ಬಿ.ಜೆ.ಪಿ ಪಕ್ಷದಿಂದ ಶಾಸಕ ಎಸ್.ಟಿ ಸೋಮಶೇಖರ್ ಉಚ್ಚಾಟನೆ….!!

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಶಿವರಾಮ್ ಹೆಬ್ಬಾರ್ ಹಾಗೂ ಎಸ್ ಟಿ ಸೋಮಶೇಖರ್ ಅವರನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿದೆ. ಬರೋಬ್ಬರಿ ಎರಡು ವರ್ಷದ ಬಳಿಕ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಈ ಕ್ರಮಕೈಗೊಂಡಿದೆ. ಇನ್ನು ಈ ಬಗ್ಗೆ ಸ್ವತಃ ಶಿವರಾಮ್ ಹೆಬ್ಬಾರ್ ಹಾಗೂ ಎಸ್ ಟಿ ಸೋಮಶೇಖರ್ ಪ್ರತಿಕ್ರಿಯಿಸಿದ್ದು, ಏನೆಲ್ಲಾ ಹೇಳಿದ್ದಾರೆ ಎನ್ನುವುದು ಈ ಕೆಳನಂತಿದೆ.ಬಿಜೆಪಿಯಿಂದ ಗೆದ್ದು ವಿಧಾನಸಭೆ ಪ್ರವೇಶಿಸಿರುವ ಯಶವಂತಪುರ ಶಾಸಕ ಎಸ್ ಟಿ ಸೋಮಶೇಖರ್ ಹಾಗೂ ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಅಮವಾಸ್ಯೆ ದಿನ ಒಳ್ಳೆ ನಿರ್ಧಾರ ಕೈಗೊಂಡಿದ್ದಾರೆ. ಬೆಳಗ್ಗೆ 10.30ರಲ್ಲಿ ಮೊಬೈಲ್ ನೋಡಿದಾಗ ಈ ವಿಚಾರ ತಿಳಿಯಿತು. ಚುನಾವಣೆ ವೇಳೆಗೆ ಬಿಜೆಪಿಯಲ್ಲಿ ಇನ್ನೂ 10-12 ಸೀಟ್ ಖಾಲಿ ಆಗುತ್ತೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

ಪಕ್ಷದಿಂದ ನಮ್ಮನ್ನು ಉಚ್ಚಾಟನೆ ಮಾಡುತ್ತಾರೆ ಎಂದು ಗೊತ್ತಿತ್ತು. ಆದ್ರೆ ಯಾವಾಗ ಉಚ್ಚಾಟನೆ ಮಾಡುತ್ತಾರೆ ಎಂದು ಗೊತ್ತಿರಲಿಲ್ಲ. 6 ವರ್ಷಗಳ ಕಾಲ ನನ್ನನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಿದ್ದಾರೆ. ನೋಟಿಸ್ ಕೊಡುವ ಮುನ್ನ ಅಮಿತ್ ಶಾ ನನ್ನ ಜತೆ ಮಾತಾಡಿದ್ದರು. ಕ್ಷೇತ್ರದಲ್ಲಿರುವ ಭಿನ್ನಮತದ ಬಗ್ಗೆ ಅಮಿತ್ ಶಾ ಜತೆ ಮಾತನಾಡಿದ್ದೆ. ಸಮಸ್ಯೆ ಬಗೆಹರಿಸದಿದ್ದರೆ ಪಕ್ಷ ತೊರೆಯುವುದಾಗಿ ನಾನು ಹೇಳಿದ್ದೆ. ಬಿಜೆಪಿಯ ಯಾರೂ ನನ್ನನ್ನು ಪಕ್ಷದಲ್ಲಿ ಉಳಿಸಿಕೊಳ್ಳಲು ಪ್ರಯತ್ನಿಸಲಿಲ್ಲ. ಅಮಾವಾಸ್ಯೆಯ ದಿನ ಒಳ್ಳೆಯದು ಮಾಡಿದ್ದಾರೆ. ಸಂತೋಷವಾಗಿದ್ದೇನೆ. ಚುನಾವಣೆ ವೇಳೆಗೆ ಬಿಜೆಪಿಯಲ್ಲಿ ಇನ್ನೂ 10-12 ಸೀಟ್ ಖಾಲಿ ಆಗುತ್ತೆ ಎಂದು ಹೊಸ ಬಾಂಬ್ ಸಿಡಿಸಿದರು.

