ಸರ್ಕಾರಿ ಶಾಲಾ ಪ್ರಾರಂಭೋತ್ಸವ : ಶಾಸಕ ಕೆ .ಹರೀಶ್ ಗೌಡರು ವಿದ್ಯಾರ್ಥಿಗಳಿಗೆ ಶುಭ ಹಾರೈಕೆ.

ಬೇಸಿಗೆ ರಜೆ ಕಳೆದು ಇಂದಿನಿಂದ ಸರ್ಕಾರಿ ಶಾಲೆಗಳು ಪ್ರಾರಂಭವಾಗಿದ್ದು ಮೊದಲ ದಿನವೇ ಹರ್ಷದಿಂದ ಶಾಲೆಯತ್ತ ಹೆಜ್ಜೆ ಹಾಕಿರುವ ವಿದ್ಯಾರ್ಥಿಗಳನ್ನು ಶಾಸಕ ಕೆ .ಹರೀಶ್ ಗೌಡರು ಸ್ವಾಗತಿಸಿದರು.


ಚಾಮರಾಜ ಕ್ಷೇತ್ರದ ಕುಂಬಾರಕೊಪ್ಪಲಿನ ಸರ್ಕಾರಿ ಶಾಲೆ ಹಾಗು ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ಮಹಾರಾಣಿ ಶಾಲೆಯಲ್ಲಿ 2025-2026 ನೇ ಸಾಲಿನ ಶಾಲಾ ಪ್ರಾರಂಭೋತ್ಸವದ ಅಂಗವಾಗಿ ಶೈಕ್ಷಣಿಕ ಇಲಾಖೆ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಾಲೆಯ ವಿದ್ಯಾರ್ಥಿಗಳಿಗೆ ಗುಲಾಬಿ ಹೂವು, ಸಿಹಿ, ಪಠ್ಯಪುಸ್ತಕ ಹಾಗು ಸಮವಸ್ತ್ರವನ್ನು ಸಾಂಕೇತಿಕವಾಗಿ ನೀಡಿ ಮಕ್ಕಳನ್ನು ಸ್ವಾಗತಿಸಿ ಮಾತನಾಡಿದ ಅವರು

ವಿದ್ಯಾರ್ಥಿಗಳಲ್ಲಿ ಜ್ಞಾನದ ಬೆಳಕು ಹೆಚ್ಚಾಗಲಿ ಶಿಕ್ಷಣವೇ ಶಕ್ತಿ, ಶಿಕ್ಷಣ ಕಲಿತ ವ್ಯಕ್ತಿ ತನ್ನ ಜೀವನವನ್ನು ಉತ್ತಮವಾಗಿ ನಿರ್ವಹಿಸಿ, ಸಮಾಜಕ್ಕೆ ಉತ್ತಮ ಕೊಡುಗೆಗಳನ್ನು ನೀಡುವರು, ಶಾಲೆಗಳು ಶಿಕ್ಷಣ ನೀಡುವ ಕೇಂದ್ರಗಳಾಗಿದ್ದು, ಅರ್ಹ ವಯಸ್ಸಿನ ಮಕ್ಕಳನ್ನು ಶಾಲೆಗೆ ಸೇರಿಸಿ, ನಿಯಮಿತವಾಗಿ ಶಾಲೆಗೆ ಕಳುಹಿಸಬೇಕು ಎಂದು ಹೇಳಿದರು ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಉಚಿತ ಸಮವಸ್ತ್ರ, ಉಚಿತ ಪಠ್ಯಪುಸ್ತಕ, ಶು-ಸಾಕ್ಸು, ಬಿಸಿಯೂಟ ನೀಡಲಾಗುತ್ತಿದ್ದು ಇದರ ಪ್ರಯೋಜನ ಪಡೆಯಬೇಕೆಂದರು, ಸರ್ಕಾರಿ ಶಾಲೆಯಲ್ಲಿ ಓದಿದ ಮಕ್ಕಳು ಎಲ್ಲಾ ಕ್ಷೇತ್ರಗಳಲ್ಲೂ ಉನ್ನತ ಸ್ಥಾನಗಳನ್ನು ಅಲಂಕರಿಸಿ ದೇಶಕ್ಕೆ ತುಂಬಾ ಕೊಡುಗೆ ನೀಡಿದ್ದಾರೆ ಎಂದರು ,

ಇದೇ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ರೇವಣ್ಣ ಅವರ ಕಾರ್ಯ ವೈಖರಿಗೆ ಮೆಚ್ಚುಗೆ ವ್ಯಕ್ತ ಪಡಿಸಿ ಕ್ಷೇತ್ರದಲ್ಲಿನ ಸರ್ಕಾರಿ ಶಾಲೆಗಳಲ್ಲಿ ಯಾವುದೇ ಕುಂದು ಕೊರತೆಗಳಿದ್ದರೆ ತಕ್ಷಣ ಬಗೆಹರಿಸಿಕೊಡುವುದಾಗಿ ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ಶಾಲೆಯ ಬೋಧಕ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!