ರೈತರಿಗೆ ಗುಡ್ನ್ಯೂಸ್, KRS ಡ್ಯಾಂ ಭರ್ತಿಗೆ ಅಡಿ ನೀರು..!

ಮಂಡ್ಯ: ಮೊನ್ನೆಯಷ್ಟೇ ರಾಜ್ಯದಲ್ಲಿ ಮಳೆಯ ಆರ್ಭಟ ಜೋರಾಗಿತ್ತು. ಭಾರೀ ಮಳೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಕೆಆರ್ಎಸ್ ಡ್ಯಾಂನ ಒಳಹರಿವು ಹೆಚ್ಚಾಗಿತ್ತು. ಮಂಡ್ಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಡ್ಯಾಂನಲ್ಲಿ ಆಗ ದಿಢೀರನೇ 16 ಸಾವಿರ ಕ್ಯೂಸೆಕ್ಗೆ ಒಳಹರಿವು ಏರಿಕೆಯಾಗಿತ್ತು.


ಇದೀಗ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಪ್ರಮಾಣ ತಗ್ಗಿದೆ. ಹೀಗಾಗಿ ಕೆಆರ್ಎಸ್ ಡ್ಯಾಂನ ಒಳಹರಿವು ಕುಗ್ಗಿದೆ. ಇನ್ನೂ ಈ ನಡುವೆ 13,359 ಕ್ಯೂಸೆಕ್ಗೆ ಡ್ಯಾಂ ಒಳಹರಿವು ಇಳಿದಿದೆ. ಸದ್ಯ ಕೆಆರ್ಎಸ್ ಡ್ಯಾಂ ಭರ್ತಿಗೆ ಕೇವಲ 5 ಅಡಿ ಮಾತ್ರ ಬೇಕಿದೆ. ಹೀಗಾಗಿ ಇತಿಹಾಸ ನಿರ್ಮಿಸುವ ತವಕದಲ್ಲಿದೆ. ಜೂನ್ ತಿಂಗಳಿನಲ್ಲಿಯೇ ಭರ್ತಿಯಾದ್ರೆ ಹೊಸ ದಾಖಲೆ ನಿರ್ಮಾಣವಾಗುತ್ತದೆ.

ಆದ್ರೆ ಈ ಹೊತ್ತಿನಲ್ಲಿ ಒಳಹರಿವು ಕಡಿಮೆಯಾಗಿದೆ. 124.80 ಅಡಿಯ ಕೆಆರ್ಎಸ್ ಡ್ಯಾಂ 119.40 ಅಡಿಯಷ್ಟು ಭರ್ತಿಯಾಗಿದೆ. 49.452 ಟಿಎಂಸಿ ಸಾಮರ್ಥ್ಯದ ಡ್ಯಾಂನಲ್ಲಿ 42.291 ಟಿಎಂಸಿ ನೀರು ಸಂಗ್ರಹವಾಗಿದೆ. ಡ್ಯಾಂನಿಂದ 1,664 ಕ್ಯೂಸೆಕ್ ನೀರು ಹೊರಕ್ಕೆ ಬಿಡಲಾಗಿದೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!