ಕೋಟಿ ಕೊಟ್ರೂ ಸಾಕಾಗಲಿಲ್ಲ.. ವರದಕ್ಷಿಣೆ ಕಿರುಕುಳದಿಂದ ನವ ವಿವಾಹಿತೆ ಕ್ರಿಮಿನಾಶಕ ಸೇವಿಸಿ ಸಾ*ವು.

ತಮಿಳುನಾಡು : ತಮಿಳುನಾಡಿನ ತಿರುಪ್ಪೂರು ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳದಿಂದ ನವ ವಿವಾಹಿತೆ ಜೀವಕಳೆದುಕೊಂಡಿದ್ದಾಳೆ. ರಿಧಾನ್ಯಾ ಎಂಬ 27 ವರ್ಷದ ನವವಿವಾಹಿತೆ ಕಾರ್ ನಲ್ಲಿ ಕ್ರಿಮಿನಾಶಕ ಸೇವಿಸಿ ಸಾವನ್ನಪ್ಪಿದ್ದಾರೆ. ದೇವಸ್ಥಾನಕ್ಕೆ ಹೋಗುತ್ತೇನೆಂದು ಗಂಡನ ಮನೆಯಿಂದ ಕಾರ್ನಲ್ಲಿ ಹೊರಟ ರಿಧಾನ್ಯಾ ಕಾರ್ನಲ್ಲೇ ಕ್ರಿಮಿನಾಶಕ ಸೇವಿಸಿದ್ದಾರೆ.

ಈ ವರ್ಷದ ಏಪ್ರಿಲ್ನಲ್ಲಿ ಕವಿನ್ ಕುಮಾರ್ ಜೊತೆಗೆ ರಿಧಾನ್ಯಾ ವಿವಾಹ ನಡೆದಿತ್ತು. ಮದುವೆ ವೇಳೆ 70 ಲಕ್ಷ ರೂಪಾಯಿ ಮೌಲ್ಯದ ವೋಲ್ವೋ ಕಾರು, 800 ಗ್ರಾಂ ಚಿನ್ನವನ್ನು ವರದಕ್ಷಿಣೆ ಆಗಿ ರಿಧಾನ್ಯಾ ತಂದೆ ಅಣ್ಣಾದೊರೈ ಗಂಡನ ಮನೆಯವರಿಗೆ ನೀಡಿದ್ದರು. ಆದರೂ ಗಂಡನ ಮನೆಯಲ್ಲಿ ಇನ್ನೂ ಹೆಚ್ಚಿನ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದರು. ಈ ಮಾನಸಿಕ ಕಿರುಕುಳ ತಾಳಲಾಗದೇ ನವವಿವಾಹಿತೆ ಜೀವ ಕಳೆದುಕೊಂಡಿದ್ದಾರೆ.

ಜೀವ ತೆಗೆದುಕೊಳ್ಳುವುದಕ್ಕೂ ಮೊದಲು ರಿಧಾನ್ಯ ತನ್ನ ತಂದೆ ಅಣ್ಣಾದೊರೈಗೆ 8 ವಾಯ್ಸ್ ಮೆಸೇಜ್ ಕಳಿಸಿದ್ದರು. ಈ ವಾಯ್ಸ್ ಮೇಸೇಜ್ನಲ್ಲಿ ಗಂಡ ಹಾಗೂ ಅತ್ತೆ, ಮಾವ ಕೊಡುತ್ತಿದ್ದ ಕಿರುಕುಳನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ. ಜೀವ ಬಿಡುತ್ತಿರುವುದಕ್ಕೆ ಮಾಡಿಕೊಳ್ಳುತ್ತಿರುವುದಕ್ಕೆ ನನ್ನನ್ನು ಕ್ಷಮಿಸಿ. ಇದರ ಬಗ್ಗೆ ಯಾರಿಗೆ ಹೇಳಬೇಕೆಂದು ಗೊತ್ತಾಗುತ್ತಿಲ್ಲ. ನನ್ನ ಮಾತು ಕೇಳಿದವರು, ಜೀವನ ಇದೇ ರೀತಿ ಇರುತ್ತೆ, ಜೀವನದಲ್ಲಿ ಇವುಗಳ ಬಗ್ಗೆ ರಾಜೀ ಮಾಡಿಕೊಳ್ಳಬೇಕು ಎಂದು ಹೇಳುತ್ತಾರೆ.

