ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋಗುವಂತಿಲ್ಲ….!!!!

ಮನೆಗೆಲಸದಾಕೆ ಮೇಲಿನ ಅ*ಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಮೊದಲು ವಿಚಾರಣಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸದೆ ನೇರವಾಗಿ ಹೈಕೋರ್ಟ್ ಮೊರೆ ಹೋಗುವಂತಿಲ್ಲ ಎಂದು ಪ್ರಾಸಿಕ್ಯೂಷನ್ ವಾದ ಮಂಡಿಸಿದೆ. ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಅರ್ಜಿ ಕುರಿತು ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ಪೀಠ ಶುಕ್ರವಾರ ವಿಚಾರಣೆ ನಡೆಸಿತು. ಕೆಲ ಕಾಲ ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಾಲಯ ವಿಚಾರಣೆ ಯನ್ನು ಜು.2ಕ್ಕೆ ಮುಂದೂಡಿತು. ಪ್ರಾಸಿಕ್ಯೂಷನ್ ಪರ ವಾದಿಸಿದ ಎಸ್ಪಿಪಿ ರವಿವರ್ಮ ಕುಮಾರ್, “ಅರ್ಜಿದಾರರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಈ ಹಿಂದೆ ವಿಚಾರಣಾ ನ್ಯಾಯಾಲಯ ಹಾಗೂ ಹೈಕೋರ್ಟ್ ವಜಾಗೊಳಿಸಿತ್ತು.

ಸುಪ್ರೀಂಕೋರ್ಟ್ ಕೂಡ ಅವರ ಅರ್ಜಿ ವಜಾಗೊಳಿಸಿದೆ. ಈಗ ಬದಲಾದ ಪರಿಸ್ಥಿತಿಯಲ್ಲಿ ಅರ್ಜಿ ಸಲ್ಲಿಸುವುದಾದರೆ ಮೊದಲು ಅವರು ಸೆಷನ್ಸ್ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿ ನಂತರವಷ್ಟೇ ಹೈಕೋರ್ಟ್ ಮೊರೆ ಹೋಗಬಹುದೇ ಹೊರತು ಪ್ರಕ್ರಿಯೆ ಉಲ್ಲಂಘಿಸಿ ನೇರವಾಗಿ ಹೈಕೋರ್ಟ್ನ ನಲ್ಲಿ ಅರ್ಜಿ ಸಲ್ಲಿಸುವಂತಿಲ್ಲ,” ಎಂದರು. ಅರ್ಜಿದಾರರ ಪರ ವಕೀಲರು “ಹೊಳೆನರಸೀಪುರ ಪ್ರಕರಣದಲ್ಲಿ ಸಾಕ್ಷ್ಯ ವಿಚಾರಣೆಯೇ ಆರಂಭವಾಗಿಲ್ಲ. ವಿಚಾರಣೆಯೇ ಆರಂಭವಾಗದೆ ಜೈಲಿನಲ್ಲಿ ಕಳೆಯುವಂತಾಗಿದೆ. ಈ ಪ್ರಕರಣದಲ್ಲಿ 150 ಸಾಕ್ಷಿಗಳ ವಿಚಾರಣೆಯಾಗಬೇಕಿದೆ. ಸದ್ಯಕ್ಕೆ ವಿಚಾರಣೆ ಮುಗಿಯುವ ಸಾಧ್ಯತೆ ಇಲ್ಲದಿರುವುದರಿಂದ ಜಾಮೀನು ನೀಡಬೇಕು. ಈ ಪ್ರಕರಣದಲ್ಲಿ ಪ್ರಜ್ವಲ್ ಅವರನ್ನು ಪೊಲೀಸ್ ವಶಕ್ಕೂ ತೆಗೆದುಕೊಂಡಿಲ್ಲ. ಹಾಗಾಗಿ, ಷರತ್ತು ವಿಧಿಸಿ ಜಾಮೀನು ನೀಡಬೇಕು,” ಎಂದು ಮನವಿ ಮಾಡಿದರು.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!