ಕೆಟ್ಟ ಸ್ಥಿತಿಯಲ್ಲಿ ಇವತ್ತು ದೇಶ ಇದೆ ; ಸಚಿವ ಸಂತೋಷ್ ಲಾಡ್.

ಧಾರವಾಡ: “ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ. ಆ ಬಗ್ಗೆ ಬಿಜೆಪಿಯವರು ಚರ್ಚೆ ಮಾಡ್ತಾರಾ?. ಪಹಲ್ಗಾಮ್, ಪುಲ್ವಾಮಾ ದಾಳಿ ಕುರಿತು ಕೇಳಬಾರದು ಎಂದು ಅವರು ಇಂಥ ಅಭಿಯಾನಗಳನ್ನು ತರುತ್ತಿದ್ದಾರೆ. ವಿಷಯಾಧಾರಿತ ಸಮಸ್ಯೆಗಳು ಜನರಿಗೆ ಗೊತ್ತಾಗಬಾರದೆಂಬುದು ಇವರ ಉದ್ದೇಶ” ಎಂದು ಸಚಿವ ಸಂತೋಷ್ ಲಾಡ್ ಟೀಕಿಸಿದರು.

“ಇವರ ಪ್ರಕಾರ ನಮ್ಮನ್ನು ಯಾವುದೇ ಬೇರೆ ದೇಶಕ್ಕೆ ಹೋಲಿಸಿ ನೋಡುವಂತಿಲ್ಲ. ಬೇರೆ ರಾಜ್ಯಕ್ಕೂ ಹೋಲಿಸಿ ನೋಡುವಂತಿಲ್ಲ. ನಮ್ಮ ದೇಶವೇ ಗ್ರೇಟ್, ನಮ್ಮ ಪ್ರಧಾನಿಯೇ ಗ್ರೇಟ್. ತುರ್ತು ಪರಿಸ್ಥಿತಿ ಈಗ ಪ್ರಸ್ತುತವೇ? ಚರ್ಚಿಸುವ ವಿಷಯವೇ? ಎಂದು ಅವರು ಕೇಳಿದರು. ಇದೇ ವೇಳೆ, ಈ ಬಾರಿಯ ದಸರಾವನ್ನು ಹೊಸ ಸಿಎಂ ಉದ್ಘಾಟನೆ ಮಾಡಲಿದ್ದಾರೆ ಎಂಬ ಆರ್.ಅಶೋಕ್ ಹೇಳಿಕೆಗೆ, “ಯಾರು ಸಿಎಂ ಆಗ್ತಾರೆ ಅಂತ ಅಶೋಕ್ ಅವರನ್ನೇ ಕೇಳಬೇಕು” ಎಂದರು.

“ಡಿಕ್ಟೇಟರ್ಶಿಪ್ ಕಾಂಗ್ರೆಸ್ ಪಕ್ಷದ ರಕ್ತ, ಡಿಎನ್ಎಯಲ್ಲೇ ಇದೆ” ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಶನಿವಾರ ವಾಗ್ದಾಳಿ ನಡೆಸಿದರು. ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ತುರ್ತು ಪರಿಸ್ಥಿತಿ ಕುರಿತ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
“ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಕಮ್ಯೂನಿಸ್ಟ್ ಪಾರ್ಟಿಯ ಸರ್ಕಾರ ಕಿತ್ತೊಗೆದರು. ಅಂಬೇಡ್ಕರ್ ಅವರನ್ನು ರಾಜಕೀಯವಾಗಿ ತುಳಿದ ಪಕ್ಷ ಕಾಂಗ್ರೆಸ್. ಕರುಣಾನಿಧಿಯವರನ್ನು ಒಳಗೆ ಹಾಕಿಸಿದರು. ಇಂದಿರಾ ಗಾಂಧಿ ಹಿಟ್ಲರ್ ಅವರಂತೆ ವರ್ತಿಸಿದರು. 50 ವರ್ಷಗಳ ಹಿಂದೆ ಕಾಂಗ್ರೆಸ್ ಪಾರ್ಟಿ ಹೇಗೆ ನಡೆದುಕೊಂಡಿತ್ತು ಎಂನ್ನುವುದನ್ನು ತಿಳಿಸುವುದೇ ಈ ಕಾರ್ಯಕ್ರಮದ ಉದ್ದೇಶ. ಜಾತ್ಯತೀತತೆ ನಮ್ಮ ರಕ್ತದಲ್ಲಿದೆ. ಬಸವಣ್ಣನವರ ಕಾಲದಲ್ಲೇ ಜಾತ್ಯತೀತತೆ ಇತ್ತು. ನಾವು ಕಾಂಗ್ರೆಸ್ ಪಕ್ಷದಿಂದ ಕಲಿಯಬೇಕಿಲ್ಲ” ಎಂದು ವಾಕ್ಸಮರ ನಡೆಸಿದರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!