ಏರ್ ಇಂಡಿಯಾ ವಿಮಾನ ದುರಂತದ ವೇಳೆ ಟೀ ಅಂಗಡಿ ಬಳಿ ನಿಂತಿದ್ದ 14 ವರ್ಷದ ಬಾಲಕ ಸಾ*ವು!

ಅಹಮದಾಬಾದ್: ಏರ್ ಇಂಡಿಯಾ ವಿಮಾನ ದುರಂತದ ವೇಳೆ ಅಲ್ಲೇ ಪಕ್ಕದ ಟೀ ಸ್ಟಾಲ್ ಬಳಿ ನಿಂತಿದ್ದ 14 ವರ್ಷದ ಬಾಲಕ ಬೆಂಕಿಯ ತೀವ್ರತೆಗೆ ಸಿಲುಕಿ ದಾರುಣ ಅಂತ್ಯ ಕಂಡಿದ್ದಾನೆ.

 

 

 

 

 

 

ಆಕಾಶ್ (14) ಮೃತ ಬಾಲಕ. ಬಿಜೆ ಹಾಸ್ಟೆಲ್ನ ಮುಂಭಾಗ ಆಕಾಶ್ ಕುಟುಂಬವು ಟೀ ಅಂಗಡಿ ಇಟ್ಟುಕೊಂಡಿದ್ದರು. ಆಕಾಶ್ ತಾಯಿಗೆ ತಿಂಡಿ ಕೊಡಲು ಅಂಗಡಿ ಬಳಿ ಹೋಗಿದ್ದ. ವಿಮಾನ ದುರಂತದ ವೇಳೆ ಆಕಾಶ್ ಟೀ ಅಂಗಡಿಯ ಮುಂದೆ ನಿಂತಿದ್ದ. ಇದ್ದಕ್ಕಿದ್ದಂತೆ ಸ್ಫೋಟದಿಂದ ದೊಡ್ಡ ಮಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಕೆನ್ನಾಲಿಗೆಗೆ ಆಕಾಶ್ ಮೃತಪಟ್ಟಿದ್ದಾನೆ ಎಂದು ಕುಟುಂಬಸ್ಥರು ಅಳಲು ತೋಡಿಕೊಂಡಿದ್ದಾರೆ.

 

 

 

 

 

 

 

ಆಕಾಶ್ನನ್ನು ಕಳೆದುಕೊಂಡ ಸಹೋದರ ಕಲ್ಪೇಶ್ ಆಕ್ರಂದನ ಮುಗಿಲು ಮುಟ್ಟಿದೆ. ನನ್ನ ದೊಡ್ಡಣ್ಣ ನನಗೆ ಕರೆ ಮಾಡಿ ವಿಚಾರ ತಿಳಿಸಿದ್ದರು. ನಾನು ಆಟೋ ಓಡಿಸುತ್ತಿದ್ದೆ. ಬೆಂಕಿ ತೀವತ್ರೆಗೆ ಗಾಯಗೊಂಡಿದ್ದ ನನ್ನ ತಾಯಿಯನ್ನು ಆಸ್ಪತ್ರೆಗೆ ಕರೆದೊಯ್ದರು. ನನ್ನ ತಮ್ಮ ಅಲ್ಲೇ ಸಿಲುಕಿದ್ದ. ನನ್ನ ತಮ್ಮನನ್ನು ಒಮ್ಮೆ ನೋಡಲು ಬಿಡಿ ಎಂದು ಕಣ್ಣೀರು ಹಾಕುತ್ತಿದ್ದಾರೆ.

ನನ್ನ ತಮ್ಮ ಆಕಾಶ್ ಕೂಡ ಅಲ್ಲೇ ಇದ್ದ. ಆದರೆ ಅವನನ್ನು ಯಾರೂ ರಕ್ಷಣೆ ಮಾಡೋರಿಲ್ಲದೆ ಸಾವನ್ನಪ್ಪಿದ್ದಾನೆ. ನನ್ನ ತಮ್ಮ ಇಲ್ಲದೆ ನಾನು ಹೇಗೆ ಬದುಕಲಿ. ಒಮ್ಮೆ ನನ್ನ ಸಹೋದರನ ಮುಖ ನೋಡಲು ಬಿಡಿ.  ನನ್ನ ತಾಯಿಗೆ ಇನ್ನೂ ವಿಷಯ ತಿಳಿದಿಲ್ಲ. ಆಕೆಗೆ ಕೂಡ ಚಿಕಿತ್ಸೆ ಕೊಡಿಸಲಾಗ್ತಿದೆ. ಮಗ ಹೇಗಿದ್ದಾನೆ ಎಂದು ಕೇಳ್ತಿದ್ದಾರೆ. ಆಕಾಶ್ಗೆ ಏನೂ ಆಗಿಲ್ಲ, ಚೆನ್ನಾಗಿದ್ದಾನೆ ಎಂದು ಅವರನ್ನು ಸಮಾಧಾನಪಡಿಸಿದ್ದೇವೆ ಎಂದು ದುಃಖಿಸಿದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಅ*ತ್ಯಾಚಾ*ರಿಗಳಿಗೆ ಕಠಿಣ ಶಿಕ್ಷೆ ವಿಧಿಸಿ: ರೇಖಾ ಶ್ರೀನಿವಾಸ್

ಮೈಸೂರು: ಅ*ತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿದ ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್. ಪಶ್ಚಿಮ ಬಂಗಾಳದ ಬಾರುಪುರ್ ಮತ್ತುರಾಜಸ್ಥಾನದ ಶ್ರೀ ಗಂಗಾ ನಗರದಲ್ಲಿ ಅ*ಪ್ರಾಪ್ತ ಮೇಲೆ ನಡೆದ ಅ*ತ್ಯಾಚಾ*ರ ಘಟನೆಗಳು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿವೆ. ಪ್ರಪಂಚವನ್ನೇ ಅರಿಯದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!