ಸೋನಮ್ ಹನಿಮೂನ್ ಮ**ರ್ಡರ್ ಮಿಸ್ಟರಿ: ಬಸ್ನಲ್ಲಿ ಪ್ರಯಾಣಿಸಿದ್ದ ಯುವತಿಯಿಂದ ಮತ್ತೊಂದು ವಿಚಾರ ಬಯಲು!

ಮಧ್ಯಪ್ರದೇಶ : ರಾಜಾ ರಘವಂಶಿ ಕೊಲೆ ಪ್ರಕರಣದ ತನಿಖೆ ವೇಳೆ ಮತ್ತೊಂದು ಮಹತ್ವದ ಸುಳಿವು ತನಿಖಾಧಿಕಾರಿಗಳಿಗೆ ಲಭ್ಯವಾಗಿದೆ. ಹನಿಮೂನ್ ವೇಳೆ ರಾಜಾ ರಘುವಂಶಿ ಮತ್ತು ಅವರ ಪತ್ನಿ ಸೋನಮ್ ಹೋಮ್ ಸ್ಟೇ ಒಂದರಲ್ಲಿ ತಂಗಿದ್ದು, ಅಲ್ಲಿ ಹಣ ಪಾವತಿಸಿದ್ದಾರೆ ಎಂದು ತಿಳಿದುಬಂದಿದೆ. ಈ ನಡುವೆ ಸೋನಮ್ ವಾರಣಾಸಿಯಿಂದ ಘಾಜಿಪುರಕ್ಕೆ ರಸ್ತೆ ಮಾರ್ಗದ ಮೂಲಕ ಬಂದಿದ್ದು, ಆಗ ಆಕೆಯ ಪಕ್ಕದಲ್ಲಿ ಕುಳಿತು ಪ್ರಯಾಣಿಸಿದ ಯುವತಿಯೊಬ್ಬಳು ಪ್ರಮುಖ ವಿಚಾರಗಳನ್ನು ರಾಜಾ ಅವರ ಸಹೋದರನಿಗೆ ತಿಳಿಸಿದ್ದಾಳೆ.

ಈ ಮೊದಲು ಸೋನಮ್ ಕಾರಿನ ಮೂಲಕ ಘಾಜಿಪುರಕ್ಕೆ ಪ್ರಯಾಣಿಸಿದ್ದಳು ಎಂಬ ಮಾಹಿತಿ ಇತ್ತು. ಆದರೆ, ಆಕೆ ಬಸ್ನ ಮೂಲಕ ಪ್ರಯಾಣಿಸಿದ್ದು, ಅವರ ಪಕ್ಕದಲ್ಲಿಯೇ ಘಾಜಿಪುರದ ಸೈಯದ್ಪುರದ ನಿವಾಸಿ ಉಜಲಾ ಯಾದವ್ ಪ್ರಯಾಣಿಸಿದ್ದರು. ಈಕೆ ರಾಜಾ ರಘುವಂಶಿ ಸಹೋದರ ಸಚಿನ್ ರಘುವಂಶಿಗೆ ಕರೆ ಮಾಡಿ ಮಾತನಾಡಿರುವ ರೆಕಾರ್ಡಿಂಗ್ ಎಲ್ಲೆಡೆ ಹರಿದಾಡುತ್ತಿದೆ.
ವಾರಣಾಸಿಯಿಂದ ಘಾಜಿಪುರಕ್ಕೆ ಪ್ರಯಾಣಿಸಲು ಮುಂದಾದ ಸೋನಮ್ ನಂದಗಂಜ್ನಲ್ಲಿ ಇಳಿದಿದ್ದಳು. ಘಾಜಿಪುರದಿಂದ ಸ್ವಲ್ಪವೇ ದೂರದಲ್ಲಿರುವ ನಂದಗಂಜ್ನಲ್ಲಿ ಇಳಿದು ಅವಳು ಘಾಜಿಪುರಕ್ಕೆ ಹೋಗುವ ಮತ್ತೊಂದು ಬಸ್ ಏರಿದ್ದಳು.


ಈ ರೀತಿ ರೀಲ್ಸ್ ನೋಡಬೇಡಿ ಎಂದಿದ್ದ ಉಜಲಾ: ಸೋನಮ್ನನ್ನು ಬಸ್ ಹತ್ತಿಸಲು ಬಂದಿದ್ದ ವ್ಯಕ್ತಿಗಳು ಇದೀಗ ಪೊಲೀಸರ ಬಂಧನದಲ್ಲಿರುವ ಯುವಕರಲ್ಲ ಎಂದು ಉಜಲಾ ತಿಳಿಸಿದ್ದಾರೆ. ಸೋನಮ್ ನನ್ನ ಪಕ್ಕದಲ್ಲಿ ಕುಳಿತಿದ್ದರು. ರಾಜಾ ರಘುವಂಶಿ ಸಾವಿನ ಸುದ್ದಿಗೆ ಸಂಬಂಧಿಸಿದ ಸಾಮಾಜಿಕ ಮಾಧ್ಯಮದಲ್ಲಿ ನಾನು ರೀಲ್ಗಳನ್ನು ನೋಡುತ್ತಿದ್ದಾಗ, ಅವಳು ನನ್ನ ಮೇಲೆ ಕೋಪಗೊಂಡು ಇಂತಹ ರೀಲ್ಗಳನ್ನು ನೋಡಬೇಡಿ ಎಂದು ತನ್ನ ಮುಖವನ್ನು ಮರೆಮಾಡಿಕೊಂಡಳು.


