ಹೆಣ್ಣುಮಕ್ಕಳಿಗೆ ಏಕೆ ಮೂಗು ಚುಚ್ಚುತ್ತಾರೆ ಗೊತ್ತಾ? ಇದರ ಹಿಂದಿದೆ ಒಂದು ಮಹತ್ತರ ಕಾರಣ ….

ಭಾರತೀಯರಿಗೆ ಮೂಗು ಚುಚ್ಚುವುದು ವಿವಾಹ ಸಂಪ್ರದಾಯದ ಒಂದು ಪ್ರಮುಖ ಆಚರಣೆ ಅಥವಾ ಭಾಗ. ಪ್ರಾಚೀನ ಕಾಲದಲ್ಲಿ, ಪುರುಷರು ಮತ್ತು ಮಹಿಳೆಯರು ಇಬ್ಬರೂ ಕೂಡ ತಮ್ಮ ಕಿವಿಗಳನ್ನು ಚುಚ್ಚಿಕೊಳ್ಳುತ್ತಿದ್ದರು. ಮಾತ್ರವಲ್ಲ ಮಹಿಳೆಯರು ಮೂಗು ಚುಚ್ಚಿಕೊಳ್ಳುತ್ತಿದ್ದರು. ಮೂಗು ಚುಚ್ಚಿ ಮೂಗುತಿ ಹಾಕುವುದು ಮಹಿಳೆಯರ ಅಂದ ಹೆಚ್ಚಿಸುವುದಕ್ಕಲ್ಲ. ಇದರ ಹಿಂದೆ ಮಹತ್ತರ ಕಾರಣವಿದೆ. ಹೌದು, ಈ ರೀತಿ ಮೂಗು ಚುಚ್ಚುವುದರ ಹಿಂದೆ ಕಾರಣವಿದೆ. ಹಾಗಾದರೆ ಏನದು? ಯಾಕೆ ಎಡಭಾಗದಲ್ಲಿ ಮೂಗುತಿ ಹಾಕಬೇಕು ಎಂಬುದರ ವಿಶೇಷ ಮಾಹಿತಿ ಇಲ್ಲಿದೆ ನೋಡಿ….

ಅಲಂಕಾರಿಕ ದೃಷ್ಟಿಕೋನದಿಂದ ನೋಡುವುದಾದರೆ ಇದು ಹೆಣ್ಣಿನ ಸೌಂದರ್ಯವನ್ನು ಇಮ್ಮಡಿಗೊಳಿಸುವುದರಲ್ಲಿ ಸಂಶಯವಿಲ್ಲ. ಆದರೆ ಇದು ಅಂದ ಹೆಚ್ಚಿಸುವುದಕ್ಕೆ ಮಾತ್ರವಲ್ಲ ಬದಲಾಗಿ ಈ ಆಭರಣಗಳು ಮಹಿಳೆಯರ ಆರೋಗ್ಯ ಕಾಪಾಡುತ್ತವೆ. ಕೆಲವು ಕಡೆಗಳಲ್ಲಿ ಮದುವೆಯಾದ ಹೆಂಗಸರು ಇದನ್ನು ಕಡ್ಡಾಯವಾಗಿ ಹಾಕಿಕೊಳ್ಳಬೇಕು. ಇದೊಂದು ವಿವಾಹಿತರ ಸಂಕೇತ ಅದಲ್ಲದೆ ಮೂಗುತಿ ಧರಿಸುವುದು ಶುಭವೆಂದು ಪರಿಗಣಿಸಲಾಗುತ್ತದೆ. ಕೆಲವು ನಂಬಿಕೆಗಳ ಪ್ರಕಾರ, ಮೂಗು ಚುಚ್ಚುವುದು ಪಾರ್ವತಿ ದೇವಿಯನ್ನು ಗೌರವಿಸುವ ಒಂದು ಮಾರ್ಗವಾಗಿದೆ. ಇದನ್ನು ಹದಿನಾರು ಅಲಂಕಾರಗಳಲ್ಲಿ ಒಂದು ಎಂದು ಪರಿಗಣಿಸಲಾಗಿದೆ. ಮೂಗು ಅಥವಾ ಕಿವಿಗಳನ್ನು ಚುಚ್ಚಿಕೊಳ್ಳುವುದನ್ನು ಅಲಂಕಾರದ ಒಂದು ರೂಪವೆಂದು ನಾವು ಪರಿಗಣಿಸಬಹುದು, ಆದರೆ ಅದರ ಹಿಂದೆ ವೈಜ್ಞಾನಿಕ ಕಾರಣವಿದೆ. ವಾಸ್ತವವಾಗಿ, ಮೂಗು ಚುಚ್ಚುವುದರಿಂದ ಮಹಿಳೆಯರಿಗೆ ಮುಟ್ಟಿನ ನೋವಿನಿಂದ ಪರಿಹಾರ ಸಿಗುತ್ತದೆ ಎಂದು ವೇದಗಳು ಮತ್ತು ಧರ್ಮಗ್ರಂಥಗಳಲ್ಲಿ ಬರೆಯಲಾಗಿದೆ. ಹೆಚ್ಚುವರಿಯಾಗಿ, ಹೆರಿಗೆಯ ಸಮಯದಲ್ಲಿ ಮಗುವಿಗೆ ಜನ್ಮ ನೀಡುವುದು ಸಹ ತುಂಬಾ ಸುಲಭವಾಗುತ್ತದೆ ಇದು ಆ ನೋವನ್ನು ಕಡಿಮೆ ಮಾಡುತ್ತದೆ ಎಂದು ಹೇಳಲಾಗುತ್ತದೆ. ಈ ಬಗ್ಗೆ ನಡೆದ ಕೆಲವು ಸಂಶೋಧನಗೆಳು ಕೂಡ ಇದಕ್ಕೆ ಪೂರಕವಾಗಿದೆ. ಮಾತ್ರವಲ್ಲ ಇದು ಮೈಗ್ರೇನ್ ನೋವಿನಿಂದ ಕೂಡ ಪರಿಹಾರ ನೀಡುತ್ತದೆ.

 

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!