2000 ಇರುವವರಿಗೆ ಮಾತ್ರ ಆಷಾಢ ಶುಕ್ರವಾರದ ವಿಶೇಷ ದರ್ಶನದ ಪ್ಯಾಕೇಜ್! ಉಳಿದವರ ಗತಿ ಏನು?

ಮೈಸೂರು :- ಈ ಬಾರಿ ಆಷಾಢ ಮಾಸದ ಶುಕ್ರವಾರದ ದರ್ಶನದ ಹಿನ್ನೆಲೆಯಲ್ಲಿ ವಾರಾಂತ್ಯದ ಶುಕ್ರವಾರ, ಶನಿವಾರ ಮತ್ತು ಭಾನುವಾರಗಳಂದು ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನ ಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಚಾಮುಂಡಿಬೆಟ್ಟದ ಶ್ರೀ ಚಾಮುಂ ಡೇಶ್ವರಿ ದೇಗುಲದಲ್ಲಿ ಜೂ.27, ಜು.4, 11 ಮತ್ತು 15ರಂದು ದೇವರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಜ.17ರಂದು ಶ್ರೀ ಚಾಮುಂಡೇಶ್ವರಿ ಅಾನವರ ವರ್ಧಂತ್ಯುತ್ಸವ ನಡೆಯಲಿದ್ದು, ಚಾಮುಂಡೇಶ್ವರಿ ಕ್ಷೇತ್ರಾಭಿವೃದ್ಧಿ ಪ್ರಾಧಿ ಕಾರ, ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸಹಯೋಗದಲ್ಲಿ ದೇವರ ದರ್ಶನಕ್ಕೆ ಸರ್ವ ಸಿದ್ಧತೆ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.

ಮೈಸೂರಿನ ಜಿಲ್ಲಾ ಪಂಚಾಯ್ತಿ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಆಷಾಢ ಶುಕ್ರವಾರ ಸಂಬಂಧ ಪೂರ್ವಭಾವಿ ಸಭೆ ನಡೆಸಿದ ಬಳಿಕ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಚಾಮುಂಡಿಬೆಟ್ಟದಲ್ಲಿ ಜೂನ್ 27ರಿಂದ ಜುಲೈ 18ರವರೆಗೆ ನಾಲ್ಕು ಶುಕ್ರವಾರಗಳಂದು ಆಷಾಢ ಮಾಸಾಚರಣೆ ಇರುವುದರಿಂದ ಲಕ್ಷಾಂತರ ಭಕ್ತರು ಅಧಿದೇವತೆ ತಾಯಿ ಶ್ರೀ ಚಾಮುಂಡೇಶ್ವರಿ ಅಮ್ಮನವರ ದರ್ಶನ ಪಡೆಯಲು ಬರುವುದರಿಂದ ಸರ್ವ ರೀತಿಯಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ.

ನೂಕು-ನುಗ್ಗಲನ್ನು ತಡೆಯುವ ಸಲು ವಾಗಿ ವಾರಾಂತ್ಯದ ಶುಕ್ರವಾರ, ಶನಿವಾರ ಮತ್ತು ಭಾನುವಾರಗಳಂದು ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶ ನಿರ್ಬಂಧಿಸಲಾಗಿದ್ದು, ಲಲಿತಮಹಲ್ ಹೆಲಿಪ್ಯಾಡ್ ನಿಂದ 2,000 ರೂ. ವಿಶೇಷ ಗಾಗಿ ಪ್ರತ್ಯೇಕ ಎಸಿ ಬಸ್ಗಳನ್ನು ವ್ಯವಸ್ಥೆ. ಈ ಪ್ಯಾಕೇಜ್ ನಲ್ಲಿ ತೆರಳುವ ದರ್ಶನದ ಟಿಕೆಟ್ ಪಡೆಯುವ ಭಕ್ತರಿಗೆ ಪ್ರತ್ಯೇಕ ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಮಾಡಬಹುದಾಗಿದ್ದು, ಅಂತಹ ಭಕ್ತರಿಗೆ ಲಾಡು ಪ್ರಸಾದ, ಗಂಡ ಭೇರುಂಡ ವಿಗ್ರಹ, ಕುಂಕುಮ, ಕೈ ದಾರ ವುಳ್ಳ ಕಿಟ್ ಅನ್ನು ನೀಡಲಾಗುವುದು. ಆದೇ ರೀತಿ 300 ರೂ.ಗಳ ಟಿಕೆಟ್ ದರ್ಶನದ ಸರತಿ ಸಾಲಿನ ವ್ಯವಸ್ಥೆಯೂ ಇರುತ್ತದೆ . 2000 ರೂ. ವಿಶೇಷ 6ನೇ ಪುಟಕ್ಕೆ ಸರತಿ ಸಾಲು ಹಾಗೂ ಉಚಿತ ದರ್ಶನದ
ದರ್ಶನದ ಟಿಕೆಟ್ ಪಡೆದು ಬರುವ ಭಕ್ತರನ್ನು ಸಿಬ್ಬಂದಿ ಕರೆದೊಯ್ದು ದೇವರ ದರ್ಶನ ಮಾಡಿಸಿ ಸುರಕ್ಷಿತವಾಗಿ ಕರೆತರು ವರಲ್ಲದೆ, ಅವರ ವಾಹನಗಳಿಗೂ ಪ್ರತ್ಯೇಕ ನಿಲುಗಡೆ ವ್ಯವಸ್ಥೆ ಮಾಡಲಾಗಿದೆ.

ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಭಕ್ತರಿಗಾಗಿ ಚಾಮುಂಡಿಬೆಟ್ಟದಲ್ಲಿ ಕುಡಿಯುವ ನೀರು, ಶೌಚಾಲಯ, ಪ್ರಸಾದ, ಸ್ವಚ್ಛತೆ ವ್ಯವಸ್ಥೆ ಯನ್ನು ಮಾಡಲಾಗಿದ್ದು, ವಿವಿಧ ಇಲಾಖೆ ಗಳ ಅಧಿಕಾರಿಗಳು ಸಮನ್ವಯ ಸಾಧಿಸಿ ಯಾವುದೇ ತೊಂದರೆ, ಗೊಂದಲ ಉಂಟಾಗದಂತೆ ಸರ್ವ ರೀತಿಯಲ್ಲಿ ಸೌಲಭ್ಯ ಕಲ್ಪಿಸಬೇಕೆಂದು ಅಧಿಕಾರಿಗಳಿಗೆ ನಿರ್ದೆಶನ ನೀಡಲಾಗಿದ್ದು, ಭದ್ರತೆಗಾಗಿ ನಗರ ಪೊಲೀಸ್ ಘಟಕದ ವತಿಯಿಂದ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಿ ಭಕ್ತರ ಸುರಕ್ಷತೆಗೆ ಆಧ್ಯತೆ ನೀಡ ಲಾಗುವುದು ಎಂದು ಡಾ. ಹೆಚ್.ಸಿ. ಮಹದೇವಪ್ಪ ಇದೇ ವೇಳೆ ತಿಳಿಸಿದರು.

ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಅಭಿವೃದ್ಧಿ ಪ್ರಾಧಿಕಾರ, ಮೈಸೂರು ಮಹಾನಗರಪಾಲಿಕೆ, ನಿರ್ಮಿತಿ ಕೇಂದ್ರ, ಆರೋಗ್ಯ ಇಲಾಖೆ, ಅಗ್ನಿಶಾಮಕ ದಳ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ, ಕೆಎಸ್ಆರ್ಟಿಸಿ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ನಾಲ್ಕೂ ಆಷಾಢ ಶುಕ್ರವಾರಗಳಂದು ಹಾಜರಿದ್ದು, ಭಕ್ತರಿಗೆ ಸಕಲ ಸೌಲಭ್ಯ ಗಳನ್ನು ಒದಗಿಸುವಂತೆ ನಿರ್ದೇಶನ ನೀಡಲಾಗಿದ್ದು, ಬೆಟ್ಟಕ್ಕೆ ಆಗಮಿಸುವ ಭಕ್ತಾದಿಗಳ ಅನುಕೂಲಕ್ಕಾಗಿ ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಲ್ಲಿರುವ ಲಲಿತ ಮಹಲ್ ಹೆಲಿಪ್ಯಾಡ್ ಮೈದಾನದಿಂದ ಕೆಎಸ್ಆರ್ಟಿಸಿ ಬಸ್ಸುಗಳಲ್ಲಿ ಉಚಿತ ವಾಗಿ ತೆರಳಲು ವ್ಯವಸ್ಥೆ ಮಾಡಲಾಗಿದೆ ಎಂದರು. ಈ ಸಂಬಂಧ ಈಗಾಗಲೇ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಗಳನ್ನು ನಡೆಸಿ ಪೂರ್ವ ಸಿದ್ಧತೆ ಮಾಡಿಕೊಂಡಿ ದ್ದಾರೆ. ಭಕ್ತರು ಯಾವುದೇ ಗೊಂದಲ ಇಲ್ಲದಂತೆ ಶಾಂತಿಯಿಂದ ತಾಯಿ ಚಾಮುಂಡೇಶ್ವರಿ ದೇವಿಯ ದರ್ಶನ ಮಾಡುವಂತೆಯೂ ಅವರು ಇದೇ ಸಂದರ್ಭ ತಿಳಿಸಿದರು.


ಶಾಸಕ ಜಿ.ಟಿ.ದೇವೇಗೌಡ, ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದ ರಾಮಯ್ಯ, ಜಿಲ್ಲಾಧಿಕಾರಿ ಜಿ.ಲಕ್ಷ್ಮೀ ಕಾಂತ ರೆಡ್ಡಿ, ನಗರಪಾಲಿಕೆ ಆಯುಕ್ತ ಶೇಕ್ ತನ್ನೀರ್ ಆಸಿಫ್, ನಗರ ಪೊಲೀಸ್ ಕಮಿಷ್ಕರ್ ಸೀಮಾ ಲಾಟ್ಕರ್, ಎಸ್ಪಿ ಎನ್.ವಿಷ್ಣುವರ್ಧನ, ಎಂಡಿಎ ಆಯುಕ್ತ ಕೆ.ಆರ್.ರಕ್ಷಿತ್, ಕಬಿನಿ ವೃತ್ತದ ಸೂಪರಿಂ ಟೆಂಡಿಂಗ್ ಇಂಜಿನಿಯರ್ ಕೆ.ಮಹೇಶ್, ಮೈಸೂರು ವೃತ್ತದ ಅರಣ್ಯ ಸಂರಕ್ಷಣಾ ಧಿಕಾರಿ (ಸಿಎಫ್) ಡಾ. ಮಾಲತಿಪ್ರಿಯ, ಎಐಎಡಿಬಿ ವಿಶೇಷ ಭೂ ಸ್ವಾಧೀನಾಧಿ ಕಾರಿ ಡಾ. ಎನ್.ಸಿ.ವೆಂಕಟರಾಜು, ಸೆಸ್ಕ್ ಸೂಪರಿಂಟೆಂಡಿಂಗ್ ಇಂಜಿನಿಯರ್ ಸುನಿಲ್, ತಹಸೀಲ್ದಾರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿ ಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!