ಉಚ್ಚಾಟನೆ ಮಾಡಿದವರಿಗೆ ಚಾಮುಂಡೇಶ್ವರಿ ಆರೋಗ್ಯ ಭಾಗ್ಯ ಕೊಟ್ಟು ಕಾಪಾಡಲಿ. ನಮ್ಮ ಉಚ್ಚಾಟನೆಗೂ, ಯತ್ನಾಳ್ ಉಚ್ಚಾಟನೆಗೂ ತುಂಬಾ ವ್ಯತ್ಯಾಸವಿದೆ. ಯತ್ನಾಳ್ ರನ್ನ ಅಂದೇ ಉಚ್ಚಾಟಿಸಿದ್ದರೆ ಬಿಜೆಪಿ ಸರ್ಕಾರ ಹೋಗುತ್ತಿರಲಿಲ್ಲ. ಬಿಜೆಪಿಯ ಒಬ್ಬ ಶಾಸಕ ವಿಧಾನಸೌಧದಲ್ಲಿ ರೇಪ್ ಮಾಡುತ್ತಾನೆ. ವಿಪಕ್ಷ ನಾಯಕರಿಗೆ ಏಡ್ಸ್ ಇಂಜೆಕ್ಷನ್ ಚುಚ್ಚಲು ಪ್ರಯತ್ನ ಮಾಡುತ್ತಾರೆ. ಒಕ್ಕಲಿಗ ಹೆಣ್ಮಗಳನ್ನು ಮಂಚಕ್ಕೆ ಕರೆಯುವುದನ್ನು ಎಲ್ಲಾದ್ರೂ ಕೇಳಿದ್ದೀರಾ? ಬಿಜೆಪಿ ಪ್ರಾಮಾಣಿಕ ಆಗಿದ್ದರೆ ಇಂತಹವರನ್ನು ಸಸ್ಪೆಂಡ್ ಮಾಡಬೇಕಿತ್ತು ಎಂದು ಪರೋಕ್ಷವಾಗಿ ಶಾಸಕ ಮುನಿರತ್ನ ವಿರುದ್ಧ ವಾಗ್ದಾಳಿ ನಡೆಸಿದರು. ಉಚ್ಚಾಟನೆಯಲ್ಲಿ ಬಿಎಸ್ವೈ, ವಿಜಯೇಂದ್ರರದ್ದು ಯಾವ ಪಾತ್ರ. ಉಳಿದ ನಾಯಕರೂ ಉಳಿಸಿಕೊಳ್ಳಲು ಪ್ರಯತ್ನ ಮಾಡಲಿಲ್ಲ. ನಾನಾಗಿ ಹೋಗಿ ಮೇಲೆ ಬಿದ್ದು ಕೇಳುವ ಮನಸ್ಸು ನನ್ನದಲ್ಲ. ರಾಜ್ಯಾಧ್ಯಕ್ಷರು, ವಿಪಕ್ಷ ನಾಯಕರು ಉಳಿಸಿಕೊಳ್ಳುವ ಪ್ರಯತ್ನ ಮಾಡ್ಲಿಲ್ಲ. ಇಬ್ಬರೂ ಕೂಡ 100% ನನ್ನ ಉಳಿಸಿಕೊಳ್ಳಲು ಪ್ರಯತ್ನ ಮಾಡಲಿಲ್ಲ. ಅವರು ಪ್ರಯತ್ನ ಮಾಡಿದ್ದರೆ ಇಂದು ನಾನು ಉಚ್ಚಾಟನೆ ಆಗುತ್ತಿರಲಿಲ್ಲ ಎಂದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!