ಪದವಿಯ ಕನಸುಗಳೊಂದಿಗೆ ಲಂಡನ್‌ಗೆ ಹೋಗಿದ್ದ ಆಟೋ ಚಾಲಕನ ಮಗಳ ದುರಂತ ಅಂ*ತ್ಯ!

ಅಹಮದಾಬಾದ್: ಗುಜರಾತ್ನ ಹಿಮತ್ನಗರದ ಗೂಡ್ಸ್ ಆಟೋ ಚಾಲಕನ ಮಗಳಾದ ಪಾಯಲ್ ಖಾಟಿಕ್ ಎಂಟೆಕ್ ಪದವಿಯ ಕನಸು ಹೊತ್ತು ಲಂಡನ್ಗೆ ಹೊರಟಿದ್ದಳು. ಆದರೆ ಅವಳ ಹಾಗೂ ಕುಟುಂಬದ ಕನಸು ಆಗಸದಲ್ಲಿ ಛಿದ್ರವಾಗಿದೆ. ಹೌದು, ಅಹಮದಾಬಾದ್ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಅವಳು ಸಾವನ್ನಪ್ಪಿದ್ದಾಳೆ.

 

 

 

 

 

 

ಪಾಯಲ್ ತಂದೆ ರಿಕ್ಷಾ ಚಾಲಕರಾಗಿದ್ದು, ಗುರುವಾರ ಮಗಳನ್ನು ವಿಮಾನ ಹತ್ತಿಸಿ ಉತ್ಸಾಹದಿಂದ ಕಳುಹಿಸಿದ್ದರು. ಅವಳು ಸುರಕ್ಷಿತವಾಗಿ ಲಂಡನ್ ತಲುಪುತ್ತಾಳೆ. ಅಲ್ಲಿ ಅಧ್ಯಯನ ಮಾಡಿ, ಉನ್ನತ ಸ್ಥಾನಕ್ಕೇರುತ್ತಾಳೆ ಎಂದು ಕುಂಟುಂಬಸ್ಥರು ಸಹ ಕನಸು ಕಂಡಿದ್ದರು. ಆದರೆ ವಿಧಿಯ ಆಟ ಮಾತ್ರ ಬೇರೆಯದೇ ಆಗಿತ್ತು. ಪಾಯಲ್ ಸಾವು ದೃಢಪಟ್ಟಿದ್ದು, ಡಿಎನ್ಎ ಪರೀಕ್ಷೆಯಿಂದ ಮೃತದೇಹ ಗುರುತಿಸಲಾಗಿದೆ.

 

 

 

 

 

 

ಮಗಳ ಕನಸಿನ ಬಗ್ಗೆ ಮಾತಾಡಿರುವ ತಂದೆ ಸುರೇಶ್ ಖಾಟಿಕ್, ಕಾಲೇಜು ಮುಗಿಸಿದ ನಂತರ ಪಾಯಲ್ ನಮ್ಮೊಂದಿಗೆ ಇದ್ದಳು. ಅವಳು ಲಂಡನ್ನಲ್ಲಿ ಹೆಚ್ಚಿನ ಅಧ್ಯಯನ ಮಾಡಲು ಬಯಸಿದ್ದಳು. ಅವಳ ಶಿಕ್ಷಣಕ್ಕಾಗಿ ಸಾಲ ಮಾಡಿದ್ದೆವು. ಅವಳಿಗೆ ಉದ್ಯೋಗ ಸಿಗುವ ಭರವಸೆ ಇತ್ತು. ಇದರಿಂದ ನಮ್ಮ ಬಡತನ ನೀಗುತ್ತದೆ ಎಂದು ಭಾವಿಸಿದ್ದೆವು. ಆದರೆ ಈಗ ಸಾಲ ಮರುಪಾವತಿಸಲು ಯಾವುದೇ ದಾರಿ ಇಲ್ಲ ಎಂದು ಕಣ್ಣೀರಿಟ್ಟದ್ದಾರೆ.

ಪಾಯಲ್ ಲಂಡನ್ನಲ್ಲಿ ಉನ್ನತ ಶಿಕ್ಷಣಕ್ಕಾಗಿ ಪ್ರವೇಶ ಪಡೆಯಲು ಹೋಗುತ್ತಿದ್ದಳು. ಸ್ಥಳೀಯರು, ಯುವತಿ ಬಾಲ್ಯದಿಂದಲೂ ಶಾಲೆಯ ಟಾಪರ್ ಆಗಿದ್ದಳು ಎಂದು ಹೇಳಿಕೊಂಡಿದ್ದಾರೆ. ಗುರುವಾರ ಅಹಮದಾಬಾದ್ನಲ್ಲಿ ಅಪಘಾತಗೊಂಡ ಏರ್ ಇಂಡಿಯಾ ವಿಮಾನದಲ್ಲಿ 12 ಮಂದಿ ಸಿಬ್ಬಂದಿ ಸೇರಿ 242 ಜನ ಇದ್ದರು. ಈ ಅವಘಡದಲ್ಲಿ 241 ಜನ ಸಾವನ್ನಪ್ಪಿದ್ದಾರೆ. ಓರ್ವ ಮಾತ್ರ ಪವಾಡ ಸದೃಶ್ಯವಾಗಿ ಬದುಕುಳಿದಿದ್ದಾರೆ.

 

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಅ*ತ್ಯಾಚಾ*ರಿಗಳಿಗೆ ಕಠಿಣ ಶಿಕ್ಷೆ ವಿಧಿಸಿ: ರೇಖಾ ಶ್ರೀನಿವಾಸ್

ಮೈಸೂರು: ಅ*ತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿದ ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್. ಪಶ್ಚಿಮ ಬಂಗಾಳದ ಬಾರುಪುರ್ ಮತ್ತುರಾಜಸ್ಥಾನದ ಶ್ರೀ ಗಂಗಾ ನಗರದಲ್ಲಿ ಅ*ಪ್ರಾಪ್ತ ಮೇಲೆ ನಡೆದ ಅ*ತ್ಯಾಚಾ*ರ ಘಟನೆಗಳು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿವೆ. ಪ್ರಪಂಚವನ್ನೇ ಅರಿಯದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!