ಹಣ್ಣುಗಳ ರಾಣಿ ಎಂದೇ ಕರೆಸಿಕೊಳ್ಳುವ ಈ ಹಣ್ಣಿನ ಹೆಸರು ಗೊತ್ತಾ?..

ಹಣ್ಣುಗಳು ಎಂದೊಡನೆ ಎಂತವರಿಗಾದರೂ ತಿನ್ನಬೇಕೆಂಬ ಆಸೆ ಆಗುತ್ತದೆ. ನಮಗೆ ಗೊತ್ತೇ ಇರದ ಅದೆಷ್ಟೋ ವಿಶಿಷ್ಟ ಜಾತಿಯ ಹಣ್ಣುಗಳು ಈ ಸೃಷ್ಟಿಯಲ್ಲಿವೆ.ಸಾಮಾನ್ಯವಾಗಿ ಹಣ್ಣುಗಳ ರಾಜ ಎಂದ ಕೇಳಿದ ಕೂಡಲೇ ನೆನಪಿಗೆ ಬರುವುದೇ ಈ ಮಾವಿನಹಣ್ಣು. ಹಾಗಾದ್ರೆ ಹಣ್ಣುಗಳ ರಾಣಿ ಎಂದು ಯಾವ ಹಣ್ಣನ್ನು ಕರೆಯುತ್ತಾರೆ ಎಂದು ನಿಮಗೆ ತಿಳಿದಿದೆಯೇ. ಹಣ್ಣುಗಳ ರಾಣಿ ಕೂಡ ಇದೆಯೇ ಎಂದು ನಿಮಗೆ ಅಚ್ಚರಿಯಾಗಬಹುದು. ಹೌದು, ಈ ಬಗ್ಗೆ ಹೆಚ್ಚಿನವರಿಗೆ ತಿಳಿದೇ ಇಲ್ಲ. ಕ್ವೀನ್ ಆಫ್ ಫ್ರೂಟ್ಸ್ ಎನ್ನುವ ಖ್ಯಾತಿಗೆ ಪಾತ್ರರಾಗಿರುವ ಈ ಹಣ್ಣಿನ ಕುರಿತಾದ ಕೆಲವು ಕುತೂಹಲಕಾರಿ ಮಾಹಿತಿ ಇಲ್ಲಿದೆ. ಹಣ್ಣುಗಳ ರಾಣಿ ಎಂದೇ ಖ್ಯಾತಿ ಪಡೆದಿರುವ ಹಣ್ಣು ಮ್ಯಾಂಗೋಸ್ಟೀನ್. ಇದೊಂದು ಉಷ್ಣವಲಯದಲ್ಲಿ ಬೆಳೆಯಲಾಗುವ ಹಣ್ಣಾಗಿದ್ದು, ಇಲ್ಲಿಯವರೆಗೆ ಈ ಹಣ್ಣಿನ ಹೆಸರನ್ನು ಕೇಳಿರಲೇ ಇಲ್ಲವಲ್ಲ ಎಂದು ನಿಮಗೆ ಅನಿಸಬಹುದು. ಆದರೆ ಇದೇ ಹಣ್ಣುಗಳ ರಾಣಿ.

