ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಆಷಾಢ ಶುಕ್ರವಾರದ ವಿಶೇಷ ಪ್ಯಾಕೇಜ್ ; ಭಕ್ತರ ಆಕ್ರೋಶ!

ಮೈಸೂರು: ಆಷಾಢ ಮಾಸದಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಶುಕ್ರವಾರದ ದಿನಗಳಂದು ವಿಶೇಷ ಪೂಜೆ ಸಲ್ಲಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ವಿಶೇಷ ವ್ಯವಸ್ಥೆಗಳನ್ನು ಮಾಡಿಕೊಂಡಿದೆ. ಮುಖ್ಯವಾಗಿ ವಿಶೇಷ ದರ್ಶನಕ್ಕೆ 2 ಸಾವಿರ ರೂ. ನಿಗದಿ, ಚಾಮುಂಡಿಬೆಟ್ಟಕ್ಕೆ ಉಚಿತ ಬಸ್ ವ್ಯವಸ್ಥೆ ಹಾಗೂ ಖಾಸಗಿ ವಾಹನಗಳಿಗೆ ನಿರ್ಬಂಧ ಸೇರಿದಂತೆ ಹಲವಾರು ವಿಶೇಷ ವ್ಯವಸ್ಥೆಗಳನ್ನು ಮಾಡಿಕೊಂಡಿದೆ.


ಜೂನ್ ತಿಂಗಳ ಆಷಾಢ ಶುಕ್ರವಾರದ ಹಿನ್ನೆಲೆ ಮೈಸೂರಿನ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಪಡೆಯುವ ಭಕ್ತರಿಗೆ ಈ ಬಾರಿ ಮೊದಲ ಬಾರಿಗೆ ವಿಶೇಷ ಪ್ಯಾಕೇಜ್ ಕಲ್ಪಿಸಲಾಗಿದೆ.
ಜೂನ್ 27ರಂದು ಆಷಾಢ ಶುಕ್ರವಾರ ಆರಂಭವಾಗಲಿದ್ದು, ಜುಲೈ 4, 11 ಮತ್ತು 18 ಆಷಾಢ ಶುಕ್ರವಾರವಾಗಿದೆ. ದೇವಿಗೆ ವಿಶೇಷ ಪೂಜೆ ಜೊತೆಗೆ ಜುಲೈ 17ರಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತ್ಯೋತ್ಸವ ನಡೆಯಲಿದೆ.
ಆಷಾಢ ವಿಶೇಷ ಪ್ರಯುಕ್ತ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ, ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸಹಯೋಗದಲ್ಲಿ ದೇವರ ದರ್ಶನಕ್ಕೆ ಸಕಲ ಸಿದ್ಧತೆ ಕೈಗೊಂಡಿದೆ. ಯಾವುದೇ ಗೊಂದಲ, ಅಡಚಣೆಯಾಗದಂತೆ ಶಾಂತಿಯುತವಾಗಿ ದೇವಿಯ ದರ್ಶನ ಪಡೆಯಲು ಭಕ್ತರ ಅನುಕೂಲಕ್ಕಾಗಿ ಹಾಗೂ ನೂಕುನುಗ್ಗಲು ತಡೆಗಟ್ಟಲು 2000 ರೂ. ವೆಚ್ಚದ ವಿಶೇಷ ದರ್ಶನದ ಟಿಕೆಟ್ ನೀಡಲು ಮುಂದಾಗಿದೆ.
ಈ ಬಾರಿ ವಿಶೇಷ ದಶರ್ನಕ್ಕೆ 2 ಸಾವಿರ ರೂ ನಿಗದಿ ಮಾಡಿರುವುದು ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ. “ಇದು ಹಗಲು ದರೋಡೆ” ಎನ್ನುತ್ತಾರೆ
“ತಮಿಳುನಾಡಿನ ದೇವಾಲಯಗಳಲ್ಲಿ ಎಲ್ಲರಿಗೂ ಸಮಾನತೆ ಕಲ್ಪಿಸುವ ದೃಷ್ಟಿಯಿಂದ ಯಾವುದೇ ತಾರತಮ್ಯವಿಲ್ಲದೆ ದೇವಾಲಯಕ್ಕೆ ಅವಕಾಶ ನೀಡಲಾಗಿದೆ. ಅದೇ ರೀತಿ ಚಾಮುಂಡೇಶ್ವರಿ ದರ್ಶನಕ್ಕೂ ಅವಕಾಶ ಕಲ್ಪಿಸಿ, ಉಚಿತ ದರ್ಶನಕ್ಕೆ ವ್ಯವಸ್ಥೆ ಮಾಡಬೇಕು” ಎಂದು ಭಕ್ತರು ಒತ್ತಾಯಿಸಿದರು.
ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್

ಅವರು ಕೂಡ ವಿಶೇಷ ದರ್ಶನಕ್ಕೆ ಹಣ ನಿಗದಿ ಮಾಡಿರುವುದು ಬೇಕಿಲ್ಲ. ದೇವರನ್ನು ದುಡ್ಡು ಕೊಟ್ಟು ನೋಡಬೇಕಾ? ಎರಡು ಸಾವಿರ ದುಬಾರಿಯಾಯಿತು” ಎನ್ನುತ್ತಾರೆ.

ಸಂಸದ ಯದುವೀರ್ ಒಡೆಯರ್,

“ಆಷಾಢ ಮಾಸದಂದು ದೇವಿಯ ವಿಶೇಷ ದರ್ಶನಕ್ಕೆ ಎರಡು ಸಾವಿರ ನಿಗದಿ ಮಾಡಿರುವುದು ಸರಿಯಲ್ಲ. ದೇವರ ದರ್ಶನಕ್ಕೆ ಏಕೆ ಇಷ್ಟು ದುಬಾರಿ ಹಣ ವಸೂಲಿ? ಕೂಡಲೇ ವಾಪಸ್ ಪಡೆಯಬೇಕು” ಎಂದು ಆಗ್ರಹಿಸಿದರು.

 

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!