ಹೇಝಲ್ವುಡ್ ತಂಡಕ್ಕೆ ಬಂದರೆ ಜೋಶ್ ಬಂದಂತೆ….

ಐಪಿಎಲ್ ಮತ್ತೆ ಶುರುವಾದರೂ ಜೋಶ್ ಹೇಝಲ್ವುಡ್ ಆರ್ಸಿಬಿ ತಂಡವನ್ನು ಕೂಡಿಕೊಂಡಿರಲಿಲ್ಲ. ಇದಕ್ಕೆ ಮುಖ್ಯ ಕಾರಣ ಭುಜದ ನೋವಿನ ಸಮಸ್ಯೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ವೇಳೆ ಭುಜದ ನೋವಿಗೆ ತುತ್ತಾಗಿದ್ದ ಹೇಝಲ್ವುಡ್ ಸಿಎಸ್ಕೆ ವಿರುದ್ಧ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ.ಇದಾದ ಬಳಿಕ ಆಸ್ಟ್ರೇಲಿಯಾಗೆ ಮರಳಿದ್ದ ಜೋಶ್ ಹೇಝಲ್ವುಡ್ ಅಲ್ಲೇ ಚಿಕಿತ್ಸೆ ಮುಂದುವರೆಸಿದ್ದರು. ಇದೀಗ ಸಂಪೂರ್ಣ ಫಿಟ್ನೆಸ್ ಸಾಧಿಸಿರುವ ಆರ್ಸಿಬಿ ವೇಗಿ ಅಭ್ಯಾಸವನ್ನು ಆರಂಭಿಸಿದ್ದಾರೆ. ಅಲ್ಲದೆ ಮುಂದಿನ ಭಾನುವಾರ, ಅಂದರೆ ಮೇ 25 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

ಅಂದರೆ ಮೆ 23 ರಂದು ನಡೆಯಲಿರುವ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಪಂದ್ಯಕ್ಕೂ ಜೋಶ್ ಹೇಝಲ್ವುಡ್ ಅಲಭ್ಯರಾಗಲಿದ್ದಾರೆ. ಇನ್ನು ಮೇ 25 ರಂದು ಆರ್ಸಿಬಿ ತಂಡವನ್ನು ಸೇರಿಕೊಂಡರೆ, ಮೇ 27 ರಂದು ನಡೆಯಲಿರುವ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯಬಹುದು.

ಇತ್ತ ಜೋಶ್ ಹೇಝಲ್ವುಡ್ ರಿಟರ್ನ್ ಸುದ್ದಿಯು ಆರ್ಸಿಬಿ ಪಾಲಿಗೆ ಶುಭ ಸೂಚನೆ ಎನ್ನಬಹುದು. ಏಕೆಂದರೆ ಈ ಬಾರಿ ಆರ್ಸಿಬಿ ಪರ ಅತ್ಯಧಿಕ ವಿಕೆಟ್ ಕಬಳಿಸಿರುವುದು ಹೇಝಲ್ವುಡ್. 10 ಪಂದ್ಯಗಳಲ್ಲಿ 36.5 ಓವರ್ಗಳನ್ನು ಎಸೆದಿರುವ ಆಸೀಸ್ ವೇಗಿ ಒಟ್ಟು 18 ವಿಕೆಟ್ಗಳನ್ನು ಪಡೆದಿದ್ದಾರೆ.

ಹಾಗೆಯೇ ಆರ್ಸಿಬಿ ಪರ ಅತ್ಯಧಿಕ ಡಾಟ್ ಬಾಲ್ಗಳನ್ನು ಎಸೆದಿರುವುದು ಸಹ ಜೋಶ್ ಹೇಝಲ್ವುಡ್. 10 ಪಂದ್ಯಗಳಲ್ಲಿ ಒಟ್ಟು 103 ಡಾಟ್ ಬಾಲ್ಗಳನ್ನು ಎಸೆದಿದ್ದಾರೆ. ಈ ಮೂಲಕ ಆರ್ಸಿಬಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಇದೀಗ ಪ್ಲೇಆಫ್ ಹಂತಕ್ಕೂ ಮುನ್ನ ಜೋಶ್ ಹೇಝಲ್ವುಡ್ ಆರ್ಸಿಬಿ ತಂಡವನ್ನು ಕೂಡಿಕೊಳ್ಳುವುದು ಖಚಿತವಾಗಿದ್ದು, ಇದರಿಂದ ರಾಯಲ್ ಪಡೆಯ ಬೌಲಿಂಗ್ ಲೈನಪ್ ಮತ್ತಷ್ಟು ಬಲಿಷ್ಠವಾಗಲಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!