ಕನ್ನಡಿಗರ ವಿರೋಧಕ್ಕೆ ಸಿಲುಕಿಕೊಂಡಿದ್ದ ‘ಥಗ್ ಲೈಫ್’ ಚಿತ್ರಕ್ಕೆ ತಮಿಳಿಗರಿಂದಲೇ ಛೀಮಾರಿ….

‘ಥಗ್ ಲೈಫ್’ ರಿಲೀಸ್ ಸಿನಿಮಾ ಸಂದರ್ಭದಲ್ಲಿ ಕನ್ನಡಿಗರ ವಿರೋಧ ಕಟ್ಟಿಕೊಂಡು ತಮಿಳಿನಾಡಿನಿಂದ ಒಂದೇ ಎಲ್ಲಾ ದುಡ್ಡು ಬಾಚಿಕೊಳ್ಳುತ್ತೇನೆ ಎಂದು ಧಿಮಾಕು ತೋರಿಸಿಕೊಂಡು ಹೋಗಿದ್ದ ಕಮಲ್ ಹಾಸನ್ಗೆ ತಮಿಳಿಗರೇ ಉಗಿದು ಉಪ್ಪಿನ ಕಾಯಿ ಹಾಕುತ್ತಿದ್ದಾರೆ. ಅವರ ನಟನೆಯ ‘ಥಗ್ ಲೈಫ್’ ಚಿತ್ರ ಇಂದು ಅಂದರೆ ಜೂನ್ 5 ಅಂದರೆ ರಿಲೀಸ್ ಆಗಿದೆ. ಈ ಸಿನಿಮಾನ ನೋಡಲು ಕನ್ನಡಿಗರೂ ಈ ಮೊದಲು ಕಾದಿದ್ದರು. ಆದರೆ, ಕಮಲ್ ಹಾಸನ್ ಅವರು ಯಾವಾಗ ‘ಕನ್ನಡ ಹುಟ್ಟಿದ್ದು ತಮಿಳಿನಿಂದ’ ಎಂದರೋ ಆ ಕ್ಷಣಕ್ಕೆ ಅವರು ಕನ್ನಡಿಗರ ವಿರೋಧ ಕಟ್ಟಿಕೊಂಡರು. ಈ ಚಿತ್ರವನ್ನು ಕರ್ನಾಟಕದಲ್ಲಿ ರಿಲೀಸ್ ಮಾಡಲು ಅವಕಾಶ ನೀಡಿಲ್ಲ. ಹೀಗಿರುವಾಗಲೇ ಚಿತ್ರಕ್ಕೆ ನೆಗೆಟಿವ್ ವಿಮರ್ಶೆ ಸಿಕ್ಕಿದೆ.

‘ಥಗ್ ಲೈಫ್’ ಚಿತ್ರದ ಈವೆಂಟ್ನಲ್ಲಿ ಮಾತನಾಡಿದ್ದ ಕಮಲ್ ಹಾಸನ್ ಅವರು ‘ಕನ್ನಡ ಹುಟ್ಟಿದ್ದು ತಮಿಳಿನಿಂದ’ ಎಂದು ಹೇಳಿದ್ದರು. ಆ ಬಳಿಕ ಅವರು ಕ್ಷಮೆ ಕೇಳಿಯೇ ಇಲ್ಲ. ಏನೇ ಆದರೂ ನಾನು ಕನ್ನಡಿಗರ ಬಳಿ ಕ್ಷಮೆ ಕೇಳಲ್ಲ, ನಾನು ತಪ್ಪೇ ಮಾಡಿಲ್ಲ ಎಂದು ಧಿಮಾಕು ತೋರಿಸುತ್ತಿದ್ದರು. ಈ ಸಮಯದಲ್ಲಿ ತಮಿಳಿಗರ ಓಲೈಕೆ ಮಾಡಲು ಕೂಡ ಪ್ರಯತ್ನಿಸಿದ್ದರು. ಈಗ ಅವರಿಗೆ ತಮಿಳಿಗರೇ ಪಾಠ ಕಲಿಸಿದ್ದಾರೆ. ‘ಅತಿ ಕೆಟ್ಟ ಸಿನಿಮಾ’ ಎಂದು ಕೆಲವರು ಹೇಳಿಕೊಂಡಿದ್ದಾರೆ. ಕಮಲ್ ಹಾಸನ್ ನಟನೆಯ ‘ಇಂಡಿಯನ್ 2’ ಚಿತ್ರವು ಈ ಮೊದಲು ರಿಲೀಸ್ ಆಗಿ ಅಟ್ಟರ್ ಫ್ಲಾಪ್ ಆಗಿತ್ತು. ಈಗ ಅನೇಕರು ‘ಥಗ್ ಲೈಫ್’ ನೋಡಿ ‘ಇಂಡಿಯನ್ 2’ ಚಿತ್ರವೇ ಚೆನ್ನಾಗಿದೆ ಎಂದು ಕೆಲವರು ಹೇಳುತ್ತಿದ್ದಾರೆ. ಅಂದರೆ ‘ಥಗ್ ಲೈಫ್’ ಚಿತ್ರ ಅದೆಷ್ಟು ಕೆಟ್ಟದಾಗಿ ಇರಬಹುದು ಎಂದು ಅನೇಕರು ಊಹಿಸುತ್ತಿದ್ದಾರೆ.‘ಥಗ್ ಲೈಫ್’ ಚಿತ್ರಕ್ಕೆ ಖ್ಯಾತ ನಿರ್ದೇಶಕ ಮಣಿರತ್ನಂ ನಿರ್ದೇಶನ ಇದೆ. ಈ ಚಿತ್ರದಲ್ಲಿ ಕತೆ ಹಾಗೂ ನಿರೂಪಣೆ ಯಾವುದೂ ಉತ್ತಮವಾಗಿಲ್ಲ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ. ಹೀಗಾಗಿ ಮೊದಲ ದಿನದ ಗಳಿಕೆ ಮೇಲೆ ಈ ವಿಮರ್ಶೆ ಸಾಕಷ್ಟು ಪರಿಣಾಮ ಬೀರಲಿದೆ. ಇನ್ನು, ಕಮಲ್ ಕ್ಷಮೆ ಕೇಳಿ ಕರ್ನಾಟಕದಲ್ಲಿ ಸಿನಿಮಾ ರಿಲೀಸ್ ಆದರೂ ಯಶಸ್ಸು ಕಾಣೋದು ಅನುಮಾನವೇ. ಚಿತ್ರದ ಮುಂದಿನ ಕಲೆಕ್ಷನ್ ಯಾವ ರೀತಿ ಇರುತ್ತದೆ ಎಂಬುದನ್ನು ಕಾದುನೋಡಬೇಕಿದೆ.

 

 

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!