ಶತಕದ ಬಳಿಕ ಲೀಡ್ಸ್‌ನಲ್ಲಿ ಮತ್ತೊಂದು ದಾಖಲೆ ಬರೆದ ಸ್ಪೈಡರ್ ಮ್ಯಾನ್ ರಿಷಭ್ ಪಂತ್….

ಲೀಡ್ಸ್‌ನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ರಿಷಭ್ ಪಂತ್ ತಮ್ಮ 44ನೇ ಟೆಸ್ಟ್ ಪಂದ್ಯದಲ್ಲಿ 150 ಕ್ಯಾಚ್‌ಗಳನ್ನು ಪೂರ್ತಿಗೊಳಿಸಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಧೋನಿ ಮತ್ತು ಕಿರ್ಮಾನಿ ನಂತರದ ಸ್ಥಾನದಲ್ಲಿರುವ ಪಂತ್, ಕೇವಲ 44 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ ಮೂರನೇ ಭಾರತೀಯ ವಿಕೆಟ್‌ಕೀಪರ್ ಆಗಿದ್ದಾರೆ. ಅವರ ಬ್ಯಾಟಿಂಗ್‌ ಕೂಡ ಅದ್ಭುತವಾಗಿದ್ದು, 3000ಕ್ಕೂ ಹೆಚ್ಚು ರನ್‌ಗಳನ್ನು ಗಳಿಸಿದ್ದಾರೆ. ಲೀಡ್ಸ್ ಟೆಸ್ಟ್ ಪಂದ್ಯದ ಮೂರನೇ ದಿನದಂದು ಇಂಗ್ಲೆಂಡ್‌ನ ಶತಕವೀರ ಓಲಿ ಪೋಪ್ ಕ್ಯಾಚ್ ಹಿಡಿಯುವ ಮೂಲಕ ಭಾರತೀಯ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಭ್ ಪಂತ್ ಹೊಸ ದಾಖಲೆ ಬರೆದಿದ್ದಾರೆ. ತಮ್ಮ 44 ನೇ ಟೆಸ್ಟ್ ಪಂದ್ಯದಲ್ಲಿ ಈ ಸಾಧನೆ ಮಾಡಿರುವ ಪಂತ್, ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಮತ್ತು ಸೈಯದ್ ಕಿರ್ಮಾನಿ ಅವರ ನಂತರದ ಸ್ಥಾನವನ್ನು ಪಡೆದುಕೊಂಡಿದ್ದಾರೆ.ಇದಲ್ಲದೆ, ಅವರು 15 ಸ್ಟಂಪಿಂಗ್‌ಗಳನ್ನು ಸಹ ಮಾಡಿದ್ದಾರೆ.

ಇನ್ನು ಬ್ಯಾಟಿಂಗ್‌ ವಿಚಾರದಲ್ಲಿ ಅಮೋಘ ಪ್ರದರ್ಶನ ನೀಡುತ್ತಿರುವ ರಿಷಭ್ ಪಂತ್ ಇದುವರೆಗೆ ಆಡಿರುವ 44 ಟೆಸ್ಟ್ ಪಂದ್ಯಗಳ 76 ಇನ್ನಿಂಗ್ಸ್‌ಗಳಲ್ಲಿ ಸುಮಾರು 44 ಸರಾಸರಿಯಲ್ಲಿ 3000 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಇದರಲ್ಲಿ 7 ಶತಕಗಳು ಮತ್ತು 15 ಅರ್ಧಶತಕಗಳು ಸೇರಿವೆ. ಅಲ್ಲದೆ ಪಂತ್ ಶತಕಗಳ ವಿಷಯದಲ್ಲಿ ಧೋನಿಯನ್ನು ಹಿಂದಿಕ್ಕಿದ್ದಾರೆ. ಭಾರತ ತಂಡದ ಮಾಜಿ ನಾಯಕ ಮತ್ತು ವಿಕೆಟ್ ಕೀಪರ್ ಮಹೇಂದ್ರ ಸಿಂಗ್ ಧೋನಿ 90 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಇದರಲ್ಲಿ ಅವರು 256 ಕ್ಯಾಚ್‌ಗಳನ್ನು ಹಿಡಿದಿದ್ದಾರೆ. ಇದಲ್ಲದೆ, ಅವರು 38 ಸ್ಟಂಪಿಂಗ್‌ಗಳನ್ನು ಮಾಡಿದ್ದಾರೆ. ಧೋನಿ 144 ಇನ್ನಿಂಗ್ಸ್‌ಗಳಲ್ಲಿ 38.09 ಸರಾಸರಿಯಲ್ಲಿ 4876 ರನ್ ಗಳಿಸಿದ್ದು, ಇದರಲ್ಲಿ 6 ಶತಕಗಳು ಮತ್ತು 33 ಅರ್ಧಶತಕಗಳು ಸೇರಿವೆ.ಭಾರತ ತಂಡದ ಮಾಜಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಸೈಯದ್ ಕಿರ್ಮಾನಿ 88 ಟೆಸ್ಟ್ ಪಂದ್ಯಗಳಲ್ಲಿ 160 ಕ್ಯಾಚ್‌ಗಳನ್ನು ಹಿಡಿದಿದ್ದಾರೆ. ಇದಲ್ಲದೆ, ಅವರು 38 ಸ್ಟಂಪಿಂಗ್‌ಗಳನ್ನು ಮಾಡಿದ್ದಾರೆ. ಕಿರ್ಮಾನಿ ಟೆಸ್ಟ್ ಪಂದ್ಯಗಳಲ್ಲಿ 2759 ರನ್ ಗಳಿಸಿದ್ದು, ಇದರಲ್ಲಿ ಎರಡು ಶತಕಗಳು ಸೇರಿವೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!