ಘಾಜಿಪುರದಲ್ಲಿ ಇಳಿದ ನಾನು ಸೈಯದ್ಪುರ್ಕ್ಕೆ ಹೋಗುವ ಬಸ್ ಹತ್ತಿದೆ. ಮನೆಗೆ ಬಂದ ನಾನು ಮರುದಿನ ನೋಡಿದಾಗ ಎಲ್ಲೆಡೆ ಈ ಸುದ್ದಿ ಕಂಡೆ, ಈ ವೇಳೆ ಸೋನಮ್ ಫೋಟೋವನ್ನು ನೋಡಿದೆ. ಆಗ ಅದೇ ಯುವತಿ ಜೊತೆ ತಾನು ನಿನ್ನೆ ರಾತ್ರಿ ಪ್ರಯಾಣಿಸಿದ್ದು ಅನ್ನೋದು ತಿಳಿಯಿತು. ತಕ್ಷಣಕ್ಕೆ ನಾನು ನಂದಗಂಜ್ ಪೊಲೀಸರಿಗೆ ಕರೆ ಮಾಡಿ, ವಿಷಯ ತಿಳಿಸಿದೆ. ಘಾಜಿಪುರಕ್ಕೆ ಹೋಗಬೇಕು ಎಂದಿದ್ದ ಅವಳು, ಮಧ್ಯದಲ್ಲೇ ಇಳಿದಿದ್ದು, ನನಗೆ ಅರ್ಥವಾಗಲಿಲ್ಲ ಎಂದಿದ್ದಾರೆ.


ಸೋನಮ್ ವಿಚಾರಣೆ ವೇಳೆ ಮೇ 22 ರಂದು ಆಕೆಗೆ ಇಂದೋರ್ನಿಂದ ಅಸ್ಸೋಂ ತಲುಪಿದ್ದು, ಅಸ್ಸೋಂನ ಕಾಮಾಕ್ಯ ದೇವಿ ದರ್ಶನದ ಬಳಿಕ ಸಂಜೆಯೇ ಶಿಲ್ಲಾಂಗ್ಗೆ ತೆರಳಿದ್ದಾಗಿ ತಿಳಿಸಿದ್ದಾಳೆ.
ಸೋನಮ್ ಸೂಟ್ಕೇಸ್ ಕಾಣೆ: ಪೊಲೀಸರು ಸೊಹ್ರಾ ಹಿಲ್ಸ್ನಲ್ಲಿರುವ ಹೋಂಸ್ಟೇಯನ್ನು ತನಿಖೆ ಮಾಡಿದಾಗ ರಾಜಾ ಅವರ ವಸ್ತುಗಳು ಮಾತ್ರ ಕಂಡು ಬಂದಿದ್ದವು. ಅಲ್ಲಿ ಇದ್ದ ಸೂಟ್ಕೇಸ್ನಲ್ಲಿ ಸೋನಮ್ ಮಂಗಳಸೂತ್ರ ಮತ್ತು ಉಂಗುರ ಸಿಕ್ಕಿತ್ತು. ಇದು ತನಿಖೆಗೆ ಮಹತ್ವದ ತಿರುವು ನೀಡಿತ್ತು.


ಜಲಪಾತದ ಬಳಿ ಕರೆದೊಯ್ದಿದ್ದ ಸೋನಮ್: ಮೇ 23 ರಂದು ರಾಜಾ ಅವರ ತಾಯಿ ಉಮಾ ರಘುವಂಶಿ ಜೊತೆ ಮಾತನಾಡಿದಾಗ, ಸೋನಮ್ ಶಿಲ್ಲಾಂಗ್ನಲ್ಲಿರುವ ಜಲಪಾತಗಳಿಗೆ ಭೇಟಿ ನೀಡುವ ಬಗ್ಗೆ ಸೋನಮ್ ತಿಳಿಸಿದ್ದಳು. ಈ ವೇಳೆ ರಾತ್ರಿ ಜಲಪಾತದ ಬಳಿಯ ಸೊಹ್ರಾ ಬೆಟ್ಟಗಳಲ್ಲಿರುವ ಹೋಂಸ್ಟೇಯಲ್ಲಿ ತಂಗುವುದಾಗಿ ರಾಜಾ ತಾಯಿಗೆ ಹೇಳಿದ್ದು ತನಿಖೆಯಲ್ಲಿ ಗೊತ್ತಾಗಿದೆ.

ಆರೋಪಿಗಳ ತನಿಖೆ ಮಾಡುತ್ತಿರುವ ಶಿಲ್ಲಾಂಗ್ ಪೊಲೀಸರು: ರಾಜಾ ರಘುವಂಶಿ ಕೊಲೆ ಪ್ರಕರಣದಲ್ಲಿ ಇಂದೋರ್ ನಿವಾಸಿ ರಾಜ್ ಕುಶ್ವಾಹ, ಸೋನಮ್, ಆತನ ಸ್ನೇಹಿತರಾದ ವಿಶಾಲ್, ಆನಂದ್ ಮತ್ತು ಅಂಕಿತ್ ಅವರನ್ನು ಬಂಧಿಸಿ ಶಿಲ್ಲಾಂಗ್ಗೆ ಕರೆದೊಯ್ದು ಪೊಲೀಸರು ತನಿಖೆ ನಡೆಸಿದ್ದಾರೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!