ಹೈಕೋರ್ಟ್ ವರ್ಚುವಲ್ ವಿಚಾರಣೆಗೆ ಟಾಯ್ಲೆಟ್ನಲ್ಲಿ ಕುಳಿತು ಹಾಜರಾದ ಆರೋಪಿ;

ಕೊವಿಡ್ -19 ಸಾಂಕ್ರಾಮಿಕ ರೋಗ ಪ್ರಾರಂಭವಾದಾಗಿನಿಂದ ವರ್ಚುವಲ್ ಮೀಟಿಂಗ್ ದೈನಂದಿನ ಜೀವನದ ಭಾಗವಾಗಿದ್ದು, ವೈಯಕ್ತಿಕ ಮತ್ತು ವೃತ್ತಿಪರ ಸ್ಥಳಗಳ ನಡುವಿನ ಗೆರೆಗಳನ್ನು ಮಸುಕುಗೊಳಿಸುತ್ತಿವೆ. ಆನ್ಲೈನ್ ಮೀಟಿಂಗ್ ಸಮಯದಲ್ಲಿ ಬೆಡ್ರೂಂನಿಂದ ವಿಡಿಯೊ ಕರೆಗಳಿಗೆ ಹಾಜರಾಗುವುದು, ಮೀಟಿಂಗ್ ವೇಳೆಯೂ ಬೇರೆ ಕೆಲಸ ಮಾಡುವುದು ಅಸಾಮಾನ್ಯವೇನಲ್ಲ. ಆದರೆ, ಗುಜರಾತ್ ಹೈಕೋರ್ಟ್ ವಿಚಾರಣೆಗೆ ಶೌಚಾಲಯದಿಂದಲೇ ವ್ಯಕ್ತಿಯೊಬ್ಬರು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗುವ ಮೂಲಕ ನೆಟ್ಟಿಗರನ್ನು ಬೆರಗುಗೊಳಿಸಿದ್ದಾರೆ. ಇಂತಹ ಘಟನೆಗಳು ಕಾನೂನಿಗೆ ಮಾಡುವ ಅವಮಾನ ಎಂದು ಹಲವರು ಆಕ್ರೋಶ ಹೊರಹಾಕಿದ್ದಾರೆ.

ಗುಜರಾತ್ ಹೈಕೋರ್ಟ್ನ ವರ್ಚುವಲ್ ವಿಚಾರಣೆಗೆ ಹಾಜರಾದ ವ್ಯಕ್ತಿಯೊಬ್ಬರು ಟಾಯ್ಲೆಟ್ ಸೀಟಿನ ಮೇಲೆ ಕುಳಿತು ವಿಚಾರಣೆಯಲ್ಲಿ ಭಾಗಿಯಾದ ಕ್ಷಣವನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದೆ. ಈ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಜೂನ್ 20ರಂದು ನ್ಯಾಯಮೂರ್ತಿ ನಿರ್ಜಾರ್ ಎಸ್ ದೇಸಾಯಿ ಅವರ ಪೀಠದ ಮುಂದೆ ಈ ಘಟನೆ ನಡೆದಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಆ ವ್ಯಕ್ತಿ “ಸಮದ್ ಬ್ಯಾಟರಿ” ಎಂಬ ಹೆಸರಿನಲ್ಲಿ ವರ್ಚುವಲ್ ಕೋರ್ಟ್ ವಿಚಾರಣೆಗೆ ಲಾಗಿನ್ ಆಗಿದ್ದಾನೆ. ಆತ ಕುತ್ತಿಗೆಗೆ ಬ್ಲೂಟೂತ್ ಇಯರ್ಫೋನ್ ಧರಿಸಿರುವುದು ಕಂಡುಬಂದಿದೆ. ಕೋರ್ಟ್ ವಿಚಾರಣೆ ಪ್ರಾರಂಭವಾಗುತ್ತಿದ್ದಂತೆ ಅವನು ಆರಂಭದಲ್ಲಿ ತನ್ನ ಫೋನ್ ಅನ್ನು ದೂರದಲ್ಲಿ ಇರಿಸಿದನು. ಆಗ ಆತ ಟಾಯ್ಲೆಟ್ನಲ್ಲಿ ಕುಳಿತಿರುವುದು ಕಂಡಿತು. ಹಾಗೇ, ಬಾತ್ರೂಂನಿಂದ ಹೊರಬರುವ ಮೊದಲು ಅವನು ತನ್ನನ್ನು ತಾನು ಒರೆಸಿಕೊಳ್ಳುವುದನ್ನು ದೃಶ್ಯಗಳು ತೋರಿಸುತ್ತವೆ. ಅವನು ಮತ್ತೊಂದು ರೂಂನಲ್ಲಿ ಕುಳಿತು ವಿಚಾರಣೆಗೆ ಹಾಜರಾಗುವ ಮೊದಲು ಸ್ವಲ್ಪ ಹೊತ್ತು ಮೊಬೈಲನ್ನು ಮೇಜಿನ ಮೇಲಿಟ್ಟು ಕಣ್ಮರೆಯಾಗುತ್ತಾನೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!