ಡ್ರಗ್ ವಿಚಾರದಲ್ಲಿ ಪೋಷಕರೇ ಮಕ್ಕಳ ಮೇಲೆ ಪೊಲೀಸರಿಗೆ ದೂರು!

ಮಂಗಳೂರು : ಮಕ್ಕಳು ಡ್ರಗ್ ಅಡಿಕ್ಟ್ ಆಗಿದ್ದಾರೆಂದು ಪೋಷಕರೇ ಪೊಲೀಸರಿಗೆ ದೂರು ನೀಡಿದ ಅಚ್ಚರಿಯ ವಿದ್ಯಮಾನ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ. ಆದರೆ, ಇದರ ಪರಿಣಾಮ ಮಾತ್ರ ಒಳಿತೇ ಆಗಿದೆ. ನೂರಾರು ವಿದ್ಯಾರ್ಥಿಗಳಿಗೆ, ಮಕ್ಕಳಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಜಾಲವೇ ಪೊಲೀಸ್ ಬಲೆಗೆ ಬಿದ್ದಿದೆ.

ಪೋಷಕರ ದೂರು ಆಧರಿಸಿ ಕಾರ್ಯಾಚರಣೆ ನಡೆಸಿದ ಮಂಗಳೂರು ಸೆನ್ ಕ್ರೈಮ್ ಠಾಣೆ ಪೊಲೀಸರು ಡ್ರಗ್ಸ್ ಜಾಲವೊಂದನ್ನು ಬಯಲಿಗಳೆದಿದ್ದಾರೆ.
ಪೋಷಕರ ದೂರು ಆಧರಿಸಿ ಮಂಗಳೂರಿನ ಪಡುಶೆಡ್ಡೆ ಗ್ರಾಮದ ಹಾಲಾಡಿ ಎಂಬಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, 200ಕ್ಕೂ ಹೆಚ್ಚು ವಿದ್ಯಾರ್ಥಿ, ಉದ್ಯೋಗಿಗಳಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ಮಂಗಳೂರಿನ ತುಷಾರ್ (21), ಧನ್ವಿ ಶೆಟ್ಟಿ (20), ಸಾಗರ್ ಕರ್ಕೇರಾ (19), ವಿಕಾಸ್ ಥಾಪ (23), ವಿಘ್ನೇಶ್ ಕಾಮತ್ (24) ಬಂಧಿತರು. ಆರೋಪಿಗಳು ಮಾದಕ ವಸ್ತುಗಳನ್ನು ಮಾರಾಟ ಮಾಡಲು ತಯಾರಿ ನಡೆಸುತ್ತಿದ್ದಾಗ ಪೊಲೀಸರಿಗೆ ಸಿಕ್ಕಿಬಿದ್ದಿದ್ದು, ಒಟ್ಟು 5.20 ಲಕ್ಷ ರೂ. ಮೌಲ್ಯದ ಗಾಂಜಾ ವಶಪಡಿಸಿಕೊಳ್ಳಲಾಗಿದೆ.

ತುಷಾರ್ (21)

ಧನ್ವಿ ಶೆಟ್ಟಿ (20)

ಸಾಗರ್ ಕರ್ಕೇರಾ (19)

ವಿಕಾಸ್ ಥಾಪ (23)

ವಿಘ್ನೇಶ್ ಕಾಮತ್ (24)

ಆರೋಪಿಗಳು ಗಾಂಜಾವನ್ನು ಚಿಕ್ಕ ಚಿಕ್ಕ ಪ್ಯಾಕೆಟ್ ಮಾಡಿ ಮಂಗಳೂರು ನಗರದಲ್ಲಿ ಮಾರಾಟ ಮಾಡುತ್ತಿದ್ದರು. ಪ್ಯಾಕೆಟ್ಗೆ 1000 ರೂ.ನಂತೆ ವಿದ್ಯಾರ್ಥಿಗಳಿಗೆ, ಉದ್ಯೋಗಿಗಳಿಗೆ ಮಾರಾಟ ಮಾಡುತ್ತಿದ್ದರು ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಆರೋಪಿಗಳಿಗೆ ಗಾಂಜಾ ಪೂರೈಕೆಯಾಗಿದ್ದು ಎಲ್ಲಿಂದ ಎಂಬ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಎರಡು ದಿನಗಳ ಹಿಂದೆ ಇಬ್ಬರು ಪೋಷಕರು ಬಂದು ತಮ್ಮ ಮಕ್ಕಳು ಡ್ರಗ್ಸ್ ಅಡಿಕ್ಟ್ ಆಗಿರುವ ಬಗ್ಗೆ ಹೇಳಿಕೊಂಡಿದ್ದು, ದೂರು ನೀಡಿದ್ದರು. ದೂರಿನ ಬಗ್ಗೆ ಕೂಲಂಕಷ ತನಿಖೆಗೆ ತಂಡ ರಚಿಸಿದ್ದೆವು. ಅದರಂತೆ, ಕಾರ್ಯಾಚರಣೆ ನಡೆಸಿ ಡ್ರಗ್ಸ್ ಪೂರೈಕೆ ಜಾಲದ ಐವರನ್ನು ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ.ಸದ್ಯ ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಲಾಗಿದೆ. ಇನ್ನು ಮುಂದೆ ಅವರು ಡ್ರಗ್ಸ್ ಪೂರೈಕೆ ಮಾಡಲು ಆಗದು. ಒಬ್ಬರು ಪೋಷಕರು ಬಂದು ದೂರು ಕೊಟ್ಟಿದದರಿಂದ 200 ಜನರಿಗೆ ಡ್ರಗ್ಸ್ ಪೂರೈಕೆಯಾಗುತ್ತಿದ್ದುದನ್ನು ತಡೆಯವುದು ಸಾಧ್ಯವಾಗಿದೆ. ಅದೇ ರೀತಿ ಹತ್ತು ಜನ ಬಂದು ದೂರು ಕೊಟ್ರೆ 2 ಸಾವಿರ ಜನರಿಗೆ ಗಾಂಜಾ ಪೂರೈಕೆ ಮಾಡದಂತೆ ಪೊಲೀಸರು ಕ್ರಮ ಕೈಗೊಳ್ಳಬಹುದು ಎಂದು ಅವರು ಹೇಳಿದ್ದಾರೆ.

ಸಾರ್ವಜನಿಕರು ಖಚಿತ ಮಾಹಿತಿ ಕೊಟ್ಟರೆ ಮಂಗಳೂರಿನಲ್ಲಿ ಎಲ್ಲಿಯೂ ಸಹ ಡ್ರಗ್ಸ್ ಸಿಗದಂತೆ ಮಾಡಬಹುದು. ಸಾರ್ವಜನಿಕರು ಪೊಲೀಸರೊಂದಿಗೆ ಸಹಕರಿಸಬೇಕು. ಯಾರೇ ಡ್ರಗ್ಸ್ ಅಡಿಕ್ಟ್ ಆಗಿದದರ ಅವರನ್ನು ಸಂತ್ರಸ್ತರು ಎಂದು ಪರಿಗಣಿಸುತ್ತೇವೆ. ಅವರಿಗೆ ಪೂರೈಕೆ ಮಾಡುತ್ತಿದ್ದವರನ್ನು ಬಂಧಿಸಿ ಜೈಲಿಗೆ ಕಳುಹಿಸುತ್ತೇವೆ ಎಂದು ಪೊಲೀಸ್ ಆಯುಕ್ತರು ಭರವಸೆ ನೀಡಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!