ಪದವಿಯ ಕನಸುಗಳೊಂದಿಗೆ ಲಂಡನ್‌ಗೆ ಹೋಗಿದ್ದ ಆಟೋ ಚಾಲಕನ ಮಗಳ ದುರಂತ ಅಂ*ತ್ಯ!

ಅಹಮದಾಬಾದ್: ಗುಜರಾತ್ನ ಹಿಮತ್ನಗರದ ಗೂಡ್ಸ್ ಆಟೋ ಚಾಲಕನ ಮಗಳಾದ ಪಾಯಲ್ ಖಾಟಿಕ್ ಎಂಟೆಕ್ ಪದವಿಯ ಕನಸು ಹೊತ್ತು ಲಂಡನ್ಗೆ ಹೊರಟಿದ್ದಳು. ಆದರೆ ಅವಳ ಹಾಗೂ ಕುಟುಂಬದ ಕನಸು ಆಗಸದಲ್ಲಿ ಛಿದ್ರವಾಗಿದೆ. ಹೌದು, ಅಹಮದಾಬಾದ್ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಅವಳು ಸಾವನ್ನಪ್ಪಿದ್ದಾಳೆ.

 

 

 

 

 

 

ಪಾಯಲ್ ತಂದೆ ರಿಕ್ಷಾ ಚಾಲಕರಾಗಿದ್ದು, ಗುರುವಾರ ಮಗಳನ್ನು ವಿಮಾನ ಹತ್ತಿಸಿ ಉತ್ಸಾಹದಿಂದ ಕಳುಹಿಸಿದ್ದರು. ಅವಳು ಸುರಕ್ಷಿತವಾಗಿ ಲಂಡನ್ ತಲುಪುತ್ತಾಳೆ. ಅಲ್ಲಿ ಅಧ್ಯಯನ ಮಾಡಿ, ಉನ್ನತ ಸ್ಥಾನಕ್ಕೇರುತ್ತಾಳೆ ಎಂದು ಕುಂಟುಂಬಸ್ಥರು ಸಹ ಕನಸು ಕಂಡಿದ್ದರು. ಆದರೆ ವಿಧಿಯ ಆಟ ಮಾತ್ರ ಬೇರೆಯದೇ ಆಗಿತ್ತು. ಪಾಯಲ್ ಸಾವು ದೃಢಪಟ್ಟಿದ್ದು, ಡಿಎನ್ಎ ಪರೀಕ್ಷೆಯಿಂದ ಮೃತದೇಹ ಗುರುತಿಸಲಾಗಿದೆ.

 

 

 

 

 

 

ಮಗಳ ಕನಸಿನ ಬಗ್ಗೆ ಮಾತಾಡಿರುವ ತಂದೆ ಸುರೇಶ್ ಖಾಟಿಕ್, ಕಾಲೇಜು ಮುಗಿಸಿದ ನಂತರ ಪಾಯಲ್ ನಮ್ಮೊಂದಿಗೆ ಇದ್ದಳು. ಅವಳು ಲಂಡನ್ನಲ್ಲಿ ಹೆಚ್ಚಿನ ಅಧ್ಯಯನ ಮಾಡಲು ಬಯಸಿದ್ದಳು. ಅವಳ ಶಿಕ್ಷಣಕ್ಕಾಗಿ ಸಾಲ ಮಾಡಿದ್ದೆವು. ಅವಳಿಗೆ ಉದ್ಯೋಗ ಸಿಗುವ ಭರವಸೆ ಇತ್ತು. ಇದರಿಂದ ನಮ್ಮ ಬಡತನ ನೀಗುತ್ತದೆ ಎಂದು ಭಾವಿಸಿದ್ದೆವು. ಆದರೆ ಈಗ ಸಾಲ ಮರುಪಾವತಿಸಲು ಯಾವುದೇ ದಾರಿ ಇಲ್ಲ ಎಂದು ಕಣ್ಣೀರಿಟ್ಟದ್ದಾರೆ.

ಪಾಯಲ್ ಲಂಡನ್ನಲ್ಲಿ ಉನ್ನತ ಶಿಕ್ಷಣಕ್ಕಾಗಿ ಪ್ರವೇಶ ಪಡೆಯಲು ಹೋಗುತ್ತಿದ್ದಳು. ಸ್ಥಳೀಯರು, ಯುವತಿ ಬಾಲ್ಯದಿಂದಲೂ ಶಾಲೆಯ ಟಾಪರ್ ಆಗಿದ್ದಳು ಎಂದು ಹೇಳಿಕೊಂಡಿದ್ದಾರೆ. ಗುರುವಾರ ಅಹಮದಾಬಾದ್ನಲ್ಲಿ ಅಪಘಾತಗೊಂಡ ಏರ್ ಇಂಡಿಯಾ ವಿಮಾನದಲ್ಲಿ 12 ಮಂದಿ ಸಿಬ್ಬಂದಿ ಸೇರಿ 242 ಜನ ಇದ್ದರು. ಈ ಅವಘಡದಲ್ಲಿ 241 ಜನ ಸಾವನ್ನಪ್ಪಿದ್ದಾರೆ. ಓರ್ವ ಮಾತ್ರ ಪವಾಡ ಸದೃಶ್ಯವಾಗಿ ಬದುಕುಳಿದಿದ್ದಾರೆ.

 

Related Posts

ನೇಪಾಳ ಪ್ರವಾಹ: ಕನ್ನಡಿಗರು ಸುರಕ್ಷಿತ, ಧೈರ್ಯ ತುಂಬಿದ ಸಿಎಂ

ನೇಪಾಳ ಹಾಗೂ ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ಮೂಲಸೌಕರ್ಯಗಳಿಗೆ ಅಪಾರ ಹಾನಿಯಾಗಿದೆ. ಈ ನೈಸರ್ಗಿಕ ವಿಕೋಪದ ನಡುವೆ ಸಿಲುಕಿದ್ದ ಕರ್ನಾಟಕದ 3 ಮಂದಿ ಸೇರಿದಂತೆ ಒಟ್ಟು 23 ಭಾರತೀಯರು…

ವಾಹನ ಸವಾರರಿಗೆ ಬಿತ್ತು ಬೆಲೆ ಏರಿಕೆ ಬಿಸಿ: ಕರ್ನಾಟಕದಲ್ಲಿ PUC ಮಾಲಿನ್ಯ ತಪಾಸಣೆ ದರ ಹೆಚ್ಚಳ!

ಅಗತ್ಯ ವಸ್ತುಗಳು ಹಾಗೂ ಇಂಧನ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಕರ್ನಾಟಕದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಮತ್ತೊಂದು ಆರ್ಥಿಕ ಹೊರೆ ನೀಡಿದೆ. ವಾಹನಗಳ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (PUCC) ಪಡೆಯಲು ಪಾವತಿಸಬೇಕಾದ ಶುಲ್ಕವನ್ನು ಸಾರಿಗೆ ಇಲಾಖೆಯು ಪರಿಷ್ಕರಿಸಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!