ವೇದಿಕೆ ಮೇಲೆ ಭಾಷಣ ಮಾಡುತ್ತಿರುವಾಗಲೇ ಕಳಚಿತು ಬಾಲಯ್ಯ ಮೀಸೆ;

ಬಾಲಯ್ಯ ಅವರು ಇತ್ತೀಚೆಗೆ ತಮ್ಮ 65ನೇ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಿಕೊಂಡರು. ಹೈದರಾಬಾದ್ನ ಬಸವತಾರಕಂ ಆಸ್ಪತ್ರೆಯಲ್ಲಿ ತಮ್ಮ ಅಭಿಮಾನಿಗಳ ಸಮ್ಮುಖದಲ್ಲಿ ಅವರು ವೇದಿಕೆ ಏರಿ ಮಾತನಾಡಿದರು. ಭಾಷಣ ಮಾಡುವಾಗ ರೋಷದಲ್ಲಿ ಮಾತನಾಡುತ್ತಿದ್ದರು. ಆದರೆ, ಈ ವೇಳೆ ಅವರ ಬಲಭಾಗದ ಮೀಸೆ ಸ್ವಲ್ಪ ಕಳಚಿದೆ. ಇದರಿಂದ ಅವರು ಆತಂಕಗೊಂಡರು. ತಕ್ಷಣ ಚೇತರಿಸಿಕೊಂಡು ಸಿಬ್ಬಂದಿಗೆ ಗಮ್ ನೀಡುವಂತೆ ಕೂಗಿದರು. ‘ಅಖಂಡ 2’ ಚಿತ್ರದ ಪ್ರಚಾರದ ವೇಳೆ ಈ ಘಟನೆ ನಡೆದಿದ್ದು, ಅವರು ತಕ್ಷಣ ಸಿಬ್ಬಂದಿಯ ಸಹಾಯ ಪಡೆದು ಮೀಸೆಯನ್ನು ಸರಿಪಡಿಸಿಕೊಂಡರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲ್ಪಟ್ಟಿದೆ.

ಗಮ್ ಕೊಟ್ಟ ತಕ್ಷಣ ಮೀಸೆಯನ್ನು ಸರಿಯಾಗಿ ಅಂಟಿಸಿಕೊಂಡು ಭಾಷಣ ಮುಂದುವರಿಸಿದರು. ಈ ವಿಡಿಯೋ ಈಗ ಇಂಟರ್ನೆಟ್ನಲ್ಲಿ ವೈರಲ್ ಆಗಿದೆ. ಸೋಶಿಯಲ್ ಮೀಡಿಯಾದಲ್ಲಿ ಅನೇಕರು ಇದನ್ನು ಮೀಮ್ ಮಾಡುತ್ತಿದ್ದಾರೆ. ಇದಕ್ಕೆ ನಾನಾ ಕಮೆಂಟ್ಗಳು ಬರುತ್ತಿವೆ. ‘ಮುಂದೊಂದು ದಿನ ತಲೆಗೆ ಹಾಕಿದ ಟೋಕನ್ ಕೂಡ ಕಳಚಬಹುದು. ಆ ಬಗ್ಗೆ ಗಮನ ಇರಲಿ’ ಎಂದು ಕೆಲವರು ಹೇಳಿದ್ದಾರೆ. ‘ಸಿನಿಮಾಗಳಲ್ಲೇನೋ ಮೀಸೆ ಅಂಟಿಸಿಕೊಳ್ಳುವುದು ಅನಿವಾರ್ಯ. ಆದರೆ, ನಿಜ ಜೀವನದಲ್ಲಿ ಇದೆಲ್ಲ ಬೇಕೇ’ ಎಂದು ಕೆಲವರು ಕೇಳಿದ್ದಾರೆ. ‘ಅಖಂಡ 2’ ಸಿನಿಮಾದ ಟೀಸರ್ ಇತ್ತೀಚೆಗೆ ರಿಲೀಸ್ ಆಗಿದೆ. ಸಾಮಾನ್ಯವಾಗಿ ಬಾಲಯ್ಯ ಸಿನಿಮಾಗಳಲ್ಲಿ ಮಾಸ್ ಅಂಶ ಹೆಚ್ಚೇ ಇರುತ್ತದೆ. ಆದರೆ, ‘ಅಖಂಡ 2’ ಚಿತ್ರದಲ್ಲಿ ಮಾಸ್ ಅಂಶ ಮಿತಿ ಮೀರಿದೆ ಎನ್ನಲಾಗುತ್ತಿದೆ. ಈ ಟೀಸರ್ನ ಅನೇಖರು ಮೀಮ್ಗೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!