ತಮ್ಮ ಸಂಗಾತಿಗಳಿಗೆ ಬಲು ನಿಷ್ಠೆಯಿಂದಿರುವ ಜೀವಿಗಳಿವು;

ಹೌದು ವೀಕ್ಷಕರೇ, ಮನುಷ್ಯರೇ ಆಗಿರಲಿ ಅಥವಾ ಪ್ರಾಣಿಗಳೇ ಆಗಿರಲಿ ಪ್ರೀತಿಯಲ್ಲಿ ಆಕರ್ಷಣೆ ಕಳೆದುಕೊಂಡಾಗ ಇನ್ನೊರ್ವರತ್ತ ಆಕರ್ಷಿತರಾಗುವುದು ಆಶ್ಚರ್ಯವೇನಲ್ಲ. ಅದರಲ್ಲೂ ಇಂದಿನ ಆಧುನಿಕ ಯುಗದಲ್ಲಿ ಮನುಷ್ಯರಲ್ಲಿ ಪ್ರೀತಿ, ಪ್ರೇಮ, ಸಂಬಂಧಕ್ಕೆ ಬೆಲೆಯೇ ಇಲ್ಲದಂತಾಗಿದೆ. ಡಿವೋರ್ಸ್, ಪ್ರೀತಿಯಲ್ಲಿ ಮೋಸ ಇಂತಹ ಘಟನೆಗಳು ನಡೆಯುತ್ತಲೇ ಇವೆ. ಆದ್ರೆ ಈ ಕೆಲವೊಂದಿಷ್ಟು ಜೀವಿಗಳು ಪ್ರೀತಿಯಲ್ಲಿ ತಮ್ಮ ಸಂಗಾತಿಗೆ ಜೀವನದುದ್ದಕ್ಕೂ ತುಂಬಾನೇ ನಿನಿಷ್ಠೆಯಿಂದ ಇರುತ್ತವಂತೆ. ಒಂದು ವೇಳೆ ತನ್ನ ಸಂಗಾತಿ ಸಾವನ್ನಪ್ಪಿದರೆ ಆ ಜೀವಿ ಒಂಟಿಯಾಗಿಯೇ ಜೀವನಪರ್ಯಂತ ಬದುಕುತ್ತವಂತೆ. ಹಾಗಿದ್ರೆ ತಮ್ಮ ಸಂಗಾತಿಗೆ ತುಂಬಾನೇ ನಿಷ್ಠವಾಗಿರುವ ಜೀವಿಗಳು ಯಾವುದೆಂಬುದನ್ನು ನೋಡೋಣ ಬನ್ನಿ.

ಹಂಸಗಳು: ಹಂಸ ಜೋಡಿಗಳನ್ನು ಪ್ರೀತಿಯ ನಿಜವಾದ ಸಂಕೇತವೆಂದು ಪರಿಗಣಿಸಲಾಗುತ್ತದೆ. ಒಂದು ಹಂಸವು ಇನ್ನೊಂದರೊಂದಿಗೆ ಜೋಡಿಯಾದ ನಂತರ, ಅವು ಒಟ್ಟಿಗೆ ಗೂಡುಗಳನ್ನು ನಿರ್ಮಿಸುತ್ತವೆ, ಮಕ್ಕಳನ್ನು ಒಟ್ಟಿಗೆ ಬೆಳೆಸುತ್ತವೆ ಮತ್ತು ಪೋಷಕರ ಕರ್ತವ್ಯಗಳನ್ನು ಹಂಚಿಕೊಳ್ಳುತ್ತವೆ .

ತೋಳಗಳು: ತೋಳಗಳು ಅಪಾಯಕಾರಿಯಾಗಿ ಕಾಣುತ್ತವೆ, ಆದರೆ ಅವುಗಳು ಪ್ರೀತಿಯ ವಿಚಾರದಲ್ಲಿ ತುಂಬಾನೇ ಸೌಮ್ಯವಾಗಿರುತ್ತವೆ. ಅವುಗಳು ತಮ್ಮ ಕುಟುಂಬ ಮತ್ತು ಸಂಗಾತಿಗೆ ಬಹಳ ನಿಷ್ಠವಾಗಿರುತ್ತವೆ.

ಬೋಳು ಹದ್ದು: ಅಮೆರಿಕ ರಾಷ್ಟ್ರೀಯ ಪಕ್ಷಿಯಾದ ಬೋಳು ಹದ್ದುಗಳು ತಮ್ಮ ಸಂಗಾತಿಗೆ ತುಂಬಾನೇ ನಿಷ್ಠವಾಗಿರುತ್ತವೆ. ಒಮ್ಮೆ ಅವು ಸಂಗಾತಿಯನ್ನು ಆರಿಸಿಕೊಂಡರೆ, ಅವು ಜೀವನಪರ್ಯಂತ ಒಂದೇ ಸಂಗಾತಿಯ ಜೊತೆಗೆ ಜೀವಿಸುತ್ತವೆ.

ಪೆಂಗ್ವಿನ್: ಪೆಂಗ್ವಿನ್ಗಳು ತಮ್ಮ ಜೀವನದುದ್ದಕ್ಕೂ ಒಂದೇ ಸಂಗಾತಿಯೊಂದಿಗೆ ಇರುತ್ತವೆ. ಅವುಗಳು ಒಟ್ಟಿಗೆ ಮರಿಗಳನ್ನು ನೋಡಿಕೊಳ್ಳುತ್ತವೆ. ಪೆಂಗ್ವಿನ್ಗಳ ನಡುವಿನ ಪ್ರೀತಿಯ ಭಾವನೆ ತುಂಬಾ ಪ್ರಬಲವಾಗಿರುತ್ತದೆ.

ಬೀವರ್ಗಳು: ಬೀವರ್ಗಳನ್ನು ವಿಶ್ವದ ಅತ್ಯಂತ ಶ್ರಮಶೀಲ ಪ್ರಾಣಿಗಳಲ್ಲಿ ಒಂದು ಎಂದು ಪರಿಗಣಿಸಲಾಗುತ್ತದೆ. ಅತ್ಯುತ್ತಮ ಎಂಜಿನಿಯರ್ ಅಂತಲೇ ಹೆಸರುವಾಸಿಯಾಗಿರುವ ಈ ಪುಟ್ಟ ಬೀವರ್ಗಳು ಪ್ರೀತಿ, ಸಂಬಂಧದ ವಿಚಾರದಲ್ಲೂ ತುಂಬಾನೇ ನಿಷ್ಠವಾಗಿರುತ್ತವೆ.

ಗಿಬ್ಬನ್ಸ್: ಮಂಗನ ಜಾತಿಗೆ ಸೇರಿದ ಈ ಪ್ರಾಣಿಗಳು ತಮ್ಮ ಸಂಗಾತಿಗಳೊಂದಿಗೆ ನಿಕಟ ಬಂಧಗಳನ್ನು ಸೃಷ್ಟಿಸುತ್ತವೆ. ಅವು ತಮ್ಮ ಮರಿಗಳನ್ನು ಒಟ್ಟಿಗೆ ಬೆಳೆಸುತ್ತವೆ ಮತ್ತು ಹೆಚ್ಚಿನ ಸಮಯವನ್ನು ತಮ್ಮ ಸಂಗಾತಿಯೊಂದಿಗೆ ಕಳೆಯುತ್ತವೆ. ತಮ್ಮ ಸಂಗಾತಿ ಸತ್ತರೆ ಒಂಟಿಯಾಗಿ ವಾಸಿಸುತ್ತವೆ.

 

 

 

 

 

 

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!