ಆರ್​ಸಿಬಿ ಬೌಲಿಂಗ್ ಗೆ ತತ್ತರಿಸಿದ ಪಂಜಾಬ್ ಕಿಂಗ್ಸ್ : 9 ವರ್ಷಗಳ ಬಳಿಕ ಫೈನಲ್‌ಗೆ ಎಂಟ್ರಿ ಕೊಟ್ಟ ಆರ್​ಸಿಬಿ

ಪಂಜಾಬ್​ ಕಿಂಗ್ಸ್​ ವಿರುದ್ಧದ ಕ್ವಾಲಿಫೈಯರ್​ 1ರ ಪಂದ್ಯದಲ್ಲಿ RCB ತಂಡ ಭರ್ಜರಿ ಜಯ ಸಾಧಿಸಿ ನೇರವಾಗಿ ಫೈನಲ್​ಗೆ ಎಂಟ್ರಿ ಕೊಟ್ಟಿದೆ. ಇದರಿಂದ 2009, 2011, 2016ರ ಬಳಿಕ 4ನೇ ಬಾರಿಗೆ ಆರ್​ಸಿಬಿ ಫೈನಲ್​ಗೆ ಹೋಗಿದೆ. ಮುಲ್ಲನಪುರದ ನ್ಯೂ ಪಿಸಿಎ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ನಾಯಕ ರಜತ್ ಪಾಟಿದಾರ್, ಬೌಲಿಂಗ್ ಆಯ್ಕೆ ಮಾಡಿದರು.

ಪಂಜಾಬ್​ ಕಿಂಗ್ಸ್​ ಮೊದಲ ಬ್ಯಾಟಿಂಗ್ ಮಾಡುವ ಅವಕಾಶ ಪಡೆಯಿತು. ಓಪನರ್ ಆಗಿ ಕ್ರೀಸ್​ಗೆ ಆಗಮಿಸಿದ ಪ್ರಿಯಾಂಶ್​ ಆರ್ಯ 7, ಪ್ರಭಾಸಿಮ್ರಾನ್​ ಸಿಂಗ್ 18 ರನ್​ಗೆ ಔಟ್​ ಆದರು. ನಂತರ ನಾಯಕ ಶ್ರೇಯಸ್​ ಅಯ್ಯರ್ ಕೂಡ ಕೇವಲ 2 ರನ್​ಗೆ ಡ್ರೆಸ್ಸಿಂಗ್​ ರೂಮ್​ನತ್ತ ಹೆಜ್ಜೆ ಹಾಕಿದರು. ಇವರ ಬೆನ್ನಲ್ಲೇ ಜೋಶ್ ಇಂಗ್ಲಿಷ್​ ಕೇವಲ 4 ರನ್​ಗೆ ವಿಕೆಟ್​ ಕಳೆದುಕೊಂಡರು.

ಬ್ಯಾಟಿಂಗ್​​ ಮಾಡಲು ಕ್ರೀಸ್​ಗೆ ಬಂದ ನೆಹಾಲ್ ವಧೇರಾ, ಯಶ್​ ದಯಾಳ್​ ಬೌಲಿಂಗ್​ನಲ್ಲಿ ಬೋಲ್ಡ್​ ಆದರು, ಸುಯಶ್ ಶರ್ಮಾ ಬೌಲಿಂಗ್​ನಲ್ಲಿ ಶಶಾಂಕ್​ ಸಿಂಗ್​ 3, ಮುಶೀರ್ ಖಾನ್​, ಮಾರ್ಕಸ್ ಸ್ಟೊಯಿನಿಸ್ ಔಟ್​ ಆದರು. ಇದರಿಂದ ಪಂಜಾಬ್​ ಕಿಂಗ್ಸ್​ ಕೇವಲ 14.1 ಓವರ್​ಗಳಲ್ಲಿ ಆಲೌಟ್​ ಆಗಿ 102 ರನ್​ಗಳ ಟಾರ್ಗೆಟ್​ ಅನ್ನು ಆರ್​ಸಿಬಿಗೆ ನೀಡಿತ್ತು.ಈ ಸುಲಭ ಟಾರ್ಗೆಟ್​ ಅನ್ನು ಚೇಸ್ ಮಾಡಿದ ಆರ್​ಸಿಬಿ 10 ಓವರ್​ಗೆ ಎರಡು ವಿಕೆಟ್​ ಕಳೆದುಕೊಂಡು 106 ರನ್​ ಗಳಿಸುವ ಮೂಲಕ ಜಯ ಸಾಧಿಸಿತು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ನೇಪಾಳ ಪ್ರವಾಹ: ಕನ್ನಡಿಗರು ಸುರಕ್ಷಿತ, ಧೈರ್ಯ ತುಂಬಿದ ಸಿಎಂ

ನೇಪಾಳ ಹಾಗೂ ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ಮೂಲಸೌಕರ್ಯಗಳಿಗೆ ಅಪಾರ ಹಾನಿಯಾಗಿದೆ. ಈ ನೈಸರ್ಗಿಕ ವಿಕೋಪದ ನಡುವೆ ಸಿಲುಕಿದ್ದ ಕರ್ನಾಟಕದ 3 ಮಂದಿ ಸೇರಿದಂತೆ ಒಟ್ಟು 23 ಭಾರತೀಯರು…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!