ಅರೇಹಳ್ಳಿಯಲ್ಲಿ ಭಾರೀ ಮಳೆಗೆ ಕುಸಿದು ಬಿದ್ದ ಶಾಲಾ ಕಾಂಪೌಂಡ್‌

ಅರೇಹಳ್ಳಿಯಲ್ಲಿ ಭಾರೀ ಮಳೆಗೆ ಕುಸಿದು ಬಿದ್ದ ಶಾಲಾ ಕಾಂಪೌಂಡ್‌

ಮಲೆನಾಡು ಬಾಗವಾದ ಅರೇಹಳ್ಳಿ ಹಾಗು ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದೆರಡು ದಿನಗಳಿಂದ ಮುಂಗಾರು ಮಳೆ ಚುರುಕುಗೊಂಡಿದ್ದು ಕಳೆದ ರಾತ್ರಿ ಸುರಿದ ದಾರಕಾರ ಮಳೆಗೆ ಸರ್ಕಾರಿ ಶಾಲೆಯ ಕಾಂಪೌಂಡ್ ಕುಸಿದು ಕುಸಿದು ಬಿದ್ದಿದೆ. ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪರಿಮಿತಿಯ ಸುತ್ತಲೂ ಸುಮಾರು ಹತ್ತು ವರ್ಷಗಳ ಹಿಂದೆ ನಿರ್ಮಿಸಲಾಗಿದ್ದ ಕಾಂಪೌಂಡ್ ನ ಒಂದು ಬದಿಯ ಉದ್ದಗಲಕ್ಕೂ ತಡರಾತ್ರಿ ಸುರಿದ ಧಾರಾಕಾರ ಮಳೆಗೆ ಕುಸಿದು ಬಿದ್ದಿದೆ.ಇದರಿಂದ ಪಕ್ಕದಲ್ಲೇ ನೂತನವಾಗಿ ನಿರ್ಮಿಸಲಾದ ರೈತ ಸಂಪರ್ಕ ಕೇಂದ್ರದ ಸಿಮೆಂಟ್ ಇಂಟರ್ಲಾಕ್ ಗಳು ಸಹ ಸಾಕಷ್ಟು ಹಾನಿಯಾಗಿದೆ.
ಶಿಥಿಲವಾಗಿ ಬಿದ್ದ ಕಾಂಪೌಂಡ್ ಮಳೆ ಗಾಳಿ ಬಿರುಗಾಳಿಯಿಂದ ಗೋಡೆಯ ಸಾಮರ್ಥ್ಯ ಕಡಿಮೆಯಾಗಿದ್ದಲ್ಲದೆ ಕೆಲವೊಮ್ಮೆ ಕಾಂಪೌಂಡ್ ಗೋಡೆಗಳನ್ನು ನಿರ್ಮಿಸುವಾಗ ಸರಿಯಾದ ಗುಣಮಟ್ಟದ ವಸ್ತುಗಳನ್ನು ಬಳಸದೆ ಇರುವುದು ಅಥವಾ ಸೂಕ್ತ ಇಂಜಿನಿಯರಿಂಗ್ ಮಾನದಂಡಗಳನ್ನು ಪಾಲಿಸದಿರುವುದೇ ಇದಕ್ಕೆ ಕಾರಣವಾಗಿರಬಹುದು, ಮಣ್ಣು ಸಡಿಲವಾಗಿದ್ದಾಗ ಅಥವಾ ಅಡಿಪಾಯವನ್ನು ಸರಿಯಾಗಿ ವಿನ್ಯಾಸಗೊಳಿಸ ದಿದ್ದಾಗ ಭಾರಿ ಮಳೆಯಿಂದಾಗಿ ದೊಡ್ಡ ಕುಸಿತಕ್ಕೆ ಕಾರಣ ವಾಗಿದೆ! ಈ ಕುಸಿತದ ಬಗ್ಗೆ ರೈತ ಸಂಪರ್ಕ ಕೇಂದ್ರದ ಸಂಬಂಧ ಪಟ್ಟ ಹಿರಿಯ ಅಧಿಕಾರಿಗಳು ಹಾಗೂ ಶಾಲೆಯ ಮುಖ್ಯೋ ಪಾಧ್ಯಾಯರು ಹಾಗು ಶಾಲಾ ಆಡಳಿತ ಮಂಡಳಿಯವರು ಇದರ ಬಗ್ಗೆ ಗಂಭೀರವಾಗಿ ಪರಿಗಣಿಸಿ ವಿದ್ಯಾರ್ಥಿಗಳ ಸುರಕ್ಷತೆಗೆ ಕ್ರಮ ಕೈಗೊಳ್ಳ ಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಗೌಡ ಮಾತನಾಡಿ ಅರೇಹಳ್ಳಿ ಸರಕಾರಿ ಶಾಲೆಯ ಕಾಂಪೌಂಡ್ ಕುಸಿದ ವಿಚಾರ ನಮ್ಮ ಗಮನಕ್ಕೆ ಬಂದಿದ್ದು ಇದು ಕೃಷಿ ಇಲಾಖೆ ರೈತ ಸಂಪರ್ಕಕ್ಕೆ ಸೇರಿದ್ದಾಗಿದ್ದು ಇದನ್ನು ಅವರಿಗೆ ತಿಳಿಸಿ ಮೇಲ್ಬಾಗದಲ್ಲಿ ಪೈಪ್ ನೀರು ಕಾಂಪೌಂಡ್ ಗೆ ಬೀಳುತ್ತಿದ್ದ ರಿಂದ ಈ ರೀತಿ ಆಗಿರ ಬಹುದು.ಅಲ್ಲದೆ ಅದನ್ನು ಬೇರೆಡೆಗೆ ತಿರುಗಿಸಲು ಹೇಳಿದ್ದು ಹಾಗು ಕಾಂಪೌಂಡ್ ಅನ್ನು ಹೊಸದಾಗಿ ಕಟ್ಟಿ ರೆಡಿ ಮಾಡಿಸಿಕೊಡಿ ಮತ್ತೆ ಇನ್ನು ಮುಂದೆ ಹೀಗಾಗದಂತೆ ಜಾಗೃತಿ ವಹಿಸಬೇಕೆಂದು ಅವರಿಗೆ ಎಚ್ಚರಿಕೆ ನೀಡಿದರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ನೈಸ್ ಯೋಜನೆಯ ವಿರುದ್ಧ ಜೆಡಿಎಸ್ ಸಮರ: ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆಗಳು

ವಿಧಾನಮಂಡಲ ಅಧಿವೇಶನದಲ್ಲಿ ನೈಸ್ (NICE) ಯೋಜನೆಯ ಅಕ್ರಮಗಳ ಕುರಿತು ಚರ್ಚಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ, ಜೆಡಿಎಸ್ ಮುಖಂಡರು ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಅವರ ನೇತೃತ್ವದ ನಿಯೋಗವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳನ್ನು ಭೇಟಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!