ICC ಅಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾದ ಜಯ್ ಶ

ಭಾರತೀಯ ಕ್ರಿಕೆಟ್ ಮಂಡಳಿಯ ಕಾರ್ಯದರ್ಶಿ ಜಯ್ ಶಾ ಅವರು ಐಸಿಸಿಯ ನೂತನ ಅಧ್ಯಕ್ಷರಾಗಿ ಜಯ್ ಶಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪ್ರಸ್ತುತ ಐಸಿಸಿ ಅಧ್ಯಕ್ಷ ಗ್ರೆಗ್ ಬಾರ್ಕ್ಲೇ ಅವರ ಅಧಿಕಾರಾವಧಿ ನವೆಂಬರ್ 30 ರಂದು ಕೊನೆಗೊಳ್ಳುತ್ತದೆ. ಜಯ್ ಶಾ ಅವರು ಐಸಿಸಿಯ ಅತ್ಯುನ್ನತ ಸ್ಥಾನವನ್ನು ಅಲಂಕರಿಸಿದ ಐದನೇ ಭಾರತೀಯರಾಗಿದ್ದಾರೆ.ಇದಕ್ಕೂ ಮೊದಲು ಜಗಮೋಹನ್ ದಾಲ್ಮಿಯಾ, ಎನ್ ಶ್ರೀನಿವಾಸನ್, ಶರದ್ ಪವಾರ್ ಮತ್ತು ಶಶಾಂಕ್ ಮನೋಹರ್ ಅವರು ಐಸಿಸಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ.

ಐಸಿಸಿ ನಿಯಮದ ಪ್ರಕಾರ ಅಧ್ಯಕ್ಷರ ಚುನಾವಣೆಯಲ್ಲಿ 16 ಮತಗಳಿದ್ದು, ಈಗ ವಿಜೇತರಿಗೆ 9 ಮತಗಳ ಸರಳ ಬಹುಮತದ ಅಗತ್ಯವಿದೆ. ಈ ಹಿಂದೆ ಅಧ್ಯಕ್ಷರಾಗಲು ಹಾಲಿ ಇರುವವರು ಮೂರನೇ ಎರಡರಷ್ಟು ಬಹುಮತ ಪಡೆಯಬೇಕಿತ್ತು. ಪ್ರಸ್ತುತ ನಿರ್ದೇಶಕರು ಈಗ 27 ಆಗಸ್ಟ್ 2024 ರೊಳಗೆ ಮುಂದಿನ ಅಧ್ಯಕ್ಷರಿಗೆ ನಾಮನಿರ್ದೇಶನಗಳನ್ನು ಸಲ್ಲಿಸಬೇಕು ಮತ್ತು ಒಂದಕ್ಕಿಂತ ಹೆಚ್ಚು ಅಭ್ಯರ್ಥಿಗಳಿದ್ದರೆ, ಚುನಾವಣೆಯನ್ನು ನಡೆಸಲಾಗುವುದು ಮತ್ತು ಹೊಸ ಅಧ್ಯಕ್ಷರ ಅವಧಿಯು 1 ಡಿಸೆಂಬರ್ 2024 ರಿಂದ ಪ್ರಾರಂಭವಾಗುತ್ತದೆ.

ಅವಿರೋಧವಾಗಿ ಆಯ್ಕೆಯಾದ ಬೆನ್ನಲ್ಲೇ ಜಯ್ ಶಾ ಸಂತಸ ಹಂಚಿಕೊಂಡಿದ್ದಾರೆ. ಬಿಸಿಸಿಐ ಕಾರ್ಯದರ್ಶಿಯಾಗಿ ಜವಬ್ದಾರಿ ನಿರ್ವಹಿಸಿದ ನನಗೆ ಇದೀಗ ಅತ್ಯುನ್ನತ ಜವಾಬ್ದಾರಿ ಹೆಗಲೇರಿದೆ. ಕ್ರಿಕೆಟ್‌ನನ್ನು ಮತ್ತಷ್ಟು ಜಾಗತಿಕ ಕ್ರೀಡೆಯನ್ನಾಗಿ ಮಾಡಲು ಶ್ರಮಿಸುತ್ತೇನೆ. ಎಲ್ಲಾ ಮಾದರಿ ಕ್ರಿಕೆಟ್‌ನಲ್ಲಿ ಸಮತೋಲನ ಕಾಪಾಡಿಕೊಳ್ಳುವುದು, ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳುವ ಮೂಲಕ ಕ್ರಿಕೆಟ್ ಮಾದರಿ ಕ್ರೀಡೆಯನ್ನಾಗಿ ಮಾಡುವುದು ಗುರಿಯಾಗಿದೆ. ಕ್ರಿಕೆಟ್ ಜನಪ್ರಿಯತೆಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವುದೇ ಮೊದಲ ಗುರಿ ಎಂದು ಜಯ್ ಶಾ ಹೇಳಿದ್ದಾರೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು