ಶ್ರೀ ಕೃಷ್ಣ ಜನ್ಮಾಷ್ಟಮಿ 48 ದಿನಗಳ ಮಂಡಲ ಉತ್ಸವಕ್ಕೆ ಸಿದ್ದರಾಮಯ್ಯಗೆ ಆಹ್ವಾನ.

ಉಡುಪಿ : ಶ್ರೀ ಕೃಷ್ಣ ಜನ್ಮಾಷ್ಟಮಿ ನಿಮಿತ್ತ ಉಡುಪಿಯಲ್ಲಿ ನಡೆಯುವ 48 ದಿನಗಳ ಮಂಡಲ ಉತ್ಸವ ಉದ್ಘಾಟನಾ ಕಾರ್ಯಕ್ರಮಕ್ಕೆ ಪುತ್ತಿಗೆ ಮಠದ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಲಾಗಿದೆ. ಶ್ರೀ ಕೃಷ್ಣ ಜನ್ಮಾಷ್ಟಮಿ ನಿಮಿತ್ತ ಆಗಸ್ಟ್ 1ರಿಂದ ಸೆಪ್ಟೆಂಬರ್ 15ರವರೆಗೆ 48 ದಿನಗಳ ಕಾಲ ಮಂಡಲ ಉತ್ಸವ ಕಾರ್ಯಕ್ರಮ ನಡೆಯಲಿದೆ. ಈ ಮಂಡಲ ಉತ್ಸವ ಉದ್ಘಾಟನಾ ಕಾರ್ಯಕ್ರಮಕ್ಕೆ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಶ್ರೀಗಳ ಕಾರ್ಯದರ್ಶಿ ರತೀಶ್ ತಂತ್ರಿ ಮತ್ತು ಬೆಂಗಳೂರು ಶಾಖಾ ಮಠದ ಎ ಬಿ ಕುಂಜಾರ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶ್ರೀ ಕೃಷ್ಣ ಮುಖ್ಯಪ್ರಾಣರ ಪ್ರಸಾದ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.

 

 

 

 

 

 

ಇನ್ನು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಡುಪಿ ಶ್ರೀ ಕೃಷ್ಣ ಮಠದಿಂದ ಹಲವು ದಶಕಗಳಿಂದ ಅಂತರ ಕಾಯ್ದುಕೊಂಡಿದ್ದಾರೆ. ಈ ಹಿಂದೆಯೂ ಹಲವು ಬಾರಿ ಕೃಷ್ಣಮಠದಿಂದ ವಿವಿಧ ಕಾರ್ಯಕ್ರಮಗಳಿಗೆ ಆಹ್ವಾನ ನೀಡಲಾಗಿತ್ತು. ಮುಖ್ಯಮಂತ್ರಿಗಳು ಉಡುಪಿಗೆ ಭೇಟಿ ನೀಡಿದಾಗಲೂ, ಕೃಷ್ಣ ಮಠದೊಂದಿಗೆ ಅಂತರ ಕಾಯ್ದುಕೊಂಡಿದ್ದರು. ಆದರೆ, ಈ ಬಾರಿಯ ಕೃಷ್ಣ ಜನ್ಮಾಷ್ಟಮಿಗೆ ಸಿದ್ದರಾಮಯ್ಯ ತೆರಳುತ್ತಾರಾ? ಕಾದು ನೋಡಬೇಕಿದೆ.
ದಶಕಗಳ ಹಿಂದೆ ಶ್ರೀಕೃಷ್ಣ ಮಠದಲ್ಲಿ ಕನಕ ಗೋಪುರ ವಿವಾದಕ್ಕೆ ಕಾರಣವಾಗಿತ್ತ್ತು. ಮಠದ ವಿರುದ್ಧದ ಪ್ರತಿಭಟನೆಯ ನೇತೃತ್ವವನ್ನು ಸಿದ್ದರಾಮಯ್ಯ ಅವರೇ ವಹಿಸಿಕೊಂಡಿದ್ದರು. ಅಂದಿನಿಂದ ಇಲ್ಲಿಯವರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಶಕಗಳಿಂದಲೂ ಕೃಷ್ಣ ಮಠದೊಂದಿಗೆ ಯಾವುದೇ ಭಾಂದವ್ಯ ಹೊಂದಿಲ್ಲ ಎಂದು ತಿಳಿದುಬಂದಿದೆ.

 

 

 

 

 

 

ಏನಿದು ಕನಕ ಗೋಪುರ ವಿವಾದ?
ದಶಕಗಳ ಹಿಂದೆ ಉಡುಪಿ ಶ್ರೀ ಕೃಷ್ಣ ದೇಗುಲ ಹೊರಭಾಗದಲ್ಲಿ ಪುರಸಭೆ ಜಾಗದಲ್ಲಿದ್ದ ಹಳೆಯ ಕನಕ ಗೋಪುರ ಶಿಥಿಲಗೊಂಡಿತ್ತು. ಹೀಗಾಗಿ, ಕನಕ ಗೋಪುರವನ್ನು ತೆರವುಗೊಳಿಸಲಾಗಿತ್ತು. ಈ ವಿಚಾರ ವಿವಾದಕ್ಕೆ ಕಾರಣವಾಗಿತ್ತು. ಉಡಪಿ ಶ್ರೀ ಕೃಷ್ಣ ಮಠದ ವಿರುದ್ಧ ಪ್ರತಿಭಟನೆಗಳು ನಡೆದಿದ್ದವು. ಈ ಪ್ರತಿಭಟನೆಯ ನೇತೃತ್ವವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಹಿಸಿಕೊಂಡಿದ್ದರು.
ಬಳಿಕ, ವಿಶ್ವೇಶತೀರ್ಥ ಶ್ರೀಪಾದರು ಪ್ರತಿಭಟನಾಕಾರರನ್ನು ಕರೆಸಿ ಮಾತನಾಡಿ, ಕನಕ ಪ್ರತಿಮೆ ಸಹಿತ ಗೋಪುರ ನಿರ್ಮಾಣ ಮಾಡಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಣೆಯಾಗುವಂತೆ ಮಾಡಿದರು. ಅಂದಿನಿಂದ ಇಲ್ಲಿಯವರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೃಷ್ಣ ಮಠದೊಂದಿಗೆ ಯಾವುದೇ ಭಾಂದವ್ಯ ಹೊಂದಿಲ್ಲ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು