ಸುಭಾಷ್ ಪವರ್ ಸ್ಟೇಷನ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ- ಶಾಸಕ ಅನಿಲ್ ಚಿಕ್ಕಮಾದು ಅಧಿಕಾರಿಗಳಿಗೆ ಸೂಚನೆ.

ಮೈಸೂರು : ಕಬಿನಿಯ ಸರ್ಕಾರಿ ಜಾಗವನ್ನ ಅಡವಿಟ್ಟು ಸಾಲ ಪಡೆದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬಿನಿ ಸುಭಾಷ್ ಪವರ್ ಸ್ಟೇಷನ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಎಂದು ಅಧಿಕಾರಿಗಳಿಗೆ ಹೆಚ್.ಡಿ.ಕೋಟೆ ಶಾಸಕ ಅನಿಲ್ ಚಿಕ್ಕಮಾದು ಸೂಚನೆ ನೀಡಿದ್ದಾರೆ.


ಸುಭಾಷ್ ಪವರ್ ಸ್ಟೇಷನ್ ಕಂಪನಿ ಕಬಿನಿ ಜಲಾಶಯದ ಒಳಗಿನ ಸರ್ಕಾರಿ ಭೂಮಿ ಲಪಟಾಯಿಸುವ ಹುನ್ನಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ, ಈ ಕುರಿತು ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆಯಲ್ಲಿ ನಡೆದ ಸಭೆಯಲ್ಲಿ ಚರ್ಚೆಯಾಯಿತು. ಸರ್ಕಾರಿ ಭೂಮಿ ಅಡವಿಟ್ಟು ನೂರಾರು ಕೋಟಿ ಸಾಲ ಪಡೆದ ಬಗ್ಗೆ ಚರ್ಚೆ ನಡೆದಿದ್ದು, ಕಬಿನಿ ಸುಭಾಷ್ ಪವರ್ ಸ್ಟೇಷನ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ತಹಶಿಲ್ದಾರ್ ಮೋಹನ‌ಕುಮಾರಿ, ಕಬಿನಿ ಸಹಾಯಕ ಕಾರ್ಯಪಾಲಕ ಗಣೇಶ್ ಗೆ ಶಾಸಕ ಚಿಕ್ಕಮಾದು ಸೂಚನೆ ನೀಡಿದರು. ಕಬಿನಿ ಜಲಾಶಯದ 18 ಎಕರೆ ಭೂಮಿ ತೋರಿಸಿ ನೂರಾರು ಕೋಟಿ ಸಾಲ ಪಡೆದ ಆರೋಪ ಕೇಳಿ ಬಂದಿತ್ತು. ರಾಜ್ಯದ ವಿವಿಧ ಬ್ಯಾಂಕ್ ಗಳಿಂದ ವಿವಿಧೆಡೆ 250 ಕೋಟಿ ರೂ ಅಧಿಕ ವಂಚನೆ ಮಾಡಿದ ಆರೋಪ ಹಿನ್ನೆಲೆಯಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ತಾಲೂಕಿನ ಜನತೆ ಆಗ್ರಹಿಸಿದ್ದರು. ಈ ಕುರಿತು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಈ ಹಿನ್ನೆಲೆ ಅಧಿಕಾರಿಗಳನ್ನ ತೀವ್ರ ತರಾಟೆಗೆ ತೆಗೆದುಕೊಂಡ ಶಾಸಕ ಅನಿಲ್ ಚಿಕ್ಕಮಾದು, ಕಬಿನಿ ಸುಭಾಷ್ ಪವರ್ ಸ್ಟೇಷನ್ ವಿರುದ್ದ ಕ್ರಮ ಕೈಗೊಳ್ಳಲು ಸೂಚಿಸಿದರು.


ಕಬಿನಿ ಸುಭಾಷ್ ಪವರ್ ಕಳ್ಳಾಟ ಬಯಲು ಮಾಡಿದ ಅಧಿಕಾರಿಗಳು ಇದಾದ ಬೆನ್ನಲ್ಲೆ ಎಚ್ಚೆತ್ತ ತಾಲೂಕು ಆಡಳಿತ ಶಾಸಕ ಅನಿಲ್ ಚಿಕ್ಕಮಾದು ಸೂಚನೆ ಮೇರೆಗೆ ದಾಖಲೆಗಳ ಪರಿಶೀಲನೆ ನಡೆಸಿದ್ದು ಇದೀಗ ಅಧಿಕಾರಿಗಳು ಕಬಿನಿ ಸುಭಾಷ್ ಪವರ್ ಕಳ್ಳಾಟ ಬಯಲು ಮಾಡಿದ್ದಾರೆ ಆರ್ ಟಿಸಿ ಕಲಂ 11ರ ಬದಲಿಗೆ 9 ರಲ್ಲಿ ಗುತ್ತಿಗೆ ಪಡೆದವರ ಹೆಸರು ನಮೂದು ಮಾಡಲಾಗಿದ್ದು, ಅಧಿಕಾರಿಗಳ ಕಳ್ಳಾಟ, ದಿವ್ಯ ನಿರ್ಲಕ್ಷ್ಯದ ಪ್ರತೀಕ ಕಬಿನಿ ಜಲಾಶಯದ ಆಸ್ತಿ ಖಾಸಗಿ ವ್ಯಕ್ತಿ ಹೆಸರಿಗೆ ಪರಭಾರೆ ಮಾಡಿದ ಆರೋಪ ಕೇಳಿ ಬಂದಿತ್ತು. 30 ವರ್ಷ ಗುತ್ತಿಗೆ ಪಡೆದ ವ್ಯಕ್ತಿ ಹೆಸರಿಗೆ ಭೂಮಿ ಪರಭಾರೆ ಮಾಡಲಾಗಿದ್ದು, ಬ್ಯಾಂಕ್ ಗಳಿಗೆ ಕೇವಲ ಆರ್ ಟಿಸಿ ಕೊಟ್ಟು ಕಬಿನಿ ಸುಭಾಷ್ ಪವರ್ ಕಂಪನಿ ಕೋಟ್ಯಾಂತರ ರೂ ಸಾಲ ಪಡೆದಿದ್ದು ಮಾಧ್ಯಮಗಳಲ್ಲಿ ವರದಿಯಾಗಿತ್ತು.
ಈ ನಡುವೆ ಸುಭಾಷ್ ಪವರ್ ಕಂಪನಿಗೆ ಅಧಿಕಾರಿಗಳು ಪತ್ರ ಬರೆದು 15 ದಿನಗಳ ಒಳಗೆ ಸಮರ್ಪಕ ಉತ್ತರ ನೀಡಿ ಎಂದು ಸೂಚಿಸಿದ್ದರು . ಆದರೆ ಪತ್ರ ಬರೆದರೂ ಸುಭಾಷ್ ಪವರ್ ಕಂಪನಿ ಕ್ಯಾರೆ ಎನ್ನುತ್ತಿಲ್ಲ ಎನ್ನಲಾಗಿದೆ.

 

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!