ಯಮನ ರೀತಿಯಲ್ಲಿ ಫುಟ್ಪಾತ್ ಗೆ ವಿಸಿಟ್ ಕೊಟ್ಟ ಸಿಂಹ….

ಸಾಮಾಜಿಕ ಜಾಲತಾಣದಲ್ಲಿ ದಿನನಿತ್ಯ ಒಂದಲ್ಲ ಒಂದು ವಿಡಿಯೋಗಳು ವೈರಲ್ ಆಗುತ್ತಿರುತ್ತದೆ. ಕೆಲವು ವಿಡಿಯೋಗಳನ್ನು ನೋಡಿದಾಗ ಎದೆಯಲ್ಲಿ ನಡುಕ ಉಂಟಾಗುತ್ತದೆ. ಆದರೆ ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಪುಟ್‌ಪಾತ್‌ನಲ್ಲಿ ಮಲಗಿದ್ದ ವ್ಯಕ್ತಿಯೊಬ್ಬನ ಪಕ್ಕದಲ್ಲಿ ಸಿಂಹವೊಂದು ನಡೆದುಕೊಂಡು ಹೋಗಿದ್ದು ಈ ದೃಶ್ಯವು ಎಂತಹವರ ಎದೆಯನ್ನು ಝಲ್ ಎನ್ನುವಂತೆ ಮಾಡುತ್ತದೆ.. ಈ ವಿಡಿಯೋಗೆ ನೆಟ್ಟಿಗರು ಪ್ರತಿಕ್ರಿಯೆಗಳನ್ನು ನೀಡಿದ್ದು, ಈ ವ್ಯಕ್ತಿಯ ಅದೃಷ್ಟ ಚೆನ್ನಾಗಿದ್ದೀರಬೇಕು ಎಂದು ಇನ್ನು ನಾನಾ ರೀತಿಯ ವಿಭಿನ್ನ ಕಾಮೆಂಟ್‌ಗಳನ್ನು ಮಾಡಿದ್ದಾರೆ.

ಮನುಷ್ಯನ ಸ್ವಾರ್ಥದಿಂದ ಕಾಡು ಸಂಪೂರ್ಣವಾಗಿ ನಾಶವಾಗಿದೆ. ಈ ಕಾಡಿನ ವಿನಾಶದಿಂದ ಅರಣ್ಯದಲ್ಲಿನ ಪ್ರಾಣಿಗಳೆಲ್ಲಾ ಆಹಾರವನ್ನರಸುತ್ತಾ ನಾಡಿನ ಕಡೆಗೆ ಬರುವುದು ಹೊಸದೇನಲ್ಲ. ಹೀಗೆ ಆಹಾರವನ್ನರಸುತ್ತಾ ಬರುವ ಈ ಪ್ರಾಣಿಗಳು ಜನರು, ಶ್ವಾನ ಮತ್ತು ದನಕರುಗಳ ಮೇಲೆ ದಾಳಿ ಮಾಡುತ್ತವೆ. ಆದರೆ ಇದೀಗ ಎದೆ ಝಲ್ ಎನಿಸುವ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಪುಟ್‌ಪಾತ್‌ನಲ್ಲಿ ಮಲಗಿದ್ದ ವ್ಯಕ್ತಿಯೊಬ್ಬನ ಪಕ್ಕದಲ್ಲೇ ರಾಜಾರೋಷವಾಗಿ ಸಿಂಹಿಣಿಯೊಂದು ನಡೆದುಕೊಂಡು ಹೋಗಿದೆ. ಈ ಬಗ್ಗೆ ಅರಿವಿಲ್ಲದೇ ವ್ಯಕ್ತಿಯೂ ಗಾಢ ನಿದ್ರೆಯಲ್ಲಿ ಮುಳುಗಿದ್ದಾನೆ. ಈ ವಿಡಿಯೋವೊಂದು ವೈರಲ್ ಆಗುತ್ತಿದ್ದಂತೆ ಬಳಕೆದಾರರು ಈ ದೃಶ್ಯ ಕಂಡು ಬೆಚ್ಚಿ ಬಿದ್ದಿದ್ದಾರೆ.

ವೈರಲ್ ಆಗಿರುವ ಈ ವಿಡಿಯೋಗೆ ಹಲವಾರು ಬಳಕೆದಾರರು ನಾನಾ ರೀತಿಯ ಕಾಮೆಂಟ್ ಗಳನ್ನು ಮಾಡಿದ್ದಾರೆ. ಒಬ್ಬ ಬಳಕೆದಾರರು, ಇದು ಎಐನಿಂದ ರಚಿಸಲಾದ ವಿಡಿಯೋ ಎಂದಿದ್ದಾರೆ. ಮತ್ತೊಬ್ಬರು, ಆ ವ್ಯಕ್ತಿಯೂ ಈ ವಿಡಿಯೋ ನೋಡಿದರೆ ಇನ್ನು ಜನ್ಮದಲ್ಲಿಯೂ ಈ ಪುಟ್ ಪಾತ್ ನಲ್ಲಿ ಮಲಗುವ ಸಾಹಸಕ್ಕೆ ಕೈ ಹಾಕಲ್ಲ ಎಂದು ಕಾಮೆಂಟ್ ನಲ್ಲಿ ತಿಳಿಸಿದ್ದಾರೆ. ಇನ್ನೊಬ್ಬ ಬಳಕೆದಾರ, ಈ ಸ್ಥಳ ಗುಜರಾತ್ ಆಗಿರಬೇಕು, ಅಲ್ಲಿ ಇಂತಹ ದೃಶ್ಯಗಳು ಆಗಾಗ ಕಾಣಸಿಗುತ್ತದೆ ಎಂದಿದ್ದಾರೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!