ಕೋಟಿ ಕೊಟ್ರೂ ಸಾಕಾಗಲಿಲ್ಲ.. ವರದಕ್ಷಿಣೆ ಕಿರುಕುಳದಿಂದ ನವ ವಿವಾಹಿತೆ ಕ್ರಿಮಿನಾಶಕ ಸೇವಿಸಿ ಸಾ*ವು.

ತಮಿಳುನಾಡು : ತಮಿಳುನಾಡಿನ ತಿರುಪ್ಪೂರು ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳದಿಂದ ನವ ವಿವಾಹಿತೆ ಜೀವಕಳೆದುಕೊಂಡಿದ್ದಾಳೆ. ರಿಧಾನ್ಯಾ ಎಂಬ 27 ವರ್ಷದ ನವವಿವಾಹಿತೆ ಕಾರ್ ನಲ್ಲಿ ಕ್ರಿಮಿನಾಶಕ ಸೇವಿಸಿ ಸಾವನ್ನಪ್ಪಿದ್ದಾರೆ. ದೇವಸ್ಥಾನಕ್ಕೆ ಹೋಗುತ್ತೇನೆಂದು ಗಂಡನ ಮನೆಯಿಂದ ಕಾರ್ನಲ್ಲಿ ಹೊರಟ ರಿಧಾನ್ಯಾ ಕಾರ್ನಲ್ಲೇ ಕ್ರಿಮಿನಾಶಕ ಸೇವಿಸಿದ್ದಾರೆ.

ಈ ವರ್ಷದ ಏಪ್ರಿಲ್ನಲ್ಲಿ ಕವಿನ್ ಕುಮಾರ್ ಜೊತೆಗೆ ರಿಧಾನ್ಯಾ ವಿವಾಹ ನಡೆದಿತ್ತು. ಮದುವೆ ವೇಳೆ 70 ಲಕ್ಷ ರೂಪಾಯಿ ಮೌಲ್ಯದ ವೋಲ್ವೋ ಕಾರು, 800 ಗ್ರಾಂ ಚಿನ್ನವನ್ನು ವರದಕ್ಷಿಣೆ ಆಗಿ ರಿಧಾನ್ಯಾ ತಂದೆ ಅಣ್ಣಾದೊರೈ ಗಂಡನ ಮನೆಯವರಿಗೆ ನೀಡಿದ್ದರು. ಆದರೂ ಗಂಡನ ಮನೆಯಲ್ಲಿ ಇನ್ನೂ ಹೆಚ್ಚಿನ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದರು. ಈ ಮಾನಸಿಕ ಕಿರುಕುಳ ತಾಳಲಾಗದೇ ನವವಿವಾಹಿತೆ ಜೀವ ಕಳೆದುಕೊಂಡಿದ್ದಾರೆ.

ಜೀವ ತೆಗೆದುಕೊಳ್ಳುವುದಕ್ಕೂ ಮೊದಲು ರಿಧಾನ್ಯ ತನ್ನ ತಂದೆ ಅಣ್ಣಾದೊರೈಗೆ 8 ವಾಯ್ಸ್ ಮೆಸೇಜ್ ಕಳಿಸಿದ್ದರು. ಈ ವಾಯ್ಸ್ ಮೇಸೇಜ್ನಲ್ಲಿ ಗಂಡ ಹಾಗೂ ಅತ್ತೆ, ಮಾವ ಕೊಡುತ್ತಿದ್ದ ಕಿರುಕುಳನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ. ಜೀವ ಬಿಡುತ್ತಿರುವುದಕ್ಕೆ ಮಾಡಿಕೊಳ್ಳುತ್ತಿರುವುದಕ್ಕೆ ನನ್ನನ್ನು ಕ್ಷಮಿಸಿ. ಇದರ ಬಗ್ಗೆ ಯಾರಿಗೆ ಹೇಳಬೇಕೆಂದು ಗೊತ್ತಾಗುತ್ತಿಲ್ಲ. ನನ್ನ ಮಾತು ಕೇಳಿದವರು, ಜೀವನ ಇದೇ ರೀತಿ ಇರುತ್ತೆ, ಜೀವನದಲ್ಲಿ ಇವುಗಳ ಬಗ್ಗೆ ರಾಜೀ ಮಾಡಿಕೊಳ್ಳಬೇಕು ಎಂದು ಹೇಳುತ್ತಾರೆ.

