ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋಗುವಂತಿಲ್ಲ….!!!!

ಮನೆಗೆಲಸದಾಕೆ ಮೇಲಿನ ಅ*ಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಮೊದಲು ವಿಚಾರಣಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸದೆ ನೇರವಾಗಿ ಹೈಕೋರ್ಟ್ ಮೊರೆ ಹೋಗುವಂತಿಲ್ಲ ಎಂದು ಪ್ರಾಸಿಕ್ಯೂಷನ್ ವಾದ ಮಂಡಿಸಿದೆ. ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಅರ್ಜಿ ಕುರಿತು ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ಪೀಠ ಶುಕ್ರವಾರ ವಿಚಾರಣೆ ನಡೆಸಿತು. ಕೆಲ ಕಾಲ ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಾಲಯ ವಿಚಾರಣೆ ಯನ್ನು ಜು.2ಕ್ಕೆ ಮುಂದೂಡಿತು. ಪ್ರಾಸಿಕ್ಯೂಷನ್ ಪರ ವಾದಿಸಿದ ಎಸ್ಪಿಪಿ ರವಿವರ್ಮ ಕುಮಾರ್, “ಅರ್ಜಿದಾರರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಈ ಹಿಂದೆ ವಿಚಾರಣಾ ನ್ಯಾಯಾಲಯ ಹಾಗೂ ಹೈಕೋರ್ಟ್ ವಜಾಗೊಳಿಸಿತ್ತು.

ಸುಪ್ರೀಂಕೋರ್ಟ್ ಕೂಡ ಅವರ ಅರ್ಜಿ ವಜಾಗೊಳಿಸಿದೆ. ಈಗ ಬದಲಾದ ಪರಿಸ್ಥಿತಿಯಲ್ಲಿ ಅರ್ಜಿ ಸಲ್ಲಿಸುವುದಾದರೆ ಮೊದಲು ಅವರು ಸೆಷನ್ಸ್ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿ ನಂತರವಷ್ಟೇ ಹೈಕೋರ್ಟ್ ಮೊರೆ ಹೋಗಬಹುದೇ ಹೊರತು ಪ್ರಕ್ರಿಯೆ ಉಲ್ಲಂಘಿಸಿ ನೇರವಾಗಿ ಹೈಕೋರ್ಟ್ನ ನಲ್ಲಿ ಅರ್ಜಿ ಸಲ್ಲಿಸುವಂತಿಲ್ಲ,” ಎಂದರು. ಅರ್ಜಿದಾರರ ಪರ ವಕೀಲರು “ಹೊಳೆನರಸೀಪುರ ಪ್ರಕರಣದಲ್ಲಿ ಸಾಕ್ಷ್ಯ ವಿಚಾರಣೆಯೇ ಆರಂಭವಾಗಿಲ್ಲ. ವಿಚಾರಣೆಯೇ ಆರಂಭವಾಗದೆ ಜೈಲಿನಲ್ಲಿ ಕಳೆಯುವಂತಾಗಿದೆ. ಈ ಪ್ರಕರಣದಲ್ಲಿ 150 ಸಾಕ್ಷಿಗಳ ವಿಚಾರಣೆಯಾಗಬೇಕಿದೆ. ಸದ್ಯಕ್ಕೆ ವಿಚಾರಣೆ ಮುಗಿಯುವ ಸಾಧ್ಯತೆ ಇಲ್ಲದಿರುವುದರಿಂದ ಜಾಮೀನು ನೀಡಬೇಕು. ಈ ಪ್ರಕರಣದಲ್ಲಿ ಪ್ರಜ್ವಲ್ ಅವರನ್ನು ಪೊಲೀಸ್ ವಶಕ್ಕೂ ತೆಗೆದುಕೊಂಡಿಲ್ಲ. ಹಾಗಾಗಿ, ಷರತ್ತು ವಿಧಿಸಿ ಜಾಮೀನು ನೀಡಬೇಕು,” ಎಂದು ಮನವಿ ಮಾಡಿದರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!