ಕೋವಿಡ್ ಮೇಘಸ್ಫೋಟದ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ‌ ಭವಿಷ್ಯ!

ಬೆಳಗಾವಿ : ಮತ್ತೆ ವಾಯುರೂಪದಲ್ಲಿ ಬಾಧೆ ಅಪ್ಪಳಿಸಲಿದೆ. ಮೇಘಸ್ಫೋಟವೂ ಸಂಭವಿಸಿ, ಸಾವು-ನೋವು ಹೆಚ್ಚಾಗಲಿದೆ. ‘ಅರಸನ ಅರಮನೆಗೆ ಕಾರ್ಮೋಡ ಕವಿದಿದೆ’ ಎನ್ನುವ ಮೂಲಕ‌ ಅನೇಕ ರಾಜಕೀಯ ಮುಖಂಡರು ಸಾವನ್ನಪ್ಪುತ್ತಾರೆ ಎಂದು ಕೋಡಿಮಠದ ಡಾ. ಶಿವಯೋಗಿ ಶಿವಾನಂದ ಸ್ವಾಮೀಜಿ ಸ್ಫೋಟಕ‌ ಭವಿಷ್ಯ ನುಡಿದಿದ್ದಾರೆ.

ನಗರದಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಐದು ವರ್ಷ ಕೋವಿಡ್ ಮಹಾಮಾರಿ ಬೇರೆ ಬೇರೆ ರೂಪದಲ್ಲಿ ಇರಲಿದೆ. ಜನರು ಹುಷಾರಾಗಿ ಇರುವುದು ಒಳ್ಳೆಯದು. ಉಸಿರಾಟಕ್ಕೆ ತೊಂದರೆಯಾಗಿ ಸಾವು ಬರುವ ಸಾಧ್ಯತೆಗಳಿವೆ ಲೋಕಕ್ಕೆ ವಾಯು, ಜಲದಿಂದ ಐದು ವರ್ಷ ಗಂಡಾಂತರವಿದೆ. ಹಿಮಾಲಯ ಕರಗಿ ದೆಹಲಿವರೆಗೆ ತಲುಪಲಿದೆ. ಮೇಘಸ್ಫೋಟ ಆಗುವ ಸಾಧ್ಯತೆಗಳಿವೆ. ಭೂಕಂಪ ಸಂಭವಿಸುವ ಸಾಧ್ಯತೆ ಇದ್ದು, ಮತೀಯ ಗಲಭೆಗಳು ಹೆಚ್ಚಾಗಲಿವೆ ಎಂದು ಸ್ವಾಮೀಜಿ ಎಚ್ಚರಿಸಿದರು.

ಯುದ್ಧದ ಭೀತಿ ಮತ್ತೆ ಪ್ರಾರಂಭ ಆಗಲಿದೆ. ಜನರಲ್ಲಿ ಅಶಾಂತಿ ಇದೆ. ಕೆಲವು ದೇಶಗಳು ಅಳಿದು ಹೋಗಲಿವೆ. ಹೊಸ ಹೊಸ ದೇಶಗಳು ಉತ್ಪತ್ತಿಯಾಗುತ್ತವೆ.‌ ‘ಅರಸನ ಅರಮನೆಗೆ ಕಾರ್ಮೋಡ ಕವಿದಿದೆ’. ಅನೇಕ ರಾಜಕೀಯ ಮುಖಂಡರಿಗೆ ಸಾವು, ನೋವು ಹಾಗೂ ಜೀವ ಭಯವಿದೆ ಎಂದು ಸ್ವಾಮೀಜಿ ಸ್ಫೋಟಕ‌ ವಿಚಾರವನ್ನು ಹೊರ ಹಾಕಿದರು.

ರಾಜ್ಯ ರಾಜಕಾರಣದ ಬಗ್ಗೆ – ಸಂಕ್ರಾಂತಿಯವರೆಗೂ ರಾಜ್ಯ ಸರ್ಕಾರಕ್ಕೆ ಯಾವುದೇ ಅಪಾಯವಿಲ್ಲ. ಸಂಕ್ರಾಂತಿಯ ಭವಿಷ್ಯ ನೋಡಿಕೊಂಡು ಮುಂದೆ ಏನಾಗುತ್ತೆ‌ ನೋಡಬೇಕು ಎಂದು ಕೋಡಿಮಠದ ಸ್ವಾಮೀಜಿ ಹೇಳಿದರು.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!