ಅವರಿಗೆ ನನ್ನ ನೋವು ಅರ್ಥವಾಗಲ್ಲ. ನೀವು ನನ್ನ ಬಗ್ಗೆ ಅನುಮಾನ ಪಡಬಹುದು. ಆದರೇ, ನಾನು ಸುಳ್ಳು ಹೇಳುತ್ತಿಲ್ಲ. ನನ್ನ ಸುತ್ತ ಇರುವವರು ನಟಿಸುತ್ತಿದ್ದಾರೆ. ನಾನೇಕೆ ಮೌನವಾಗಿದ್ದೇನೆ ಎಂದು ನನಗೆ ಅರ್ಥವಾಗುತ್ತಿಲ್ಲ ಅಥವಾ ನಾನೇಕೆ ಈ ರೀತಿ ಇದ್ದೇನೆ. ನನ್ನ ಜೀವನ ಪೂರ್ತಿ ನಾನು ನಿಮಗೆ ಹೊರೆಯಾಗಲ್ಲ. ನಾನು ಈ ಭಾರಿ ಯಾವುದೇ ತಪ್ಪು ಮಾಡಲ್ಲ. ಈ ಜೀವನವನ್ನು ನಾನು ಇಷ್ಟಪಡಲ್ಲ. ಗಂಡ ಕವಿನ್ ಕುಮಾರ್ ದೈಹಿಕವಾಗಿ, ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾರೆ ಎಂದು ತಂದೆ ಅಣ್ಣಾದೊರೆೈಗೆ ಕಳಿಸಿದ ವಾಯ್ಸ್ ಮೇಸೇಜ್ಗಳಲ್ಲಿ ಇದೆ ಎಂದು ಹೇಳಲಾಗಿದೆ.

ಮಂಡಿಪಾಳ್ಯ ಬಳಿಯ ದೇವಸ್ಥಾನಕ್ಕೆ ಹೋಗುತ್ತೇನೆಂದು ಕಾರ್ನಲ್ಲಿ ರಿಧಾನ್ಯಾ ಹೊರಟಿದ್ದರು. ಬಳಿಕ ರಸ್ತೆ ಪಕ್ಕದಲ್ಲೇ ಕಾರ್ ನಿಲ್ಲಿಸಿ, ಕಾರ್ನಲ್ಲಿ ಕ್ರಿಮಿನಾಶಕ ಸೇವಿಸಿ ಜೀವ ಬಿಟ್ಟಿದ್ದಾರೆ. ಸ್ಥಳೀಯರು ರಸ್ತೆ ಪಕ್ಕ ಕಾರ್ ಬಹಳ ಹೊತ್ತು ನಿಂತಿರುವುದನ್ನು ನೋಡಿ, ಪೊಲೀಸರಿಗೆ ಮಾಹಿತಿ ನೀಡಿದ್ದರು. ಆಗ ಪೊಲೀಸರು ಬಂದು ಕಾರ್ ಅನ್ನು ಪರಿಶೀಲಿಸಿದಾಗ, ರಿಧಾನ್ಯಾ ಕ್ರಿಮಿನಾಶಕ ಸೇವಿಸಿರುವುದು ಬೆಳಕಿಗೆ ಬಂದಿದೆ.

ರಿಧಾನ್ಯಾ ಬಾಯಿಯಿಂದ ನೊರೆ ಬಂದಿದೆ. ಪೊಲೀಸರು ದೇಹವನ್ನ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈಗ ಪತಿ, ಅತ್ತೆ, ಮಾವನ ವಿರುದ್ಧ ವರದಕ್ಷಿಣೆ ಕಿರುಕುಳ ನೀಡಿದ ಆರೋಪದಡಿ ಬಿಎನ್ಎಸ್ ಕಾಯಿದೆಯ ಸೆಕ್ಷನ್ 85ರಡಿ ದೂರು ದಾಖಲಾಗಿದೆ. ದೂರಿನ ಆಧಾರದ ಮೇಲೆ ಪತಿ ಕವಿನ್ ಕುಮಾರ್, ಮಾವ ಈಶ್ವರ ಮೂರ್ತಿ, ಅತ್ತೆ ಚಿತ್ರಾದೇವಿಯನ್ನು ಪೊಲೀಸರು ಬಂಧಿಸಿದ್ದಾರೆ. ರಿಧಾನ್ಯಾ ತಂದೆ ಅಣ್ಣಾದೊರೈ ಗಾರ್ಮೆಂಟ್ಸ್ ಫ್ಯಾಕ್ಟರಿಯ ಮಾಲೀಕರು ಆಗಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!