4ನೇ ಬಾರಿಗೆ ಸಿಎಂ ಸಿದ್ದರಾಮಯ್ಯ KRSಗೆ ಬಾಗಿನ ಸಮರ್ಪಣೆ..

ಮಂಡ್ಯ: 93 ವರ್ಷಗಳ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಜೂನ್ ತಿಂಗಳಲ್ಲಿ ಕೆಆರ್ಎಸ್ (ಕೃಷ್ಣರಾಜಸಾಗರ) ಡ್ಯಾಂ ಸಂಪೂರ್ಣ ಭರ್ತಿ ಆಗಿದ್ದು ಸಿಎಂ ಸಿದ್ದರಾಮಯ್ಯ ಅವರು ಇಂದು ಬಾಗಿನ ಸಮರ್ಪಣೆ ಮಾಡಿದರು. ಇದೇ ವೇಳೆ ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವರಾದ ಎನ್ ಚೆಲುವರಾಯಸ್ವಾಮಿ ಹಾಗೂ ಹೆಚ್.ಸಿ ಮಹದೇವಪ್ಪ ಸೇರಿ ಇತರೆ ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.


ಸಿಎಂ ಸಿದ್ದರಾಮಯ್ಯ ಅವರು ಅಭಿಜಿತ್ ಶುಭ ಮುಹೂರ್ತದಲ್ಲಿ ಕಾವೇರಿ ಮಾತೆಗೆ ಬಾಗಿನ ಅರ್ಪಣೆ ಮಾಡಿದರು. ವೈದಿಕ ಭಾನುಪ್ರಕಾಶ್ ಶರ್ಮಾ ನೇತೃತ್ವದಲ್ಲಿ ಬಾಗಿನ ಪೂಜಾ ಕೈಂಕರ್ಯಗಳು ನೆರವೇರಿದವು. ಕೆಆರ್ಎಸ್ ಜಲಾಶಯಕ್ಕೆ 4ನೇ ಬಾರಿಗೆ ಸಿಎಂ ಸಿದ್ದರಾಮಯ್ಯ ಅವರು ಬಾಗಿನ ಅರ್ಪಿಸಿ ಖುಷಿ ಪಟ್ಟರು. ನಂತರ ಕಾವೇರಿ ಮಾತೆಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿದರು. ಇದೇ ವೇಳೆ ನಾಡಿನ ಜನರಿಗೆ ಒಳ್ಳೆಯದಾಗಲಿ ಎಂದು ತಾಯಿ ಕಾವೇರಿ ಬಳಿ ಪ್ರಾರ್ಥನೆ ಮಾಡಿದರು.

ದಾಖಲೆ ಬರೆದ ಸಿಎಂ
ಕೆಆರ್ಎಸ್ ಜಲಾಶಯ ಇತಿಹಾಸದಲ್ಲೇ ಇದೇ ಮೊಟ್ಟ ಮೊದಲ ಬಾರಿಗೆ ಜೂನ್ನಲ್ಲಿ ಸಂಪೂರ್ಣವಾಗಿ ಭರ್ತಿಯಾಗಿದೆ. ಜೂನ್ ತಿಂಗಳಲ್ಲೇ ಕೆಆರ್ಎಸ್ಗೆ ಬಾಗಿನ ಅರ್ಪಿಸಿದ ಕರ್ನಾಟಕದ ಮೊಟ್ಟ ಮೊದಲ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಗಿದ್ದಾರೆ. 1979 ರಂದು ಡಿ ದೇವರಾಜ ಅರಸು ಅವರ ಕಾಲದಲ್ಲಿ ಬಾಗಿನ ಕಾರ್ಯಕ್ರಮ ಆರಂಭವಾದರೂ ಈ ಹಿಂದಿನ ಯಾವ ಮುಖ್ಯಮಂತ್ರಿ ಕೂಡ ಜೂನ್ನಲ್ಲಿ ಬಾಗಿನ ಅರ್ಪಿಸಿರಲಿಲ್ಲ. ಆದರೆ ಈಗ ಸಿಎಂ ಸಿದ್ದರಾಮಯ್ಯ ಅವರು ಜೂನ್ನಲ್ಲೇ ಕೆಆರ್ಎಸ್ಗೆ ಬಾಗಿನ ಸಮರ್ಪಣೆ ಮಾಡಿ ನೂತನ ದಾಖಲೆ ಬರೆದಿದ್ದಾರೆ.

ಕೆಆರ್ಎಸ್ ಬಾಗಿನ ಸಮರ್ಪಣೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಕೆಆರ್ಎಸ್ ಜಲಾಶಯವನ್ನು ಬಣ್ಣ ಬಣ್ಣದ ಹೂವುಗಳಿಂದ ಶೃಂಗಾರ ಮಾಡಲಾಗಿತ್ತು. ಅಣೆಕಟ್ಟೆ ಗೋಡೆಗೆ ಸುಣ್ಣ, ಬಣ್ಣ ಬಳೆದಿದ್ದು ಎಲ್ಲೆಡೆ ಕನ್ನಡ ಬಾವುಟಗಳು ರಾರಾಜಿಸುತ್ತಿದ್ದವು. ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವರಾದ ಎನ್ ಚಲುವರಾಯಸ್ವಾಮಿ, ಹೆಚ್. ಸಿ ಮಹದೇವಪ್ಪ, ಕೆ ವೆಂಕಟೇಶ್, ಎನ್.ಎಸ್ ಬೋಸರಾಜು ಹಾಗೂ ಸ್ಥಳೀಯ ಶಾಸಕರು ಇದ್ದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!