ಧರ್ಮ ದರ್ಶನದ ಸಾಲಿನಲ್ಲಿ ಮೆಟ್ಟಿಲು ಹತ್ತಿ ಬರುವ ಭಕ್ತರಿಗೆ ದರ್ಶನಕ್ಕೆ ಅವಕಾಶ.

ಮೈಸೂರು : ಎರಡನೇ ಆಷಾಢ ಶುಕ್ರವಾರದಿಂದ ಚಾಮುಂಡಿ ಬೆಟ್ಟದಲ್ಲಿ ಮೆಟ್ಟಿಲು ಹತ್ತಿ ಬರುವ ಭಕ್ತರಿಗೆ ಧರ್ಮ ದರ್ಶನದ ಸರತಿ ಸಾಲಿನಲ್ಲಿ ನಿಂತು ತಾಯಿ ಚಾಮುಂಡೇಶ್ವರಿ ದರ್ಶನ ಪಡೆಯಲು ಅವಕಾಶ ನೀಡಲಾಗಿದೆ.

ಈ ಕುರಿತು ಶ್ರೀ ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರ ಪ್ರಕಟಣೆ ಹೊರಡಿಸಿದ್ದು, ಆಷಾಢ ಮಾಸದಲ್ಲಿ ಚಾಮುಂಡಿ‌ಬೆಟ್ಟಕ್ಕೆ ಮೆಟ್ಟಿಲು ಮೂಲಕ ಹತ್ತಿ ಬರುವ ಭಕ್ತರ ದರ್ಶನಕ್ಕೆ ಸಂಬಂಧಿಸಿದಂತೆ ಮೊದಲ ಆಷಾಡ ಶುಕ್ರವಾರ ಮೆಟ್ಟಿಲುಗಳ ಮೂಲಕ ನಿರೀಕ್ಷೆಗೂ ಮೀರಿ ಹೆಚ್ಚು ಜನರ ಬಂದ ಕಾರಣ ಜನಸಂದಣಿಯಿಂದಾಗಿ ದೇವರ ದರ್ಶನ ಮೆಟ್ಟಿಲು ಹತ್ತಿ ಬಂದ ಭಕ್ತರಿಗೆ ತಡವಾಗಿತ್ತು. ಆದರೆ ಧರ್ಮದರ್ಶನ ಅಥವಾ ಟಿಕೆಟ್ ಪಡೆದು ದರ್ಶನ ಪಡೆದವರು ತ್ವರಿತಗತಿಯಲ್ಲಿ ದೇವಿಯ ದರ್ಶನ ಪಡೆದು ವಾಪಸ್ಸಾದರು.

ಈ ಹಿನ್ನೆಲೆಯಲ್ಲಿ ಮೆಟ್ಟಿಲು ಹತ್ತಿ ಬರುವ ಭಕ್ತರಿಗೆ ಆಗಬಹುದಾದ ಅನಾನೂಕೂಲವನ್ನು ತಪ್ಪಿಸಲು ಜಿಲ್ಲಾಡಳಿತ ಚಾಮುಂಡಿ ಬೆಟ್ಟದಲ್ಲಿ ಸಾಕಷ್ಟು ಸುಧಾರಿತ ಕ್ರಮಗಳನ್ನು ತೆಗೆದುಕೊಂಡಿದೆ. ಮುಂದಿನ ಎರಡನೇ ಆಷಾಢ ಹಾಗೂ ಉಳಿದ ಆಷಾಢ ಮಾಸದ ಶುಕ್ರವಾರಗಳಲ್ಲಿ ಮೆಟ್ಟಿಲು ಹತ್ತಿ ಬಂದ ಭಕ್ತರು ಧರ್ಮ ದರ್ಶನದ ಸರತಿ ಸಾಲಿನಲ್ಲಿ ನಿಂತು ದರ್ಶನ ಮಾಡಬಹುದಾಗಿದೆ.

ಭಕ್ತರಿಗೆ ನಾಡದೇವಿಯ ಸುಗಮ ದರ್ಶನಕ್ಕಾಗಿ ಲಲಿತಮಹಲ್ ಪ್ಯಾಲೇಸ್ ಆವರಣದಿಂದ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದ್ದು ಭಕ್ತಾಧಿಗಳು ಉಚಿತ ಬಸ್ ಸೇವೆ ಪಡೆದು ಕಡಿಮೆ ಸಮಯದಲ್ಲಿ ಸುಗಮವಾಗಿ ದೇವರ ದರ್ಶನ ಪಡೆದುಕೊಳ್ಳಬಹುದಾಗಿದೆ. ಆದುದರಿಂದ ಭಕ್ತಾಧಿಗಳು ಉಚಿತ ಬಸ್ ಸೇವೆಯ ಸದುಪಯೋಗವನ್ನು ಮಾಡಿಕೊಂಡು ದೇವರ ದರ್ಶನ ಮಾಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

 

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!