ಗಡ್ಡವಿದೆ ಎಂದು ಕಾಶ್ಮೀರಿ ವೈದ್ಯನಿಗೆ ಮೆಡಿಕಲ್ ಕಾಲೇಜಿನಲ್ಲಿ ದಾಖಲಾತಿ ನಿರಾಕರಣೆ ಮಾಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ……..

ನೆಫ್ರಾಲಜಿ ಸ್ಪೆಷಲೈಸೇಷನ್ಗೆ ಸ್ಪರ್ಧಾತ್ಮಕವಾದ NEET-SS ಪರೀಕ್ಷೆಯಲ್ಲಿ ಉತ್ತೀರ್ಣರಾದ ಜಮ್ಮು ಮತ್ತು ಕಾಶ್ಮೀರದ ವೈದ್ಯ ಜುಬೈರ್ ಅಹ್ಮದ್ ತಮಿಳುನಾಡಿನ ಕೊಯಮತ್ತೂರಿನ ಕೊವಾಯ್ ಮೆಡಿಕಲ್ ಸೆಂಟರ್ ಆ್ಯಂಡ್ ಹಾಸ್ಪಿಟಲ್ ನಲ್ಲಿ ಕೌನ್ಸೆಲಿಂಗ್ ಸಮಯದಲ್ಲಿ ಅನಿರೀಕ್ಷಿತ ಆಘಾತ ಎದುರಾಯಿತು. ತಮ್ಮ ಮೆಡಿಕಲ್ ಕಾಲೇಜಿನ ಡ್ರೆಸ್ ಕೋಡ್ ಉಲ್ಲಂಘನೆಯನ್ನು ಉಲ್ಲೇಖಿಸಿ ಕಾಲೇಜು ಅಧಿಕಾರಿಗಳು ಆ ವೈದ್ಯ ಗಡ್ಡ ಬೋಳಿಸಿಕೊಳ್ಳದ ಹೊರತು ಅವರನ್ನು ಕಾಲೇಜಿಗೆ ಸೇರಿಸಿಕೊಳ್ಳಲು ನಿರಾಕರಿಸಿದ್ದಾರೆ ಎನ್ನಲಾಗಿದೆ. ಅಹ್ಮದ್ ಅವರು ಗಡ್ಡ ಬೋಳಿಸುವೆನೆಂದು ಭರವಸೆಯನ್ನು ನೀಡಿದರೂ ತಮಿಳುನಾಡಿನ ಆಸ್ಪತ್ರೆ ಆಡಳಿತ ಸೀಟು ನೀಡಲು ನಿರಾಕರಿಸಿತು. ಅವರ 2 ಲಕ್ಷ ರೂ. ಅಡ್ಮಿಷನ್ ಡೆಪಾಸಿಟ್ ಅನ್ನು ಸಹ ತಡೆಹಿಡಿಯಿತು.

ಈ ಘಟನೆಯು ಧಾರ್ಮಿಕ ತಾರತಮ್ಯದ ಆರೋಪಗಳನ್ನು ಹುಟ್ಟುಹಾಕಿದೆ. ಏಕೆಂದರೆ ಗಡ್ಡವು ಅನೇಕ ಮುಸ್ಲಿಂ ಪುರುಷರಿಗೆ ಸಾಂಸ್ಕೃತಿಕ ಮತ್ತು ಧಾರ್ಮಿಕ ಮಹತ್ವವನ್ನು ಹೊಂದಿದೆ. ಇದೀಗ ಕಾಶ್ಮೀರದ ವಿದ್ಯಾರ್ಥಿ ಸಂಘವು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರಿಗೆ ಮನವಿ ಸಲ್ಲಿಸಿದ್ದು, ಕಾಲೇಜಿನ ಕ್ರಮಗಳು ಭಾರತೀಯ ಸಂವಿಧಾನದ 25ನೇ ವಿಧಿಯನ್ನು ಉಲ್ಲಂಘಿಸುತ್ತದೆ ಎಂದು ಆರೋಪಿಸಿದ್ದಾರೆ. ತಮ್ಮ ಪತ್ರದಲ್ಲಿ ವಿದ್ಯಾರ್ಥಿ ಸಂಘವು, ಶಿಕ್ಷಣ ಸಂಸ್ಥೆಗಳು ಮೂಲಭೂತ ಹಕ್ಕುಗಳೊಂದಿಗೆ ಸಂಘರ್ಷಿಸುವ ಡ್ರೆಸ್ ಕೋಡ್ಗಳನ್ನು ವಿಧಿಸಲು ಸಾಧ್ಯವಿಲ್ಲ ಎಂದು ಒತ್ತಿ ಹೇಳಿದೆ. “ಈ ನಿರಾಕರಣೆ ಧಾರ್ಮಿಕ ಪೂರ್ವಾಗ್ರಹದಿಂದ ಉಂಟಾಗಿದ್ದು, ಅದು ಅಪಾಯಕಾರಿಯಾಗಿದೆ” ಎಂದು ಒಕ್ಕೂಟದ ಪ್ರತಿನಿಧಿಯೊಬ್ಬರು ಹೇಳಿದ್ದಾರೆ.

 

 

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!