಲಿ ಪಿಹೆಚ್.ಡಿ ಮಾರ್ಗದರ್ಶಕರ ಕೊರತೆ ಇರುವುದರಿಂದ ಕೇಂದ್ರದ ಯುಜಿಸಿ ಮಾರ್ಗಸೂಚಿಯ ಪ್ರಕಾರ ಇತರೆ ವಿಶ್ವವಿದ್ಯಾನಿಲಯಗಳ ಸಾಮಾಜಿಕ ಅಧ್ಯಯನ ಒಳಗೊಳ್ಳುವಿಕೆ ಅಧ್ಯಯನ ಕೇಂದ್ರದ ಪ್ರಾಧ್ಯಾಪಕರುಗಳಿಗೆ ನೀಡಿರುವಂತೆ ಇಲ್ಲಿಯೂ ನೀಡಬೇಕು  ಎಂದು ಒತ್ತಾಯಿಸಿದ್ದಾರೆ.

ಇದರಿಂದ ವಿಶ್ವವಿದ್ಯಾನಿಲಯಕ್ಕೆ ಯಾವುದೇ ಆರ್ಥಿಕ ಹೊಣೆಗಾರಿಕೆ ಇರುವುದಿಲ್ಲ ಮತ್ತು ಶೈಕ್ಷಣಿಕ ಪ್ರಗತಿಯ ದೃಷ್ಟಿಯಿಂದ ಸಹ ಪ್ರಾಧ್ಯಾಪಕರಿಗೆ ಸಂಶೋಧನಾ ವಿದ್ಯಾರ್ಥಿ ಗಳಿಗೆ ಮಾರ್ಗದರ್ಶನ ನೀಡಲು ಅವಕಾಶ ನೀಡಬೇಕು. ಪ್ರಾಧ್ಯಾಪಕರಾಗಿದ್ದು ಮಾರ್ಗ ದರ್ಶನ ಪಡೆಯದೆ ಇರುವ ಪ್ರಾಧ್ಯಾಪಕ ರಿಗೆ ಮಾರ್ಗದರ್ಶನ ಮಾಡುವುದಕ್ಕೆ ಸಲಹೆ ನೀಡಬೇಕು ಎಂದು ಒತ್ತಾಯಿಸಿದರು.

ಧರಣಿಯಲ್ಲಿ ಮಾಜಿ ಮೇಯರ್ ಪುರುಷೋತ್ತಮ್, ಸಂಶೋಧನಾ ಸಂಘದ ಅಧ್ಯಕ್ಷ ಶಿವಶಂಕರ್, ವಿಶ್ವ ಪ್ರಸಾದ್, ಉಪಾಧ್ಯಕ್ಷ ಮರಳಿ ಮಹೇಶ್, ಹಿರಿಯ ಹೋರಾಟಗಾರರು ಚೋರ್ನಳ್ಳಿ ಶಿವಣ್ಣ, ಯುವ ಹೋರಾಟಗಾರ ಪ್ರದೀಪ್  ಮುಮ್ಮಾಡಿ  ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ  ದಲಿತ ಸಂಶೋಧಕ ಸಂಘ ಇನ್ನಿತರರು ಪಾಲ್ಗೊಂಡಿದ್ದರು.

 

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!