ಅವರಿಗೆ ನನ್ನ ನೋವು ಅರ್ಥವಾಗಲ್ಲ. ನೀವು ನನ್ನ ಬಗ್ಗೆ ಅನುಮಾನ ಪಡಬಹುದು. ಆದರೇ, ನಾನು ಸುಳ್ಳು ಹೇಳುತ್ತಿಲ್ಲ. ನನ್ನ ಸುತ್ತ ಇರುವವರು ನಟಿಸುತ್ತಿದ್ದಾರೆ. ನಾನೇಕೆ ಮೌನವಾಗಿದ್ದೇನೆ ಎಂದು ನನಗೆ ಅರ್ಥವಾಗುತ್ತಿಲ್ಲ ಅಥವಾ ನಾನೇಕೆ ಈ ರೀತಿ ಇದ್ದೇನೆ. ನನ್ನ ಜೀವನ ಪೂರ್ತಿ ನಾನು ನಿಮಗೆ ಹೊರೆಯಾಗಲ್ಲ. ನಾನು ಈ ಭಾರಿ ಯಾವುದೇ ತಪ್ಪು ಮಾಡಲ್ಲ. ಈ ಜೀವನವನ್ನು ನಾನು ಇಷ್ಟಪಡಲ್ಲ. ಗಂಡ ಕವಿನ್ ಕುಮಾರ್ ದೈಹಿಕವಾಗಿ, ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾರೆ ಎಂದು ತಂದೆ ಅಣ್ಣಾದೊರೆೈಗೆ ಕಳಿಸಿದ ವಾಯ್ಸ್ ಮೇಸೇಜ್ಗಳಲ್ಲಿ ಇದೆ ಎಂದು ಹೇಳಲಾಗಿದೆ.

ಮಂಡಿಪಾಳ್ಯ ಬಳಿಯ ದೇವಸ್ಥಾನಕ್ಕೆ ಹೋಗುತ್ತೇನೆಂದು ಕಾರ್ನಲ್ಲಿ ರಿಧಾನ್ಯಾ ಹೊರಟಿದ್ದರು. ಬಳಿಕ ರಸ್ತೆ ಪಕ್ಕದಲ್ಲೇ ಕಾರ್ ನಿಲ್ಲಿಸಿ, ಕಾರ್ನಲ್ಲಿ ಕ್ರಿಮಿನಾಶಕ ಸೇವಿಸಿ ಜೀವ ಬಿಟ್ಟಿದ್ದಾರೆ. ಸ್ಥಳೀಯರು ರಸ್ತೆ ಪಕ್ಕ ಕಾರ್ ಬಹಳ ಹೊತ್ತು ನಿಂತಿರುವುದನ್ನು ನೋಡಿ, ಪೊಲೀಸರಿಗೆ ಮಾಹಿತಿ ನೀಡಿದ್ದರು. ಆಗ ಪೊಲೀಸರು ಬಂದು ಕಾರ್ ಅನ್ನು ಪರಿಶೀಲಿಸಿದಾಗ, ರಿಧಾನ್ಯಾ ಕ್ರಿಮಿನಾಶಕ ಸೇವಿಸಿರುವುದು ಬೆಳಕಿಗೆ ಬಂದಿದೆ.

ರಿಧಾನ್ಯಾ ಬಾಯಿಯಿಂದ ನೊರೆ ಬಂದಿದೆ. ಪೊಲೀಸರು ದೇಹವನ್ನ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈಗ ಪತಿ, ಅತ್ತೆ, ಮಾವನ ವಿರುದ್ಧ ವರದಕ್ಷಿಣೆ ಕಿರುಕುಳ ನೀಡಿದ ಆರೋಪದಡಿ ಬಿಎನ್ಎಸ್ ಕಾಯಿದೆಯ ಸೆಕ್ಷನ್ 85ರಡಿ ದೂರು ದಾಖಲಾಗಿದೆ. ದೂರಿನ ಆಧಾರದ ಮೇಲೆ ಪತಿ ಕವಿನ್ ಕುಮಾರ್, ಮಾವ ಈಶ್ವರ ಮೂರ್ತಿ, ಅತ್ತೆ ಚಿತ್ರಾದೇವಿಯನ್ನು ಪೊಲೀಸರು ಬಂಧಿಸಿದ್ದಾರೆ. ರಿಧಾನ್ಯಾ ತಂದೆ ಅಣ್ಣಾದೊರೈ ಗಾರ್ಮೆಂಟ್ಸ್ ಫ್ಯಾಕ್ಟರಿಯ ಮಾಲೀಕರು ಆಗಿದ್ದಾರೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!