ಇನ್ನು ಈ ಹಣ್ಣು ಯಾವ ರೀತಿ ಇರುತ್ತದೆ ಎಂಬುದನ್ನು ನೋಡುವುದಾದರೆ, ಈ ಮ್ಯಾಂಗೋಸ್ಟೀನ್ ಹಣ್ಣು ನೋಡುವುದಕ್ಕೆ ಗಾಢ ನೇರಳೆ ಬಣ್ಣದಲ್ಲಿದ್ದು, ಒಳಗೆ ಬಿಳಿ ಬಣ್ಣದ ತಿರುಳನ್ನು ಹೊಂದಿದ್ದು, ನೋಡುವುದಕ್ಕೆ ಮಾತ್ರವಲ್ಲ ರುಚಿ ಕೂಡ ಅಷ್ಟೇ ಅದ್ಭುತ. ಈ ಹಣ್ಣಿನ ಸೇವನೆಯಿಂದ ಆರೋಗ್ಯ ಲಾಭಗಳು ಸಾಕಷ್ಟು ಇವೆ.ಥೈಲ್ಯಾಂಡ್, ಮಲೇಷಿಯಾ, ಇಂಡೋನೇಷ್ಯಾ ಹಾಗೂ ಫಿಲಿಪೈನ್ಸ್ ನಲ್ಲಿ ಹೇರಳವಾಗಿ ಬೆಳೆಯಲಾಗುವ ಈ ಹಣ್ಣು ಋತುಮಾನದ ಹಣ್ಣಾಗಿದೆ. ಕೇರಳ, ಕರ್ನಾಟಕದ ಕರಾವಳಿ ಪ್ರದೇಶಗಳಲ್ಲಿ ಈ ಹಣ್ಣು ಕಾಣಸಿಗುತ್ತದೆ.

ಭಾರತದಲ್ಲಿ ಈ ಹಣ್ಣು ಮೇ ಆಗಸ್ಟ್ ತಿಂಗಳಿನಲ್ಲಿ ಹೇರಳವಾಗಿ ಕಾಣಸಿಗುತ್ತದೆ. ಇದು ರುಚಿಯಲ್ಲಿ ಮಾವಿನ ಹಣ್ಣಿನಂತೆ ಇದ್ದು, ಹೀಗಾಗಿ ಇದಕ್ಕೆ ಮ್ಯಾಂಗೋಸ್ಟೀನ್ ಎಂಬ ಹೆಸರು ಬಂದಿತಂತೆ. ಅಷ್ಟೇ ಅಲ್ಲದೇ, 1930ರ ದಶಕದಲ್ಲಿ ಅಮೆರಿಕಾದ ಸಸ್ಯಶಾಸ್ತ್ರಜ್ಞ ಡೇವಿಡ್ ಫೇರ್ಚೈಲ್ಡ್ ಮ್ಯಾಂಗೋಸ್ಟೀನ್ಗೆ “ಹಣ್ಣುಗಳ ರಾಣಿ” ಎಂದು ಕರೆದಿದ್ದು, ಅಂದಿನಿಂದ ರಸಭರಿತವಾದ ಈ ಹಣ್ಣು ಈ ಹೆಸರಿನಿಂದಲೇ ಜನಪ್ರಿಯವಾಯಿತು.

Related Posts

ಮೆಲೋಡಿ ಡಿಪ್ಲೊಮಸಿ: “ನಾವು ಜಗದ್ವಿಖ್ಯಾತ ಜೋಡಿ” ಎಂದ ಇಟಲಿ ಪ್ರಧಾನಿ ಮೆಲೋನಿ

ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ನಡುವಿನ ಆತ್ಮೀಯ ಸ್ನೇಹ ಇಡೀ ವಿಶ್ವದ ಗಮನ ಸೆಳೆದಿದೆ. ಇವರಿಬ್ಬರ ರಾಜತಾಂತ್ರಿಕ ಒಡನಾಟವು ಭಾರತ ಮತ್ತು ಇಟಲಿ ನಡುವಿನ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುತ್ತಿದೆ. ಪ್ರಸ್ತುತ ನಡೆಯುತ್ತಿರುವ ಜಿ7…

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

You Missed

ಮೆಲೋಡಿ ಡಿಪ್ಲೊಮಸಿ: “ನಾವು ಜಗದ್ವಿಖ್ಯಾತ ಜೋಡಿ” ಎಂದ ಇಟಲಿ ಪ್ರಧಾನಿ ಮೆಲೋನಿ

ಮೆಲೋಡಿ ಡಿಪ್ಲೊಮಸಿ: “ನಾವು ಜಗದ್ವಿಖ್ಯಾತ ಜೋಡಿ” ಎಂದ ಇಟಲಿ ಪ್ರಧಾನಿ ಮೆಲೋನಿ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!