ಮದುವೆ ದಿನ ಮಾತ್ರ ಸ್ನಾನ ಮಾಡುವ ಪದ್ಧತಿಯನ್ನು ಹೊಂದಿದ್ದಾರೆ ಈ ಬುಡಕಟ್ಟು ಜನಾಂಗದವರು …..

ಪ್ರತಿದಿನ ಸ್ನಾನ ಮಾಡುವ ಅಭ್ಯಾಸ ಎಲ್ಲರಿಗೂ ಇರುತ್ತದೆ. ಕೆಲವರು ದಿನಕ್ಕೆ ಎರಡೆರಡು ಬಾರಿ ಸ್ನಾನ ಮಾಡ್ತಾರೆ. ಆದರೆ ಈ ಜನರು ಮಾತ್ರ ಸ್ನಾನ ಅಂದ್ರೆ ಸಾಕು, ಮಾರು ದೂರ ಓಡ್ತಾರೆರಂತೆ. ಹೌದು, ಇಲ್ಲಿನ ಜನರ ಜೀವನಶೈಲಿ ಮಾತ್ರ ಇವತ್ತಿಗೂ ಬದಲಾಗಿಲ್ಲ. ಇಂದಿಗೂ ತಮ್ಮ ಹಿಂದಿನ ಸಂಪ್ರದಾಯವನ್ನು ಅನುಸರಿಸಿಕೊಂಡು ಬರುವ ಇಲ್ಲಿನ ಮಹಿಳೆಯರು ಜೀವನದಲ್ಲಿ ಒಮ್ಮೆ ಮಾತ್ರ ಸ್ನಾನ ಮಾಡುವುದು. ಹಾಗಾದ್ರೆ ಇಂತಹ ವಿಚಿತ್ರ ಜನರು ಇರುವುದು ಎಲ್ಲಿ? ದೇಹದ ಸ್ವಚ್ಛತೆ ಹೇಗೆ ಮಾಡ್ತಾರೆ? ಎಂಬ ಕುತೂಹಲಕಾರಿ ಮಾಹಿತಿ ಇಲ್ಲಿದೆ ನೋಡಿ….

ಈ ಬುಡಕಟ್ಟು ಜನಾಂಗದವರು ತಮ್ಮ ಹಿರಿಯರು ಪಾಲಿಸಿಕೊಂಡ ಬಂದ ಸಂಪ್ರದಾಯವನ್ನು ಇವತ್ತಿಗೂ ಕೂಡ ಅನುಸರಿಸಿಕೊಂಡು ಬರುತ್ತಿದ್ದಾರಂತೆ. ಅಂತಹ ಆಚರಣೆಗಳಲ್ಲಿ ಒಂದು ಸ್ನಾನ ಮಾಡದೇ ಇರುವುದು. ಪ್ರಪಂಚದಲ್ಲಿರುವ ಈ ಬುಡಕಟ್ಟು ಜನಾಂಗದಲ್ಲಿ ಮಹಿಳೆಯರು ಸ್ನಾನ ಮಾಡುವುದನ್ನೇ ನಿಷೇಧಿಸಲಾಗಿದೆ, ಹೌದು, ಈ ಬುಡಕಟ್ಟು ಜನಾಂಗದ ಹೆಸರು ಹಿಂಬಾ ಬುಡಕಟ್ಟು. ಆಫ್ರಿಕಾ ನಮೀಬಾ ದೇಶದ ಮರುಭೂಮಿಗಳಲ್ಲಿ ಈ ಬುಡಕಟ್ಟು ಜನಾಂಗದ ಜನರು ನೆಲೆಸಿದ್ದು, ಆಧುನಿಕತೆಯಿಂದ ಸಂಪೂರ್ಣ ದೂರ ಉಳಿದಿದ್ದಾರೆ. ನಮ್ಗೆಲ್ಲರಿಗೂ ಒಂದು ದಿನ ಸ್ನಾನ ಮಾಡದೇ ಇದ್ರೆ ಕಿರಿಕಿರಿ ಅನುಭವ ಆಗ್ತದೆ, ಕೆಲವರ ದೇಹದಿಂದ ಗಬ್ಬು ವಾಸನೆ ಬರಲು ಶುರುವಾಗುತ್ತದೆ, ಆದರೆ ಬುಡಕಟ್ಟು ಜನಾಂಗದ ಮಹಿಳೆಯರು ಬೇಸಿಗೆಯಿರಲಿ, ಚಳಿಗಾಲವಿರಲಿ, ಮಳೆಗಾಲವೇ ಇರಲಿ ಸ್ನಾನ ಮಾಡುವುದೇ ಇಲ್ಲ. ಅಷ್ಟೇ ಅಲ್ಲದೇ, ಈ ಮಹಿಳೆಯರು ಬಟ್ಟೆ ಕೂಡ ಒಗೆಯೋದಿಲ್ಲವಂತೆ. ಆದರೆ ಜೀವಮಾನದಲ್ಲಿ ಒಮ್ಮೆ ಮಾತ್ರ ಸ್ನಾನ ಮಾಡೋದು, ಅದುವೇ ತಮ್ಮ ಮದುವೆ ದಿನವಂತೆ.

ಮದುವೆ ದಿನ ಮಾತ್ರ ಸ್ನಾನ ಮಾಡಿದ್ರು ಕೂಡ ಇಲ್ಲಿನ ಮಹಿಳೆಯರು ಸ್ವಚ್ಛತೆಯ ಕಡೆಗೆ ಹೆಚ್ಚು ಗಮನಹರಿಸ್ತಾರೆ. ದೇಹದ ಸ್ವಚ್ಛತೆಗಾಗಿ ಗಿಡಮೂಲಿಕೆಯನ್ನು ಬಳಸ್ತಾರೆ. ಹೌದು ತಮ್ಮ ಸುತ್ತಮುತ್ತಲಿನಲ್ಲಿ ಸಿಗುವ ವಿಶೇಷ ಗಿಡಮೂಲಿಕೆಗಳನ್ನು ನೀರಿನಲ್ಲಿ ಕುದಿಸುತ್ತಾರೆ. ಅದರ ಹೊಗೆಯನ್ನು ಬಳಸಿ ತಮ್ಮ ದೇಹವನ್ನು ಸ್ವಚ್ಛಗೊಳಿಸಿಕೊಳ್ಳುತ್ತಾರೆ. ಸೂರ್ಯನ ಬೆಳಕಿನಿಂದ ಚರ್ಮವನ್ನು ರಕ್ಷಿಸಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾದ ವಿಶೇಷ ಲೋಷನ್ ಬಳಸುತ್ತಾರೆ.

 

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!