ಟಿ20 ಪವರ್ಪ್ಲೇ ನಿಯಮದಲ್ಲಿ ಬದಲಾವಣೆ ತಂದ ಐಸಿಸಿ….

ಐಸಿಸಿ ಪುರುಷರ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ ಪವರ್ಪ್ಲೇ ನಿಯಮದಲ್ಲಿ ಮಹತ್ವದ ಬದಲಾವಣೆ ಮಾಡಿದೆ. ಮಳೆ ಅಥವಾ ಇತರ ಕಾರಣಗಳಿಂದ ಓವರ್ಗಳು ಕಡಿಮೆಯಾದರೆ ಪವರ್ಪ್ಲೇ, ಓವರ್ಗಳ ಬದಲಿಗೆ ಚೆಂಡುಗಳ ಆಧಾರದ ಮೇಲೆ ನಿರ್ಧರಿಸಲಾಗುತ್ತದೆ. ಉದಾಹರಣೆಗೆ, 5 ಓವರ್ಗಳ ಪಂದ್ಯದಲ್ಲಿ 1.3 ಓವರ್ಗಳು ಪವರ್ಪ್ಲೇ ಆಗಿರುತ್ತದೆ. ಈ ನಿಯಮ ಜುಲೈ 2 ರಿಂದ ಜಾರಿಗೆ ಬರುತ್ತದೆ.

ಅಂತರರಾಷ್ಟ್ರೀಯ ಕ್ರಿಕೆಟ್ ಅನ್ನು ಮತ್ತಷ್ಟು ರೋಚಕಗೊಳಿಸುವ ಸಲುವಾಗಿ ಐಸಿಸಿ ತನ್ನ ಹಳೆಯ ನಿಯಮಗಳಲ್ಲಿ ಬದಲಾವಣೆಗಳನ್ನು ತರುವುದರೊಂದಿಗೆ ಹೊಸ ನಿಯಮಗಳನ್ನು ಜಾರಿಗೊಳಿಸುತ್ತಿದೆ. ಆ ಪ್ರಕಾರ, ಟೆಸ್ಟ್ ಕ್ರಿಕೆಟ್ನಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡಿ ಜಾರಿಗೆ ತಂದಿದ್ದ ಐಸಿಸಿ, ಇದೀಗ ಟಿ20 ಕ್ರಿಕೆಟ್ನ ನಿಯಮದಲ್ಲೂ ಒಂದು ಬದಲಾವಣೆ ಮಾಡಿದೆ.

ಇತ್ತೀಚಿನ ದಿನಗಳಲ್ಲಿ ಟಿ20 ಕ್ರಿಕೆಟ್ ಸಾಕಷ್ಟು ಮನ್ನಣೆಗಳಿಸುತ್ತಿದೆ. ಪ್ರತಿ ದೇಶಗಳು ಸಹ ಟಿ20 ಲೀಗ್ಗಳನ್ನು ಆಯೋಜಿಸುವ ಮೂಲಕ ಜನರನ್ನು ಕ್ರಿಕೆಟ್ನತ್ತ ಸೆಳೆಯುತ್ತಿವೆ. ಇದನ್ನು ಅರಿತುಕೊಂಡಿರುವ ಐಸಿಸಿ ಇದೀಗ ಪುರುಷರ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್ ಪಂದ್ಯಗಳ ಪವರ್ಪ್ಲೇ ನಿಯಮದಲ್ಲಿ ಪ್ರಮುಖ ಬದಲಾವಣೆ ಮಾಡಿದೆ. ಐಸಿಸಿ ತಂದಿರುವ ಹೊಸ ಬದಲಾವಣೆಯ ಪ್ರಕಾರ, ಟಿ20 ಅಂತರರಾಷ್ಟ್ರೀಯ ಪಂದ್ಯದಲ್ಲಿ ಮಳೆ ಅಥವಾ ಇನ್ನಾವುದೇ ಕಾರಣದಿಂದಾಗಿ ಇನ್ನಿಂಗ್ಸ್ನ ಓವರ್ಗಳನ್ನು ಕಡಿಮೆ ಮಾಡಿದರೆ, ಪವರ್ಪ್ಲೇ ಓವರ್ಗಳನ್ನು ಓವರ್ಗಳ ಬದಲಿಗೆ ಚೆಂಡುಗಳ ಆಧಾರದ ಮೇಲೆ ನಿರ್ಧರಿಸಲಾಗುತ್ತದೆ.

ಪ್ರಸ್ತುತ ಜಾರಿಯಲ್ಲಿರುವ ನಿಯಮಗಳ ಪ್ರಕಾರ, 20 ಓವರ್ಗಳ ಇನ್ನಿಂಗ್ಸ್ನಲ್ಲಿ ಮೊದಲ 6 ಓವರ್ಗಳು ಪವರ್ಪ್ಲೇ ಆಗಿದ್ದವು. ಈ 6 ಓವರ್ಗಳಲ್ಲಿ ಫೀಲ್ಡಿಂಗ್ ಮಾಡುತ್ತಿರುವ ತಂಡವು 30 ಯಾರ್ಡ್ ವೃತ್ತದ ಹೊರಗೆ ಇಬ್ಬರಿಗಿಂತ ಹೆಚ್ಚು ಫೀಲ್ಡರ್ಗಳನ್ನು ಇರಿಸುವಂತಿಲ್ಲ. ಆ ಬಳಿಕ ಅಂದರೆ 6 ಓವರ್ ಮುಗಿದ ನಂತರ ಉಳಿದ ಓವರ್ಗಳಲ್ಲಿ, 30 ಯಾರ್ಡ್ ವೃತ್ತದ ಹೊರಗೆ ಐದು ಫೀಲ್ಡರ್ಗಳನ್ನು ನಿಲ್ಲಿಸಬಹುದು.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!