RCB ಸಂಭ್ರಮಾಚರಣೆ ನೆಪದಲ್ಲಿ ಅತಿರೇಕದ ವರ್ತನೆ ಬೇಡ : ಬಿ.ದಯಾನಂದ್.

ಬೆಂಗಳೂರು : ಇಂಡಿಯನ್ ಪ್ರೀಮಿಯರ್ ಲೀಗ್ ಟಿ20 ಕ್ರಿಕೆಟ್ ಟೂರ್ನಿಯು ಅಂತಿಮ ಹಂತಕ್ಕೆ ತಲುಪಿದ್ದು ಇಂದು ಫೈನಲ್ ಪಂದ್ಯ ಗುಜರಾತ್ನ ಅಹಮದಾಬಾದ್ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ನಡುವೆ ನಡೆಯಲಿದೆ. ಆರ್ಸಿಬಿ ಗೆಲುವಿಗಾಗಿ ಕರ್ನಾಟಕದಾದ್ಯಂತ ಅಭಿಮಾನಿಗಳ ಹಾರೈಕೆ, ಪ್ರಾರ್ಥನೆ ಸಲ್ಲಿಕೆಯಾಗುತ್ತಿವೆ. ಈ ಮಧ್ಯೆ ಇಂದು ಆರ್ ಸಿಬಿ ಫೈನಲ್ ಪಂದ್ಯ ಗೆದ್ದು ಟ್ರೋಫಿ ತನ್ನದಾಗಿಸಿಕೊಂಡರೇ ಬೆಂಗಳೂರಿನಲ್ಲಿ ಸಂಭ್ರಮಾಚರಣೆ ಜೋರಾಗಿರುತ್ತದೆ. ಹೀಗಾಗಿಯೇ RCB ಗೆದ್ದರೆ ಸಂಭ್ರಮಾಚರಣೆ ನೆಪದಲ್ಲಿ ಅತಿರೇಕದ ವರ್ತನೆ ಮಾಡಬಾರದು ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ್ ಎಚ್ಚರಿಕೆ ನೀಡಿದ್ದಾರೆ.

 

 

 

 

 

 

 

 

 

ಆರ್ ಸಿಬಿ ಗೆದ್ದರೆ ಸಂಭ್ರಮಾಚರಣೆ ನೆಪದಲ್ಲಿ ಯಾರೂ ಅತಿರೇಕದ ವರ್ತನೆ ತೋರದಂತೆ, ಒಂದು ವೇಳೆ ತೋರಿದರೆ ಕ್ರಮ ಕೈಗೊಳ್ಳುವಂತೆ ಮುನ್ನೆಚ್ಚರಿಕೆ ವಹಿಸಲು ಎಲ್ಲ ಡಿಸಿಪಿಗಳು ಹಾಗೂ ಎಸಿಪಿಗಳಿಗೆ ಪೊಲೀಸ್ ಕಮಿಷನರ್ ಬಿ.ದಯಾನಂದ್ ನಿರ್ದೇಶನ ನೀಡಿದ್ದಾರೆ.
ಆರ್ಸಿಬಿ ಗೆದ್ದರೆ ಸಂಭ್ರಮಾಚರಣೆ ವೇಳೆ ಯಾವುದೇ ಅವಘಡಗಳು ಸಂಭವಿಸದಂತೆ ಅಗತ್ಯ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚಿಸಲಾಗಿದೆ. ಅಭಿಮಾನದ ಹೆಸರಿನಲ್ಲಿ ಅತಿರೇಕದ ವರ್ತನೆ ತೋರುವಂತಿಲ್ಲ. ರಸ್ತೆ ತಡೆಯುವುದು, ಟೈರ್ಗೆ ಬೆಂಕಿ ಹಚ್ಚುವುದು, ವಾಹನ ತಡೆಯುವುದು. ಸಾರ್ವಜನಿಕರಿಗೆ ತೊಂದರೆ, ಶಾಂತಿಭಂಗ ಉಂಟು ಮಾಡುವಂತಿಲ್ಲ. ಈ ಬಗ್ಗೆ ನಿಗಾ ವಹಿಸುವಂತೆ ಡಿಸಿಪಿ, ಎಸಿಪಿಗಳಿಗೆ ಕಮಿಷನರ್ ಸೂಚನೆ ನೀಡಿದ್ದಾರೆ.

 

 

 

 

 

 

 

ಆಯಾ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಮುನ್ನೆಚ್ಚರಿಕೆ ವಹಿಸಬೇಕೆಂದು ಹೇಳಲಾಗಿದೆ. ಎಂ.ಜಿ.ರಸ್ತೆ, ಕೋರಮಂಗಲ, ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ನಿಗಾ ಹೆಚ್ಚಿಸಲಾಗುತ್ತದೆ. ಬೆಂಗಳೂರಿನಲ್ಲಿ ಸ್ಕ್ರೀನ್ ಅಳವಡಿಸಿರುವ ಕಡೆ ಪೊಲೀಸರ ಕಣ್ಗಾವಲು ಇರಲಿದೆ. ಪೊಲೀಸರ ಅನುಮತಿ ಪಡೆಯದೆ ಸ್ಕ್ರೀನ್ ಅಳವಡಿಕೆ ಮಾಡುವಂತಿಲ್ಲ ಎಂದು ಕಮಿಷನರ್ ಬಿ.ದಯಾನಂದ್ ತಿಳಿಸಿದ್ದಾರೆ. ಹಾಗೆಯೇ ಪಬ್, ಕ್ಲಬ್, ರೆಸ್ಟೋರೆಂಟ್ ಗಳು ಅವಧಿ ಮೀರಿ ಕಾರ್ಯಾಚರಣೆ ಮಾಡುವಂತಿಲ್ಲ. ರೆಸ್ಟೋರೆಂಟ್ ಗಳನ್ನು ನಿಗದಿತ ಸಮಯಕ್ಕೆ ಬಂದ್ ಮಾಡಬೇಕು ಎಂದು ಸೂಚನೆ ನೀಡಲಾಗಿದೆ. ಎಲ್ಲೆಡೆ ಹೊಯ್ಸಳ ಮತ್ತು ಬೀಟ್ ಪೊಲೀಸರು ಗಸ್ತು ಕಾರ್ಯಾಚರಣೆ ಹೆಚ್ಚಿಸಿ ನಿಗಾ ವಹಿಸಲಿದ್ದಾರೆ ಎಂದು ಬಿ.ದಯಾನಂದ್ ತಿಳಿಸಿದ್ದಾರೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು