ಮುಂಗಾರು ಮತ್ತೆ ಚುರುಕು: ದಕ್ಷಿಣ ಕನ್ನಡದಲ್ಲಿ ಗರಿಗೆದರಿದ ಕೃಷಿ ಚಟುವಟಿಕೆ

ಬೆಳ್ತಂಗಡಿ: ಒಂದು ಹಂತದ ಅಬ್ಬರದ ಮಳೆ ಬಳಿಕ ಸ್ವಲ್ಪ ದಿನಗಳ ಬ್ರೇಕ್ ನಂತರ ಮತ್ತೆ ವರ್ಷಧಾರೆ ಶುರುವಾಗಿದ್ದು, ಎಲ್ಲೆಡೆ ಕೃಷಿ ಚಟುವಟಿಕೆಗಳು ಗರಿಗೆದರಿವೆ.

ಮೇ ತಿಂಗಳಲ್ಲಿ ಈ ಬಾರಿ ಉತ್ತಮ ಮಳೆ ಸುರಿದುದರಿಂದ ಕೃಷಿ ನೀರಿನ ಸಮಸ್ಯೆ ದೂರವಾಗಿತ್ತು. ಅಲ್ಲದೆ ಕೃಷಿಕರು ತಮ್ಮ ತೋಟ, ಗದ್ದೆಗಳ ಕೆಲಸವನ್ನು ಬೇಗನೆ ಆರಂಭಿಸಿದ್ದರು. ಆದರೆ ಜೂನ್ ಆರಂಭವಾಗುತ್ತಿದ್ದಂತೆ ಸುಮಾರು 10-12 ದಿನಗಳ ಕಾಲ ಮಳೆ ದೂರವಾಯಿತು. ಈ ಸಮಯ ಕೃಷಿ ಕೆಲಸಗಳು ಕೊಂಚ ಕುಂಠಿತಗೊಂಡವು. ಇದೀಗ 4 ದಿನಗಳಿಂದ ಮಳೆ ಪ್ರಾರಂಭವಾಗಿದ್ದು ಗದ್ದೆಗಳಲ್ಲಿ ನೀರು ತುಂಬಿದೆ. ಇದು ಏಣೇಲು ಭತ್ತದ ಗದ್ದೆಗಳಿಗೆ ಉತ್ತಮವಾಗಿದ್ದು, ಗದ್ದೆಗಳ ಕೆಲಸಗಳು ಭರದಿಂದ ಸಾಗುತ್ತಿದ್ದು ನೇಜಿ ನಾಟಿಯ ತಯಾರಿ ನಡೆದಿದೆ.

ಇತ್ತೀಚಿನ ವರ್ಷಗಳಲ್ಲಿ ಕಾರ್ಮಿಕರ ಕೊರತೆ ಇರುವುದರಿಂದ ಹೆಚ್ಚಿನ ಕೃಷಿಕರು ಅಗತ್ಯ ಕೆಲಸಗಳಿಗೆ ಯಂತ್ರೋಪಕರಣಗಳನ್ನು ಬಳಸುತ್ತಿದ್ದಾರೆ. ಇದು ಕಡಿಮೆ ಖರ್ಚು ಹಾಗೂ ಕೆಲಸಗಳು ವೇಗವಾಗಿ ಸಾಗಲು ಸಹಕಾರಿಯಾಗಿದೆ. ಗದ್ದೆಗಳನ್ನು ಹದ ಮಾಡಲು ಟಿಲ್ಲರ್, ಟ್ರ್ಯಾಕ್ಟರ್ಗಳಿಗೆ ಬೇಡಿಕೆ ಹೆಚ್ಚಿದೆ. ಇದರ ಜತೆ ನೇಜಿ, ಬಿತ್ತನೆ ಬೀಜದ ಬೇಡಿಕೆ ಅಧಿಕಗೊಂಡಿದೆ. ಗದ್ದೆಗಳ ಬದು ಕಟ್ಟುವುದು, ಸಣ್ಣ ಪ್ರಮಾಣದ ಕಣಿಗಳನ್ನು ನಿರ್ಮಿಸುವುದು, ನೀರು ನಿಲ್ಲಿಸುವ, ಅಧಿಕ ನೀರನ್ನು ಹೊರ ಬಿಡುವ ಕೆಲಸಗಳನ್ನು ಕಾರ್ಮಿಕರಿಂದ ಮಾಡಿಸಲಾಗುತ್ತಿದೆ.

ಬೆಳ್ತಂಗಡಿ ತಾಲೂಕಿನಲ್ಲಿ 1600 ಹೆಕ್ಟೇರ್ನಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ. ಕಳೆದ 1580 ಹೆಕ್ಟೇರ್ನಲ್ಲಿ ಬಿತ್ತನೆ ಮಾಡಲಾಗಿತ್ತು. ಬೆಳ್ತಂಗಡಿ ತಾಲೂಕಿನ ಬೆಳ್ತಂಗಡಿ, ಕೊಕ್ಕಡ ವೇಣೂರು ಹೋಬಳಿಗಳಲ್ಲಿ ಎಂಒ-(4)- 40ಕ್ವಿಂ., ಬಿಳಿಜಯ-16ಕ್ವಿಂ., ಜ್ಯೋತಿ-12ಕ್ವಿಂ. ಬಿತ್ತನೆ ಬೀಜ ಸಹಾಯಧನದಲ್ಲಿ ಲಭ್ಯವಿದೆ ಎಂದು ಕೃಷಿ ಇಲಾಖೆ ತಿಳಿಸಿದೆ.

ಸಿಂಪಡಣೆಗೆ ಅನುಕೂಲ
ಜೂನ್ ತಿಂಗಳಲ್ಲಿ 10 ದಿನ ಮಳೆ ಬಿಟ್ಟು ಬಿಸಿಲಿನ ವಾತಾವರಣ ಮೂಡಿದ್ದು, ಅಡಕೆ ತೋಟಗಳಿಗೆ ಔಷಧ ಸಿಂಪಡಿಸುವ ಕೃಷಿಕರಿಗೆ ಹೆಚ್ಚಿನ ಅನುಕೂಲ ನೀಡಿತ್ತು. ಮೇ ತಿಂಗಳ ಕೊನೆಯ ವಾರದಲ್ಲಿ ವಿಪರೀತ ಮಳೆಯಿಂದ ಔಷಧ ಸಿಂಪಡಣೆಗೆ ಹೆಣಗಾಡುತ್ತಿದ್ದ ಅಡಕೆ ಕೃಷಿಕರಿಗೆ ಜೂನ್ ಮೊದಲ ವಾರ ಮಳೆಬಿಟ್ಟದ್ದು ಅನುಕೂಲವಾಯಿತು.

ಅರ್ಧಕ್ಕಿಂತ ಅಧಿಕ ತೋಟಗಳಲ್ಲಿ ಈಗಾಗಲೇ ಪ್ರಥಮ ಹಂತದ ಔಷಧ ಸಿಂಪಡಣೆ ಪೂರ್ಣಗೊಂಡಿದೆ. ಈ ಬಾರಿ ಉತ್ತಮ ಬೇಸಿಗೆ ಮಳೆಯಿಂದ ಅಡಕೆ ಬೇಗನೆ ಹಣ್ಣಾಗುವ ನಿರೀಕ್ಷೆ ಇದೆ. ನಳ್ಳಿ ಉದುರುವಿಕೆ ಕಡಿಮೆ ಇದ್ಧ ಕಾರಣ ಹಾಗೂ ನೀರಿನ ಕೊರತೆ ಕಂಡು ಬರದುದರಿಂದ ಹೆಚ್ಚಿನ ತೋಟಗಳಲ್ಲಿಉತ್ತಮ ಫಸಲು ಕಂಡು ಬರುತ್ತಿದೆ.

ಇತ್ತೀಚಿನ ವರ್ಷಗಳಲ್ಲಿ ವಾಣಿಜ್ಯ ಬೆಳೆಗಳಿಗೆ ಹೆಚ್ಚಿನ ಕೃಷಿಕರು ಆಸಕ್ತರಾಗಿದ್ದಾರೆ. ನಾವು ಪ್ರತಿ ವರ್ಷ ನಮ್ಮ ಹಿರಿಯರಿಂದ ಬಂದ ಸುಮಾರು ಐದು ಎಕರೆ ಪ್ರದೇಶದಲ್ಲಿ ವರ್ಷಕ್ಕೆ ಎರಡು ಬಾರಿ ಗದ್ದೆ ಬೇಸಾಯ ಮಾಡುತ್ತಿದ್ದೇವೆ. ಏಣೇಲು ಬಿತ್ತನೆಯ ಪೂರ್ವ ತಯಾರಿ ಸಂಪೂರ್ಣಗೊಂಡಿದೆ ಎಂದಿದ್ದಾರೆ ರಮಾನಂದ ಶರ್ಮ, ಗದ್ದೆ ಕೃಷಿಕ, ಗುರಿಪಳ್ಳ, ನಡ.

ತಾಲೂಕಿನಲ್ಲಿ ಬಿತ್ತನೆ ಬೀಜ, ರಸಗೊಬ್ಬರ, ಅಗತ್ಯ ಕೀಟನಾಶಕಗಳ ದಾಸ್ತಾನು ಸಾಕಷ್ಟು ಇದೆ. ಸಹಾಯಧನದಲ್ಲಿ ಬಿತ್ತನೆ ಬೀಜ ಲಭ್ಯವಿದ್ದು, ಆಸಕ್ತ ಕೃಷಿಕರು ಕಚೇರಿ ಸಮಯದಲ್ಲಿ ಹೆಚ್ಚಿನ ಮಾಹಿತಿ ಪಡೆಯಬಹುದು ಎಂದಿದ್ದಾರೆ ವೀರಭದ್ರಪ್ಪ ಎ.ಡಿ., ಸಹಾಯಕ ನಿರ್ದೇಶಕ, ಕೃಷಿ ಇಲಾಖೆ, ಬೆಳ್ತಂಗಡಿ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!