ಗ್ರಾಮದ ಸಿದ್ದರಾಜು (52) ಮೃತರು. ಇವರ ಜತೆ ಸುಮಾರು ಒಂದೂವರೆ ಲಕ್ಷ ಬೆಲೆಬಾಳುವ ಎರಡು ಇಲಾತಿ ಹಸುಗಳು ಸಹ ಮೃತಪಟ್ಟಿವೆ. ಮೃತರ ಕುಟುಂಬದವರ ದುಃಖ ಮುಗಿಲು ಮುಟ್ಟಿದೆ.
![]()
ಸಿದ್ದರಾಜುರವರು ಜಮೀನಿನಲ್ಲಿ ತಮ್ಮ ಹಸುಗಳನ್ನು ಮೇಯಿಸುತ್ತಿರುವಾಗ, ಹಸುಗಳು ವಿದ್ಯುತ್ ತಂತಿಯನ್ನು ಸ್ಪರ್ಶಿಸಿದೆ. ಈ ವೇಳೆ ಹಸುಗಳನ್ನು ಕಾಪಾಡಲು ಹೋದಾಗ ಹಸುವಿನ ಮಾಲಿಕ ಸಿದ್ದರಾಜುರವರು ಸಹ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿದ್ದಾರೆ.
ತುಂತುರು ಮಳೆಯಾಗುತ್ತಿದ್ದು, ಸಂಜೆಯಾದರೂ ಸಿದ್ದರಾಜು ಅವರು ಮನೆಗೆ ಬಾರದ ಹಿನ್ನೆಲೆ ಆತನ ಕುಟುಂಬ ಸಂಜೆ ಸಮಯದಲ್ಲಿ ತಮ್ಮ ಜಮೀನಿಗೆ ಹೋಗಿ ನೋಡಿದಾಗ ವಿದ್ಯುತ್ ತಂತಿ ತುಂಡಾಗಿ ಬಿದ್ದಿರುವುದು ಹಾಗೂ ಸಿದ್ದರಾಜು ಮತ್ತು ಆತನ ಎರಡು ಹಸುಗಳು ಸಹ ಮೃತಪಟ್ಟಿರುವುದು ಕಂಡುಬಂದಿದೆ.
ಸುದ್ದಿ ತಿಳಿದ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು, ಕೆಇಬಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.





