ಯಾವ ನಾಲಗೆಯಲ್ಲಿ ನನ್ನ ರಾಜೀನಾಮೆ ಕೇಳುತ್ತಿದ್ದೀರಿ? : ಆರ್.​ ಅಶೋಕ್​ಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

“ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾಗ BS Yediyurappa ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರಲಿಲ್ಲವೇ? ಈಗ ಸಿದ್ದರಾಮಯ್ಯನವರು ಯಾಕೆ ರಾಜೀನಾಮೆ ನೀಡುತ್ತಿಲ್ಲ?’’ ಎಂದು ವಿರೋಧಪಕ್ಷದ ನಾಯಕರಾದ ಆರ್.ಅಶೋಕ್ ಅವರು ಮತ್ತೊಮ್ಮೆ ತಮ್ಮ ಅಜ್ಞಾನವನ್ನು ಪ್ರದರ್ಶಿಸಿದ್ದಾರೆ. R Ashoka ಅವರೇ, ಈ ರೀತಿ ಬೇಕಾಬಿಟ್ಟಿ ಹೇಳಿಕೆ ನೀಡುವ ಮೊದಲು ವಾಸ್ತವಾಂಶವನ್ನು ಪರಿಶೀಲಿಸಿಕೊಂಡು ಮಾತನಾಡಿ.

ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರು ರಾಚೇನಹಳ್ಳಿ ಡಿನೋಟಿಫಿಕೇಷನ್ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದು 2011ರ ಜನವರಿ 21ರಂದು. ಅವರ ವಿರುದ್ಧ ಅರ್ಜಿದಾರರು ನೀಡಿದ್ದ 1600 ಪುಟಗಳ ಪ್ರಬಲ ದಾಖಲೆಗಳ ಸಾಕ್ಷ ಕೂಡಾ ಇತ್ತು. ಹಾಗಿದ್ದರೂ ಯಡಿಯೂರಪ್ಪನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರಲಿಲ್ಲ. ಅಶೋಕ್ ಅವರೇ, ಆ ಕಾಲದಲ್ಲಿ ನೀವೇ ಅಲ್ಲವೇ ಯಡಿಯೂರಪ್ಪನವರು ರಾಜೀನಾಮೆ ಯಾಕೆ ನೀಡಬೇಕು ಎಂದು ಪ್ರಶ್ನಿಸಿದ್ದವರು. ಈಗ ಯಾವ ನಾಲಗೆಯಲ್ಲಿ ನನ್ನ ರಾಜೀನಾಮೆ ಕೇಳುತ್ತಿದ್ದೀರಿ?

ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು 2011ರ ಆಗಸ್ಟ್ ನಾಲ್ಕರಂದು. ಅದು ನ್ಯಾ.ಸಂತೋಷ್ ಹೆಗ್ಡೆ ಅವರ ನೇತೃತ್ವದ ಲೋಕಾಯುಕ್ತವು ಅಕ್ರಮ ಗಣಿಗಾರಿಕೆಯ ತನಿಖಾ ವರದಿಯನ್ನು ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರಿಗೆ ಸಲ್ಲಿಸಿದ ನಂತರ. ಅಕ್ರಮ ಗಣಿಗಾರಿಕೆಯಿಂದಾಗಿ ರಾಜ್ಯದ ಬೊಕ್ಕಸಕ್ಕೆ 16,500 ಕೋಟಿ ರೂಪಾಯಿಯಷ್ಟು ನಷ್ಟವಾಗಿದೆ ಎಂದು ಲೋಕಾಯುಕ್ತ ತನಿಖಾ ವರದಿಯಲ್ಲಿ ಹೇಳಿತ್ತು.

ಅಶೋಕ್ ಅವರೇ, ಹಳೆಯದ್ದನ್ನೆಲ್ಲವನ್ನೂ ನೆನಪಿಸಿಕೊಳ್ಳಿ, ಆಗ ನೀವೆಲ್ಲರೂ ಸೇರಿ ಯಡಿಯೂರಪ್ಪ ವಿರುದ್ಧವೇ ಏನೆಲ್ಲ ಕುತಂತ್ರ ಮಾಡಿದ್ದೀರಿ ಎನ್ನುವುದೂ ನೆನಪಾಗಬಹುದು.

ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದ ರಾಚೇನಹಳ್ಳಿ ಡಿನೋಟಿಫಿಕೇಷನ್ ಹಗರಣದ ತನಿಖೆ ನಡೆಸಿದ್ದ ನ್ಯಾ.ಸಂತೋಷ್ ಹೆಗ್ಡೆ ನೇತೃತ್ವದ ಲೋಕಾಯುಕ್ತವೇ ಆರೋಪಗಳೆಲ್ಲವನ್ನು ಸಾಬೀತುಪಡಿಸಿ ಆರೋಪ ಪಟ್ಟಿ ಸಲ್ಲಿಸಿದ್ದರು. ಈ ಮೂಲಕ ರಾಜ್ಯಪಾಲರ ಪ್ರಾಸಿಕ್ಯೂಷನ್ ನಿರ್ಧಾರ ನ್ಯಾಯಯುತವಾಗಿತ್ತು ಎಂದು ಲೋಕಾಯುಕ್ತ ಸಂತೋಷ್ ಹೆಗ್ಡೆ ಅವರೇ ದೃಡೀಕರಿಸಿದ್ದರಲ್ಲವೇ? ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರು ಒಂದಲ್ಲ ಎರಡಲ್ಲ ಹದಿನೈದು ಡಿನೋಟಿಫಿಕೇಷನ್ ಹಗರಣಗಳ ತನಿಖೆಗೆ ಅನುಮತಿ ನೀಡಿದ್ದರು. ಹೆಚ್ಚಿನ ಮಾಹಿತಿಗೆ ನ್ಯಾ.ಸಂತೋಷ್ ಹೆಗ್ಡೆ ಅವರು ನೀಡಿದ್ದ ಅಕ್ರಮ ಗಣಿಗಾರಿಕೆಯ ತನಿಖಾ ವರದಿಯನ್ನು ತೆಗೆದು ಓದಿಕೊಳ್ಳಿ.

ಇಂದು ರಾಜ್ಯಪಾಲ ಥಾವರಚಂದ್ ಗೆಹ್ಲೋತ್ ಪರವಾಗಿ ಕಣ್ಣೀರು ಸುರಿಸುತ್ತಿರುವ ಬಿಜೆಪಿ ನಾಯಕರಿಗೆ 2011ರಲ್ಲಿ ಆಗಿನ ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರ ಬಗ್ಗೆ ಅವಹೇಳನ ಮಾಡಿದ್ದೆಲ್ಲ ಮರೆತುಹೋದಂತಿದೆ. ನಮ್ಮ ಪಕ್ಷದ ಕಾರ್ಯಕರ್ತರು ಶಾಂತಿಯುತವಾಗಿ ನಡೆಸಿರುವ ಪ್ರತಿಭಟನೆಯನ್ನು ಪ್ರಶ್ನಿಸುತ್ತಿರುವ BJP Karnataka ನಾಯಕರಿಗೆ 2011ರಲ್ಲಿ ರಾಜ್ಯಪಾಲರ ನಡೆಯನ್ನು ವಿರೋಧಿಸಿ ಕರ್ನಾಟಕ ಬಂದ್ ಗೆ ಕರೆ ನೀಡಿದ್ದೂ ಕೂಡಾ ಮರೆತುಹೋಗಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಕೇಂದ್ರ ಸಚಿವ ಸಂಪುಟ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಪುನರ್‌ರಚನೆ: ಫಡ್ನವೀಸ್ ಸೇರಿದಂತೆ ನಾಲ್ವರು ಸಿಎಂಗಳಿಗೆ ಉನ್ನತ ಸ್ಥಾನ ಸಾಧ್ಯತೆ

ಮುಂಬರುವ 2027-28ರ ರಾಜ್ಯ ವಿಧಾನಸಭಾ ಚುನಾವಣೆಗಳು ಹಾಗೂ 2029ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸಚಿವ ಸಂಪುಟ ಮತ್ತು ಬಿಜೆಪಿಯ 12 ಸದಸ್ಯರ ಸಂಸದೀಯ ಮಂಡಳಿಯನ್ನು ಶೀಘ್ರದಲ್ಲೇ ಪುನರ್‌ರಚಿಸಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಈ ಉನ್ನತ ಮಟ್ಟದ ಬದಲಾವಣೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!