ಪರಿಶಿಷ್ಟ ಜಾತಿ ಸಮುದಾಯಕ್ಕೆ ಒಳಮೀಸಲಾತಿ ಕಲ್ಪಿಸಲು ನಾನು ಬದ್ಧನಾಗಿದ್ದು, ಇದರ ಬಗ್ಗೆ ಯಾವುದೇ ಅನುಮಾನ : ಸಿದ್ದರಾಮಯ್ಯ

ಪರಿಶಿಷ್ಟ ಜಾತಿ ಸಮುದಾಯಕ್ಕೆ ಒಳಮೀಸಲಾತಿ ಕಲ್ಪಿಸಲು ನಾನು ಬದ್ಧನಾಗಿದ್ದು, ಇದರ ಬಗ್ಗೆ ಯಾವುದೇ ಅನುಮಾನ, ಅಪನಂಬಿಕೆ ಬೇಡ. ನಾನು ಈಗಾಗಲೇ ಸುಪ್ರೀಂಕೋರ್ಟ್ ತೀರ್ಪನ್ನು ಸ್ವಾಗತಿಸಿದ್ದೇನೆ. ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ಕಾನೂನು ತಜ್ಞರು ಮತ್ತು ಸಮುದಾಯದ ನಾಯಕರ ಜೊತೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುತ್ತೇನೆ.

ಒಳಮೀಸಲಾತಿಯನ್ನು ದಲಿತ ಸಮುದಾಯ ಒಮ್ಮತದಿಂದ ಒಪ್ಪಿಕೊಂಡು ಅನುಷ್ಠಾನಕ್ಕೆ ಬೆಂಬಲ ನೀಡಿರುವುದು ಸ್ವಾಗತಾರ್ಹ ಕ್ರಮವಾಗಿದೆ. ಸಚಿವರಾದ ಕೆ.ಹೆಚ್.ಮುನಿಯಪ್ಪ, ಆರ್.ಬಿ.ತಿಮ್ಮಾಪುರ್ ಮತ್ತು ಮಾಜಿ ಸಚಿವ ಹೆಚ್.ಆಂಜನೇಯ ಹಾಗೂ ಮಾಜಿ ರಾಜ್ಯಸಭಾ ಸದಸ್ಯರಾದ ಎಲ್. ಹನುಮಂತಯ್ಯ ಮತ್ತು ದಲಿತ ಶಾಸಕರು ಹಾಗೂ ಮುಖಂಡರ ನಿಯೋಗ ಇಂದು ನನ್ನನ್ನು ಭೇಟಿಯಾಗಿ ಒಳ ಮೀಸಲಾತಿ ಜಾರಿ ಸಂಬಂಧ ಚರ್ಚೆ ನಡೆಸಿದರು. ಒಳಮೀಸಲಾತಿ ಜಾರಿ ವಿಚಾರದಲ್ಲಿ ನನ್ನ ಬದ್ಧತೆಯನ್ನು ಅವರಿಗೆ ತಿಳಿಸಿದೆ.

ನಾನು, ನಮ್ಮ ಪಕ್ಷ ಮತ್ತು ನಮ್ಮ ಸರ್ಕಾರಕ್ಕೆ ಸಾಮಾಜಿಕ ನ್ಯಾಯದ ಪರವಾದ ಖಚಿತ ಮತ್ತು ದೃಢ ನಿಲುವು ಇದೆ. ಇದರಲ್ಲಿ ಗೊಂದಲ ಇಲ್ಲವೇ ಇಲ್ಲ. ಮೀಸಲಾತಿಯ ಸೌಲಭ್ಯದ ನ್ಯಾಯಯುತ ಹಂಚಿಕೆಗೆ ಒಳಮೀಸಲಾತಿ ಅಗತ್ಯ ಎನ್ನುವುದು ಇತ್ತೀಚಿನ ದಿನಗಳಲ್ಲಿ ಎಲ್ಲರಿಗೂ ಅರಿವಾಗಿದೆ. ಸುಪ್ರೀಂ ಕೋರ್ಟ್ ತೀರ್ಪು ಕೂಡಾ ಇದೇ ಅಭಿಪ್ರಾಯವನ್ನು ಹೊಂದಿದೆ. ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಕೆನೆಪದರದ ವಿಚಾರ ಪ್ರಸ್ತಾವವಾಗಿರುವುದು ಕೆಲವರಲ್ಲಿ ಗೊಂದಲ ಉಂಟು ಮಾಡಿದೆ. ನ್ಯಾಯಾಲಯದ ತೀರ್ಪಿನ ವಿಶ್ಲೇಷಣೆಗೆ ನಾನು ಹೋಗುವುದಿಲ್ಲ. ನಾನು ಅರ್ಥಮಾಡಿಕೊಂಡಂತೆ ಒಳ ಮೀಸಲಾತಿ ಜಾರಿಗೊಳಿಸಲು ಕೆನೆಪದರದ ವಿಚಾರ ಅಡ್ಡಿಯಾಗಲಾರದು. ಕೆನೆಪದರದ ಬಗ್ಗೆ ಇಡೀ ದಲಿತ ಸಮುದಾಯದ ನಿಲುವೇ ನನ್ನ ನಿಲುವೂ ಆಗಿದೆ.

ಭಾರತೀಯ ಜನತಾ ಪಕ್ಷದ ಕೆಲವು ನಾಯಕರು ಅನಗತ್ಯವಾಗಿ ಊಹಾಪೋಹಗಳ ಮೂಲಕ ಒಳಮೀಸಲಾತಿ ವಿಷಯವನ್ನು ಮುಂದಿಟ್ಟುಕೊಂಡು ನಮ್ಮ ಸರ್ಕಾರದ ವಿರುದ್ಧ ದಲಿತರನ್ನು ಎತ್ತಿಕಟ್ಟುವ ಕುಟಿಲ ಪ್ರಯತ್ನ ನಡೆಸುತ್ತಿದ್ದಾರೆ. ಸಾಮಾಜಿಕ ನ್ಯಾಯದ ವಿರೋಧಿಗಳಾದ ಈ ಬಿಜೆಪಿ ನಾಯಕರ ಈ ಕುಟಿಲತನವನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ದಲಿತ ಸಮುದಾಯಕ್ಕೆ ಇದೆ ಎಂದು ನಾನು ತಿಳಿದುಕೊಂಡಿದ್ದೇನೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಕೇಂದ್ರ ಸಚಿವ ಸಂಪುಟ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಪುನರ್‌ರಚನೆ: ಫಡ್ನವೀಸ್ ಸೇರಿದಂತೆ ನಾಲ್ವರು ಸಿಎಂಗಳಿಗೆ ಉನ್ನತ ಸ್ಥಾನ ಸಾಧ್ಯತೆ

ಮುಂಬರುವ 2027-28ರ ರಾಜ್ಯ ವಿಧಾನಸಭಾ ಚುನಾವಣೆಗಳು ಹಾಗೂ 2029ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸಚಿವ ಸಂಪುಟ ಮತ್ತು ಬಿಜೆಪಿಯ 12 ಸದಸ್ಯರ ಸಂಸದೀಯ ಮಂಡಳಿಯನ್ನು ಶೀಘ್ರದಲ್ಲೇ ಪುನರ್‌ರಚಿಸಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಈ ಉನ್ನತ ಮಟ್ಟದ ಬದಲಾವಣೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!