ಅರೇಹಳ್ಳಿಯಲ್ಲಿ ಭಾರೀ ಮಳೆಗೆ ಕುಸಿದು ಬಿದ್ದ ಶಾಲಾ ಕಾಂಪೌಂಡ್‌

ಅರೇಹಳ್ಳಿಯಲ್ಲಿ ಭಾರೀ ಮಳೆಗೆ ಕುಸಿದು ಬಿದ್ದ ಶಾಲಾ ಕಾಂಪೌಂಡ್‌

ಮಲೆನಾಡು ಬಾಗವಾದ ಅರೇಹಳ್ಳಿ ಹಾಗು ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದೆರಡು ದಿನಗಳಿಂದ ಮುಂಗಾರು ಮಳೆ ಚುರುಕುಗೊಂಡಿದ್ದು ಕಳೆದ ರಾತ್ರಿ ಸುರಿದ ದಾರಕಾರ ಮಳೆಗೆ ಸರ್ಕಾರಿ ಶಾಲೆಯ ಕಾಂಪೌಂಡ್ ಕುಸಿದು ಕುಸಿದು ಬಿದ್ದಿದೆ. ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪರಿಮಿತಿಯ ಸುತ್ತಲೂ ಸುಮಾರು ಹತ್ತು ವರ್ಷಗಳ ಹಿಂದೆ ನಿರ್ಮಿಸಲಾಗಿದ್ದ ಕಾಂಪೌಂಡ್ ನ ಒಂದು ಬದಿಯ ಉದ್ದಗಲಕ್ಕೂ ತಡರಾತ್ರಿ ಸುರಿದ ಧಾರಾಕಾರ ಮಳೆಗೆ ಕುಸಿದು ಬಿದ್ದಿದೆ.ಇದರಿಂದ ಪಕ್ಕದಲ್ಲೇ ನೂತನವಾಗಿ ನಿರ್ಮಿಸಲಾದ ರೈತ ಸಂಪರ್ಕ ಕೇಂದ್ರದ ಸಿಮೆಂಟ್ ಇಂಟರ್ಲಾಕ್ ಗಳು ಸಹ ಸಾಕಷ್ಟು ಹಾನಿಯಾಗಿದೆ.
ಶಿಥಿಲವಾಗಿ ಬಿದ್ದ ಕಾಂಪೌಂಡ್ ಮಳೆ ಗಾಳಿ ಬಿರುಗಾಳಿಯಿಂದ ಗೋಡೆಯ ಸಾಮರ್ಥ್ಯ ಕಡಿಮೆಯಾಗಿದ್ದಲ್ಲದೆ ಕೆಲವೊಮ್ಮೆ ಕಾಂಪೌಂಡ್ ಗೋಡೆಗಳನ್ನು ನಿರ್ಮಿಸುವಾಗ ಸರಿಯಾದ ಗುಣಮಟ್ಟದ ವಸ್ತುಗಳನ್ನು ಬಳಸದೆ ಇರುವುದು ಅಥವಾ ಸೂಕ್ತ ಇಂಜಿನಿಯರಿಂಗ್ ಮಾನದಂಡಗಳನ್ನು ಪಾಲಿಸದಿರುವುದೇ ಇದಕ್ಕೆ ಕಾರಣವಾಗಿರಬಹುದು, ಮಣ್ಣು ಸಡಿಲವಾಗಿದ್ದಾಗ ಅಥವಾ ಅಡಿಪಾಯವನ್ನು ಸರಿಯಾಗಿ ವಿನ್ಯಾಸಗೊಳಿಸ ದಿದ್ದಾಗ ಭಾರಿ ಮಳೆಯಿಂದಾಗಿ ದೊಡ್ಡ ಕುಸಿತಕ್ಕೆ ಕಾರಣ ವಾಗಿದೆ! ಈ ಕುಸಿತದ ಬಗ್ಗೆ ರೈತ ಸಂಪರ್ಕ ಕೇಂದ್ರದ ಸಂಬಂಧ ಪಟ್ಟ ಹಿರಿಯ ಅಧಿಕಾರಿಗಳು ಹಾಗೂ ಶಾಲೆಯ ಮುಖ್ಯೋ ಪಾಧ್ಯಾಯರು ಹಾಗು ಶಾಲಾ ಆಡಳಿತ ಮಂಡಳಿಯವರು ಇದರ ಬಗ್ಗೆ ಗಂಭೀರವಾಗಿ ಪರಿಗಣಿಸಿ ವಿದ್ಯಾರ್ಥಿಗಳ ಸುರಕ್ಷತೆಗೆ ಕ್ರಮ ಕೈಗೊಳ್ಳ ಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಗೌಡ ಮಾತನಾಡಿ ಅರೇಹಳ್ಳಿ ಸರಕಾರಿ ಶಾಲೆಯ ಕಾಂಪೌಂಡ್ ಕುಸಿದ ವಿಚಾರ ನಮ್ಮ ಗಮನಕ್ಕೆ ಬಂದಿದ್ದು ಇದು ಕೃಷಿ ಇಲಾಖೆ ರೈತ ಸಂಪರ್ಕಕ್ಕೆ ಸೇರಿದ್ದಾಗಿದ್ದು ಇದನ್ನು ಅವರಿಗೆ ತಿಳಿಸಿ ಮೇಲ್ಬಾಗದಲ್ಲಿ ಪೈಪ್ ನೀರು ಕಾಂಪೌಂಡ್ ಗೆ ಬೀಳುತ್ತಿದ್ದ ರಿಂದ ಈ ರೀತಿ ಆಗಿರ ಬಹುದು.ಅಲ್ಲದೆ ಅದನ್ನು ಬೇರೆಡೆಗೆ ತಿರುಗಿಸಲು ಹೇಳಿದ್ದು ಹಾಗು ಕಾಂಪೌಂಡ್ ಅನ್ನು ಹೊಸದಾಗಿ ಕಟ್ಟಿ ರೆಡಿ ಮಾಡಿಸಿಕೊಡಿ ಮತ್ತೆ ಇನ್ನು ಮುಂದೆ ಹೀಗಾಗದಂತೆ ಜಾಗೃತಿ ವಹಿಸಬೇಕೆಂದು ಅವರಿಗೆ ಎಚ್ಚರಿಕೆ ನೀಡಿದರು.

Related Posts

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಕರ್ನಾಟಕದ ತಮ್ಮ ಹುಟ್ಟೂರಿನಲ್ಲಿ ಇಂದಿಗೂ ಜಾತಿ ಪದ್ಧತಿ ಜೀವಂತವಾಗಿದ್ದು, ಊರಿನ ದೇವಸ್ಥಾನಕ್ಕೆ ತಮಗೆ ಪ್ರವೇಶ ನಿರಾಕರಿಸಲಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ, 12 ವರ್ಷದವರಿದ್ದಾಗ ಹೋಟೆಲೊಂದರಲ್ಲಿ ಊಟ ಮಾಡಿದ ನಂತರ ಹಣ ನೀಡಿದರೂ ಸಹ, ಕೆಳಜಾತಿಯವರೆಂಬ ಕಾರಣಕ್ಕೆ ತಟ್ಟೆಯನ್ನು…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು